Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?

ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ವೇದ’, ‘ಭೈರತಿ ರಣಗಲ್’ ರೀತಿಯು ಸಿನಿಮಾಗಳು ‘ಗೀತಾ ಪಿಕ್ಚರ್ಸ್’ ಮೂಲಕ ಮೂಡಿ ಬಂದಿದೆ. ಈಗ ಈ ಬ್ಯಾನರ್ ಅಡಿಯಲ್ಲಿ ನಾಲ್ಕನೇ ಸಿನಿಮಾ ಘೋಷಣೆ ಆಗಿದೆ.

‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?
‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?
Follow us
ರಾಜೇಶ್ ದುಗ್ಗುಮನೆ
|

Updated on:Dec 06, 2024 | 1:17 PM

‘ಶಾಖಾಹಾರಿ’ ಸ್ಯಾಂಡಲ್​ವುಡ್​ ಪ್ರೇಕ್ಷಕರಿಗೆ ಸಖತ್ ಇಷ್ಟ ಆದ ಚಿತ್ರ. ಈ ಸಿನಿಮಾ ಸಸ್ಪೆನ್ಸ್ ಶೈಲಿಯಲ್ಲಿ ಮೂಡಿ ಬಂದಿತ್ತು. ಸಿನಿಮಾ ನೋಡಿದ ಪ್ರೇಕ್ಷಕರು ಚಿತ್ರವನ್ನು ಕೊಂಡಾಡಿದ್ದರು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಸಂದೀಪ್ ಸುಕಂದ್ ಅವರು. ಅವರ ಬಿಗಿಯಾದ ನಿರ್ದೇಶನ ಚಿತ್ರವನ್ನು ಸುಂದರಗೊಳಿಸಿತ್ತು. ಈಗ ‘ಶಾಖಾಹಾರಿ’ ಸಿನಿಮಾ ನಿರ್ದೇಶಕನ ಜೊತೆ ಗೀತಾ ಶಿವರಾಜ್​ಕುಮಾರ್ ಅವರು ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಹೀರೋ ಯಾರು ಎಂಬುದು ಕೂಡ ರಿವೀಲ್ ಆಗಿದೆ.

ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ವೇದ’, ‘ಭೈರತಿ ರಣಗಲ್’ ರೀತಿಯು ಸಿನಿಮಾಗಳು ‘ಗೀತಾ ಪಿಕ್ಚರ್ಸ್’ ಮೂಲಕ ಮೂಡಿ ಬಂದಿದೆ. ಈಗ ಈ ಬ್ಯಾನರ್ ಅಡಿಯಲ್ಲಿ ನಾಲ್ಕನೇ ಸಿನಿಮಾ ಘೋಷಣೆ ಆಗಿದೆ. ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಇರುವ ಈ ಚಿತ್ರಕ್ಕೆ ಸಂದೀಪ್ ನಿರ್ದೇಶನ ಇದೆ.

ಹಾಗಾದರೆ, ಈ ಚಿತ್ರಕ್ಕೆ ಹೀರೋ ಯಾರು? ಅದಕ್ಕೂ ಉತ್ತರ ಇದೆ. ಹಿರಿಯ ನಟ ರಾಮ್​ಕುಮಾರ್ ಅವರ ಪುತ್ರ ಧೀರೇನ್ ರಾಮ್​ಕುಮಾರ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಮೊದಲು ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರು ಮತ್ತೊಂದು ಚಿತ್ರದಲ್ಲಿ ನಟಿಸಲು ರೆಡಿ ಆಗಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: Shakhahaari Review: ‘ಶಾಖಾಹಾರಿ’ ಸಿನಿಮಾದಲ್ಲಿ ಹಲವು ಟ್ವಿಸ್ಟ್​; ರಂಗಾಯಣ ರಘು ಬೆಸ್ಟ್​

‘ಶಾಖಾಹಾರಿ’ ಚಿತ್ರಮಂದಿರದಲ್ಲಿ ರಿಲೀಸ್ ಆದಾಗ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಆ ಬಳಿಕ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್ ಮಾಡಲಾಯಿತು. ಒಟಿಟಿಯಲ್ಲಿ ನೋಡಿದ ಅನೇಕರು ಈ ಚಿತ್ರವನ್ನು ಹೊಗಳಿದ್ದಾರೆ. ರಂಗಾಯಣ ರಘು ಅವರ ನಟನೆಯನ್ನು ಜನರು ಕೊಂಡಾಡಿದರು. ಈಗ ಧೀರೇನ್​ಗೆ ಸಂದೀಪ್ ಅವರು ನಿರ್ದೇಶನ ಮಾಡುತ್ತಿರುವುದು ಯಾವ ರೀತಿಯ ಸಿನಿಮಾ ಎಂಬ ಕುತೂಹಲವೂ ಇದೆ.

ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಮಾಡಿದ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15ರಂದು ತೆರೆಗೆ ಬಂತು. ಈ ಚಿತ್ರಕ್ಕೆ ನರ್ತನ್ ನಿರ್ದೇಶನ ಇದೆ. ಈ ಚಿತ್ರ ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:58 am, Fri, 6 December 24

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್