AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?

ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ವೇದ’, ‘ಭೈರತಿ ರಣಗಲ್’ ರೀತಿಯು ಸಿನಿಮಾಗಳು ‘ಗೀತಾ ಪಿಕ್ಚರ್ಸ್’ ಮೂಲಕ ಮೂಡಿ ಬಂದಿದೆ. ಈಗ ಈ ಬ್ಯಾನರ್ ಅಡಿಯಲ್ಲಿ ನಾಲ್ಕನೇ ಸಿನಿಮಾ ಘೋಷಣೆ ಆಗಿದೆ.

‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?
‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?
ರಾಜೇಶ್ ದುಗ್ಗುಮನೆ
|

Updated on:Dec 06, 2024 | 1:17 PM

Share

‘ಶಾಖಾಹಾರಿ’ ಸ್ಯಾಂಡಲ್​ವುಡ್​ ಪ್ರೇಕ್ಷಕರಿಗೆ ಸಖತ್ ಇಷ್ಟ ಆದ ಚಿತ್ರ. ಈ ಸಿನಿಮಾ ಸಸ್ಪೆನ್ಸ್ ಶೈಲಿಯಲ್ಲಿ ಮೂಡಿ ಬಂದಿತ್ತು. ಸಿನಿಮಾ ನೋಡಿದ ಪ್ರೇಕ್ಷಕರು ಚಿತ್ರವನ್ನು ಕೊಂಡಾಡಿದ್ದರು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಸಂದೀಪ್ ಸುಕಂದ್ ಅವರು. ಅವರ ಬಿಗಿಯಾದ ನಿರ್ದೇಶನ ಚಿತ್ರವನ್ನು ಸುಂದರಗೊಳಿಸಿತ್ತು. ಈಗ ‘ಶಾಖಾಹಾರಿ’ ಸಿನಿಮಾ ನಿರ್ದೇಶಕನ ಜೊತೆ ಗೀತಾ ಶಿವರಾಜ್​ಕುಮಾರ್ ಅವರು ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಹೀರೋ ಯಾರು ಎಂಬುದು ಕೂಡ ರಿವೀಲ್ ಆಗಿದೆ.

ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ವೇದ’, ‘ಭೈರತಿ ರಣಗಲ್’ ರೀತಿಯು ಸಿನಿಮಾಗಳು ‘ಗೀತಾ ಪಿಕ್ಚರ್ಸ್’ ಮೂಲಕ ಮೂಡಿ ಬಂದಿದೆ. ಈಗ ಈ ಬ್ಯಾನರ್ ಅಡಿಯಲ್ಲಿ ನಾಲ್ಕನೇ ಸಿನಿಮಾ ಘೋಷಣೆ ಆಗಿದೆ. ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಇರುವ ಈ ಚಿತ್ರಕ್ಕೆ ಸಂದೀಪ್ ನಿರ್ದೇಶನ ಇದೆ.

ಹಾಗಾದರೆ, ಈ ಚಿತ್ರಕ್ಕೆ ಹೀರೋ ಯಾರು? ಅದಕ್ಕೂ ಉತ್ತರ ಇದೆ. ಹಿರಿಯ ನಟ ರಾಮ್​ಕುಮಾರ್ ಅವರ ಪುತ್ರ ಧೀರೇನ್ ರಾಮ್​ಕುಮಾರ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಮೊದಲು ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರು ಮತ್ತೊಂದು ಚಿತ್ರದಲ್ಲಿ ನಟಿಸಲು ರೆಡಿ ಆಗಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: Shakhahaari Review: ‘ಶಾಖಾಹಾರಿ’ ಸಿನಿಮಾದಲ್ಲಿ ಹಲವು ಟ್ವಿಸ್ಟ್​; ರಂಗಾಯಣ ರಘು ಬೆಸ್ಟ್​

‘ಶಾಖಾಹಾರಿ’ ಚಿತ್ರಮಂದಿರದಲ್ಲಿ ರಿಲೀಸ್ ಆದಾಗ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಆ ಬಳಿಕ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್ ಮಾಡಲಾಯಿತು. ಒಟಿಟಿಯಲ್ಲಿ ನೋಡಿದ ಅನೇಕರು ಈ ಚಿತ್ರವನ್ನು ಹೊಗಳಿದ್ದಾರೆ. ರಂಗಾಯಣ ರಘು ಅವರ ನಟನೆಯನ್ನು ಜನರು ಕೊಂಡಾಡಿದರು. ಈಗ ಧೀರೇನ್​ಗೆ ಸಂದೀಪ್ ಅವರು ನಿರ್ದೇಶನ ಮಾಡುತ್ತಿರುವುದು ಯಾವ ರೀತಿಯ ಸಿನಿಮಾ ಎಂಬ ಕುತೂಹಲವೂ ಇದೆ.

ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಮಾಡಿದ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15ರಂದು ತೆರೆಗೆ ಬಂತು. ಈ ಚಿತ್ರಕ್ಕೆ ನರ್ತನ್ ನಿರ್ದೇಶನ ಇದೆ. ಈ ಚಿತ್ರ ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:58 am, Fri, 6 December 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!