AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?

ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ವೇದ’, ‘ಭೈರತಿ ರಣಗಲ್’ ರೀತಿಯು ಸಿನಿಮಾಗಳು ‘ಗೀತಾ ಪಿಕ್ಚರ್ಸ್’ ಮೂಲಕ ಮೂಡಿ ಬಂದಿದೆ. ಈಗ ಈ ಬ್ಯಾನರ್ ಅಡಿಯಲ್ಲಿ ನಾಲ್ಕನೇ ಸಿನಿಮಾ ಘೋಷಣೆ ಆಗಿದೆ.

‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?
‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?
ರಾಜೇಶ್ ದುಗ್ಗುಮನೆ
|

Updated on:Dec 06, 2024 | 1:17 PM

Share

‘ಶಾಖಾಹಾರಿ’ ಸ್ಯಾಂಡಲ್​ವುಡ್​ ಪ್ರೇಕ್ಷಕರಿಗೆ ಸಖತ್ ಇಷ್ಟ ಆದ ಚಿತ್ರ. ಈ ಸಿನಿಮಾ ಸಸ್ಪೆನ್ಸ್ ಶೈಲಿಯಲ್ಲಿ ಮೂಡಿ ಬಂದಿತ್ತು. ಸಿನಿಮಾ ನೋಡಿದ ಪ್ರೇಕ್ಷಕರು ಚಿತ್ರವನ್ನು ಕೊಂಡಾಡಿದ್ದರು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಸಂದೀಪ್ ಸುಕಂದ್ ಅವರು. ಅವರ ಬಿಗಿಯಾದ ನಿರ್ದೇಶನ ಚಿತ್ರವನ್ನು ಸುಂದರಗೊಳಿಸಿತ್ತು. ಈಗ ‘ಶಾಖಾಹಾರಿ’ ಸಿನಿಮಾ ನಿರ್ದೇಶಕನ ಜೊತೆ ಗೀತಾ ಶಿವರಾಜ್​ಕುಮಾರ್ ಅವರು ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಹೀರೋ ಯಾರು ಎಂಬುದು ಕೂಡ ರಿವೀಲ್ ಆಗಿದೆ.

ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ವೇದ’, ‘ಭೈರತಿ ರಣಗಲ್’ ರೀತಿಯು ಸಿನಿಮಾಗಳು ‘ಗೀತಾ ಪಿಕ್ಚರ್ಸ್’ ಮೂಲಕ ಮೂಡಿ ಬಂದಿದೆ. ಈಗ ಈ ಬ್ಯಾನರ್ ಅಡಿಯಲ್ಲಿ ನಾಲ್ಕನೇ ಸಿನಿಮಾ ಘೋಷಣೆ ಆಗಿದೆ. ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಇರುವ ಈ ಚಿತ್ರಕ್ಕೆ ಸಂದೀಪ್ ನಿರ್ದೇಶನ ಇದೆ.

ಹಾಗಾದರೆ, ಈ ಚಿತ್ರಕ್ಕೆ ಹೀರೋ ಯಾರು? ಅದಕ್ಕೂ ಉತ್ತರ ಇದೆ. ಹಿರಿಯ ನಟ ರಾಮ್​ಕುಮಾರ್ ಅವರ ಪುತ್ರ ಧೀರೇನ್ ರಾಮ್​ಕುಮಾರ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಮೊದಲು ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರು ಮತ್ತೊಂದು ಚಿತ್ರದಲ್ಲಿ ನಟಿಸಲು ರೆಡಿ ಆಗಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: Shakhahaari Review: ‘ಶಾಖಾಹಾರಿ’ ಸಿನಿಮಾದಲ್ಲಿ ಹಲವು ಟ್ವಿಸ್ಟ್​; ರಂಗಾಯಣ ರಘು ಬೆಸ್ಟ್​

‘ಶಾಖಾಹಾರಿ’ ಚಿತ್ರಮಂದಿರದಲ್ಲಿ ರಿಲೀಸ್ ಆದಾಗ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಆ ಬಳಿಕ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್ ಮಾಡಲಾಯಿತು. ಒಟಿಟಿಯಲ್ಲಿ ನೋಡಿದ ಅನೇಕರು ಈ ಚಿತ್ರವನ್ನು ಹೊಗಳಿದ್ದಾರೆ. ರಂಗಾಯಣ ರಘು ಅವರ ನಟನೆಯನ್ನು ಜನರು ಕೊಂಡಾಡಿದರು. ಈಗ ಧೀರೇನ್​ಗೆ ಸಂದೀಪ್ ಅವರು ನಿರ್ದೇಶನ ಮಾಡುತ್ತಿರುವುದು ಯಾವ ರೀತಿಯ ಸಿನಿಮಾ ಎಂಬ ಕುತೂಹಲವೂ ಇದೆ.

ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಮಾಡಿದ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15ರಂದು ತೆರೆಗೆ ಬಂತು. ಈ ಚಿತ್ರಕ್ಕೆ ನರ್ತನ್ ನಿರ್ದೇಶನ ಇದೆ. ಈ ಚಿತ್ರ ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:58 am, Fri, 6 December 24

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ