AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?

ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ವೇದ’, ‘ಭೈರತಿ ರಣಗಲ್’ ರೀತಿಯು ಸಿನಿಮಾಗಳು ‘ಗೀತಾ ಪಿಕ್ಚರ್ಸ್’ ಮೂಲಕ ಮೂಡಿ ಬಂದಿದೆ. ಈಗ ಈ ಬ್ಯಾನರ್ ಅಡಿಯಲ್ಲಿ ನಾಲ್ಕನೇ ಸಿನಿಮಾ ಘೋಷಣೆ ಆಗಿದೆ.

‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?
‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?
ರಾಜೇಶ್ ದುಗ್ಗುಮನೆ
|

Updated on:Dec 06, 2024 | 1:17 PM

Share

‘ಶಾಖಾಹಾರಿ’ ಸ್ಯಾಂಡಲ್​ವುಡ್​ ಪ್ರೇಕ್ಷಕರಿಗೆ ಸಖತ್ ಇಷ್ಟ ಆದ ಚಿತ್ರ. ಈ ಸಿನಿಮಾ ಸಸ್ಪೆನ್ಸ್ ಶೈಲಿಯಲ್ಲಿ ಮೂಡಿ ಬಂದಿತ್ತು. ಸಿನಿಮಾ ನೋಡಿದ ಪ್ರೇಕ್ಷಕರು ಚಿತ್ರವನ್ನು ಕೊಂಡಾಡಿದ್ದರು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಸಂದೀಪ್ ಸುಕಂದ್ ಅವರು. ಅವರ ಬಿಗಿಯಾದ ನಿರ್ದೇಶನ ಚಿತ್ರವನ್ನು ಸುಂದರಗೊಳಿಸಿತ್ತು. ಈಗ ‘ಶಾಖಾಹಾರಿ’ ಸಿನಿಮಾ ನಿರ್ದೇಶಕನ ಜೊತೆ ಗೀತಾ ಶಿವರಾಜ್​ಕುಮಾರ್ ಅವರು ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಹೀರೋ ಯಾರು ಎಂಬುದು ಕೂಡ ರಿವೀಲ್ ಆಗಿದೆ.

ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ವೇದ’, ‘ಭೈರತಿ ರಣಗಲ್’ ರೀತಿಯು ಸಿನಿಮಾಗಳು ‘ಗೀತಾ ಪಿಕ್ಚರ್ಸ್’ ಮೂಲಕ ಮೂಡಿ ಬಂದಿದೆ. ಈಗ ಈ ಬ್ಯಾನರ್ ಅಡಿಯಲ್ಲಿ ನಾಲ್ಕನೇ ಸಿನಿಮಾ ಘೋಷಣೆ ಆಗಿದೆ. ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಇರುವ ಈ ಚಿತ್ರಕ್ಕೆ ಸಂದೀಪ್ ನಿರ್ದೇಶನ ಇದೆ.

ಹಾಗಾದರೆ, ಈ ಚಿತ್ರಕ್ಕೆ ಹೀರೋ ಯಾರು? ಅದಕ್ಕೂ ಉತ್ತರ ಇದೆ. ಹಿರಿಯ ನಟ ರಾಮ್​ಕುಮಾರ್ ಅವರ ಪುತ್ರ ಧೀರೇನ್ ರಾಮ್​ಕುಮಾರ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಮೊದಲು ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರು ಮತ್ತೊಂದು ಚಿತ್ರದಲ್ಲಿ ನಟಿಸಲು ರೆಡಿ ಆಗಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: Shakhahaari Review: ‘ಶಾಖಾಹಾರಿ’ ಸಿನಿಮಾದಲ್ಲಿ ಹಲವು ಟ್ವಿಸ್ಟ್​; ರಂಗಾಯಣ ರಘು ಬೆಸ್ಟ್​

‘ಶಾಖಾಹಾರಿ’ ಚಿತ್ರಮಂದಿರದಲ್ಲಿ ರಿಲೀಸ್ ಆದಾಗ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಆ ಬಳಿಕ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್ ಮಾಡಲಾಯಿತು. ಒಟಿಟಿಯಲ್ಲಿ ನೋಡಿದ ಅನೇಕರು ಈ ಚಿತ್ರವನ್ನು ಹೊಗಳಿದ್ದಾರೆ. ರಂಗಾಯಣ ರಘು ಅವರ ನಟನೆಯನ್ನು ಜನರು ಕೊಂಡಾಡಿದರು. ಈಗ ಧೀರೇನ್​ಗೆ ಸಂದೀಪ್ ಅವರು ನಿರ್ದೇಶನ ಮಾಡುತ್ತಿರುವುದು ಯಾವ ರೀತಿಯ ಸಿನಿಮಾ ಎಂಬ ಕುತೂಹಲವೂ ಇದೆ.

ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಮಾಡಿದ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15ರಂದು ತೆರೆಗೆ ಬಂತು. ಈ ಚಿತ್ರಕ್ಕೆ ನರ್ತನ್ ನಿರ್ದೇಶನ ಇದೆ. ಈ ಚಿತ್ರ ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:58 am, Fri, 6 December 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ