AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶ್ ನನ್ನ ಸ್ನೇಹಿತ’: ದುಬೈನಲ್ಲಿ ಕೂಗಿ ಹೇಳಿದ ಶಾರುಖ್ ಖಾನ್; ವಿಡಿಯೋ ವೈರಲ್

ನಟ ಯಶ್ ಅವರ ಬೆಳವಣಿಗೆ ಸಣ್ಣದಲ್ಲ. ವಿಶ್ವಮಟ್ಟದಲ್ಲಿ ಅವರು ಖ್ಯಾತಿ ಪಡೆದಿದ್ದಾರೆ. ಬಾಲಿವುಡ್ ನಟ ಶಾರುಖ್ ಖಾನ್ ಅವರು ‘ಯಶ್​ ನನ್ನ ಗೆಳಯ’ ಎಂದು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಒಂದು ವಿಡಿಯೋ ವೈರಲ್​ ಆಗಿದೆ. ದುಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರು ಈ ಮಾತು ಹೇಳಿದ್ದಾರೆ.

‘ಯಶ್ ನನ್ನ ಸ್ನೇಹಿತ’: ದುಬೈನಲ್ಲಿ ಕೂಗಿ ಹೇಳಿದ ಶಾರುಖ್ ಖಾನ್; ವಿಡಿಯೋ ವೈರಲ್
Shah Rukh Khan, Yash
ಮದನ್​ ಕುಮಾರ್​
|

Updated on: Jan 28, 2025 | 7:14 PM

Share

ಒಂದು ಕಾಲದಲ್ಲಿ ಯಶ್ ಹೆಸರು ಕನ್ನಡ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿತ್ತು. ಯಾವಾಗ ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್: ಚಾಪ್ಟರ್​ 2’ ಸಿನಿಮಾಗಳು ಸೂಪರ್​ ಹಿಟ್​ ಆದವೋ ಆಗ ಯಶ್​ ಅವರು ಪ್ಯಾನ್ ಇಂಡಿಯಾ ನಟನಾಗಿ ಹೊರಹೊಮ್ಮಿದರು. ಈಗ ಬಾಲಿವುಡ್​ನ ಟಾಪ್​ ನಟರೆಲ್ಲ ಯಶ್ ಬಗ್ಗೆ ಮಾತನಾಡುತ್ತಿದ್ದಾರೆ. ಸ್ಟಾರ್​ ನಟ ಶಾರುಖ್ ಖಾನ್ ಅವರು ಕೂಡ ತಮ್ಮ ಅಭಿಮಾನಿಗಳ ಎದುರಿನಲ್ಲಿ ಯಶ್ ಕುರಿತು ಮಾತಾಡಿದ್ದಾರೆ. ಯಶ್ ಅವರ ಡ್ಯಾನ್ಸ್ ಬಗ್ಗೆಯೂ ಅವರು ಹೊಗಳಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಶಾರುಖ್ ಖಾನ್ ಅವರಿಗೆ ದುಬೈನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಅವರು ಮನರಂಜನೆ ನೀಡಿದ್ದಾರೆ. ನೆರೆದಿದ್ದ ಅಂದಾಜು 80 ಸಾವಿರ ಅಭಿಮಾನಿಗಳ ಎದುರಿನಲ್ಲಿ ದಕ್ಷಿಣ ಭಾರತದ ಫ್ಯಾನ್ಸ್ ಬಗ್ಗೆಯೂ ಅವರು ಮಾತನಾಡಿದರು. ಕರ್ನಾಟಕ, ಕೇರಳ, ಆಂಧ್ರ, ತಮಿಳುನಾಡಿನ ಅಭಿಮಾನಿಗಳನ್ನು ಉದ್ದೇಶಿಸಿ ಅವರು ಈ ಸಂದೇಶ ನೀಡಿದರು.

‘ದಕ್ಷಿಣ ಭಾರತದ ನನ್ನ ಅಭಿಮಾನಿಗಳೇ.. ನನಗೆ ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರ, ತಮಿಳುನಾಡಿನಲ್ಲಿ ಸ್ನೇಹಿತರು ಇದ್ದಾರೆ. ಅಲ್ಲು ಅರ್ಜುನ್, ಪ್ರಭಾಸ್, ರಾಮ್ ಚರಣ್, ಯಶ್, ಮಹೇಶ್ ಬಾಬು, ದಳಪತಿ ವಿಜಯ್, ರಜನಿಕಾಂತ್, ಕಮಲ್ ಹಾಸನ್ ನನ್ನ ಸ್ನೇಹಿತರು. ಅವರಿಗೆಲ್ಲ ನಾನು ಒಂದು ಮನವಿ ಮಾಡುತ್ತೇನೆ. ಅವರೆಲ್ಲ ತುಂಬ ಫಾಸ್ಟ್​ ಆಗಿ ಡ್ಯಾನ್ಸ್ ಮಾಡುವುದು ನಿಲ್ಲಿಸಬೇಕು. ಅವರಿಗೆ ಸರಿಸಮನಾಗಿ ಡ್ಯಾನ್ಸ್ ಮಾಡಲು ನನಗೆ ಕಷ್ಟ ಆಗುತ್ತದೆ’ ಎಂದು ಶಾರುಖ್ ಖಾನ್ ಹೇಳಿದ್ದಾರೆ.

ಇದನ್ನೂ ಓದಿ: ಯಶ್​ಗೆ ಇನ್​ಸ್ಟಾಗ್ರಾಮ್​ನಲ್ಲಿ 14 ಮಿಲಿಯನ್ ಫಾಲೋವರ್ಸ್​

ಯಶ್ ಅವರು ಈಗ ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಗೀತು ಮೋಹನ್​ ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಧೂಳೆಬ್ಬಿಸಿದೆ. ಶಾರುಖ್ ಖಾನ್ ಅವರು ‘ಕಿಂಗ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಮನೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ