AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕರ್ ನಾಗ್ ಜನ್ಮದಿನ: ಈ ವಿಶೇಷ ವ್ಯಕ್ತಿ ಕಂಡ ಕನಸು ಒಂದೆರಡಲ್ಲ..

ಶಂಕರ್ ನಾಗ್ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 1954ರಲ್ಲಿ ಜನಿಸಿದರು. ಸಣ್ಣ ವಯಸ್ಸಿನಲ್ಲಿರುವಾಗ ಮರಾಠಿ ನಾಟಕಗಳಿಂದ ಅವರು​ ಪ್ರಭಾವಕ್ಕೆ ಒಳಗಾಗಿದರು. ‘ಒಂದಾನೊಂದು ಕಾಲದಲ್ಲಿ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

ಶಂಕರ್ ನಾಗ್ ಜನ್ಮದಿನ: ಈ ವಿಶೇಷ ವ್ಯಕ್ತಿ ಕಂಡ ಕನಸು ಒಂದೆರಡಲ್ಲ..
ಶಂಕರ್ ನಾಗ್
ರಾಜೇಶ್ ದುಗ್ಗುಮನೆ
|

Updated on: Nov 09, 2023 | 8:17 AM

Share

ಶಂಕರ್​ ನಾಗ್ (Shankar Nag) ಅವರು ಇಂದು (ನವೆಂಬರ್ 9) ನಮ್ಮೊಂದಿಗೆ ಇದ್ದಿದ್ದರೆ 69ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಅವರು ನಮ್ಮನ್ನು ಅಗಲಿ ಹಲವು ವರ್ಷಗಳು ಕಳೆದಿವೆ. ಆದರೆ, ಅವರ ನೆನಪು ಎಂದಿಗೂ ನಮ್ಮನ್ನು ಬಿಟ್ಟು ಹೋಗುವಂಥದ್ದಲ್ಲ. ಅವರು ಮಾಡಿದ ಸಿನಿಮಾಗಳು, ಕಂಡ ಕನಸುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತ. ಸಣ್ಣ ವಯಸ್ಸಿಗೆ ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡ ಶಂಕರ್ ನಾಗ್, ಬದುಕಿದ್ದ ಕೆಲವೇ ವರ್ಷಗಳಲ್ಲಿ ಹಲವು ಸಿನಿಮಾಗಳನ್ನು ನೀಡಿದರು. ನಿರ್ದೇಶನ, ನಟನೆಯ ಜೊತೆ ನಮ್ಮ ರಾಜ್ಯದ ಅಭಿವೃದ್ಧಿ ಬಗ್ಗೆ ಅವರು ಕನಸು ಕಂಡಿದ್ದರು. ಅವರನ್ನು ಇಂದು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಶಂಕರ್ ನಾಗ್ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 1954ರಲ್ಲಿ ಜನಿಸಿದರು. ಸಣ್ಣ ವಯಸ್ಸಿನಲ್ಲಿರುವಾಗ ಮರಾಠಿ ನಾಟಕಗಳಿಂದ ಅವರು​ ಪ್ರಭಾವಕ್ಕೆ ಒಳಗಾಗಿದರು. ‘ಒಂದಾನೊಂದು ಕಾಲದಲ್ಲಿ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ. ಆ ಬಳಿಕ ಅವರು ಹಲವು ಪ್ರಯೋಗಗಳನ್ನು ಮಾಡಿದರು.

ಕೆಲವು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರಿಗೆ ನಿರ್ದೇಶನದ ಕಡೆ ಒಲವು ಬಂತು. ‘ಮಿಂಚಿನ ಓಟ’ ಸಿನಿಮಾವನ್ನು ಅವರು ಮೊದಲ ಬಾರಿಗೆ ನಿರ್ದೇಶನ ಮಾಡಿದರು. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಂಡಿತು. ಆ ಬಳಿಕ ‘ಗೀತಾ’, ‘ಜನ್ಮ ಜನ್ಮದ ಅನುಬಂಧ’ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ.

ರಾಜ್​ಕುಮಾರ್ ನಟನೆಯ ‘ಒಂದು ಮುತ್ತಿನ ಕಥೆ’ ಚಿತ್ರ ಗಮನ ಸೆಳೆಯಿತು. ಈ ಚಿತ್ರದಲ್ಲಿ ಬರುವ ಅಂಡರ್​ವಾಟರ್ ಶೂಟಿಂಗ್​ಗಾಗಿ ಶಂಕರ್ ನಾಗ್ ಸಾಕಷ್ಟು ಶ್ರಮ ಹಾಕಿದ್ದರು. 90ರ ದಶಕದಲ್ಲಿ ವಿದೇಶಕ್ಕೆ ಹೋಗಿ ಅಲ್ಲಿನ ಸಿನಿಮಾಗಳನ್ನು ನೋಡಿದ್ದರು. ಆ ತಂತ್ರಜ್ಞಾನ ಕನ್ನಡ ಚಿತ್ರರಂಗಕ್ಕೆ ಬರಬೇಕು ಎಂದು ಶಂಕರ್​ನಾಗ್​ ಆಲೋಚಿಸಿದ್ದರು. ಈ ಕುರಿತು ಅವರು ಹಲವು ಆಲೋಚನೆಗಳನ್ನು ಮಾಡಿದ್ದರು. ಮೆಟ್ರೋ ಸಾರಿಗೆಯನ್ನು ರಾಜ್ಯಕ್ಕೆ ತರಬೇಕು ಎಂದು ಆಗಲೇ ಆಲೋಚಿಸಿದ್ದರು.

ಇದನ್ನೂ ಓದಿ: ‘ಮರೆವು ದೇವರು ಕೊಟ್ಟಿರೋ ವರ’; ಶಂಕರ್ ನಾಗ್ ಇಲ್ಲ ಎಂಬ ನೋವಿನಿಂದ ಹೊರ ಬಂದಿರೋ ಅನಂತ್ ನಾಗ್

‘ಮಾಲ್ಗುಡಿ ಡೇಸ್​’ ಟಿವಿ ಸೀರೀಸ್​ ಶಂಕರ್ ನಾಗ್ ನಿರ್ದೇಶನದಲ್ಲಿ ಮೂಡಿಬಂತು. ನಾಲ್ಕು ಸೀಸನ್​ಗಳ ಪೈಕಿ ಮೊದಲ ಮೂರು ಸೀಸನ್​​ಗೆ ಅವರೇ ನೇತೃತ್ವ ವಹಿಸಿದ್ದರು. ಈ ಸರಣಿ ಯಶಸ್ಸು ಪಡೆಯಿತು. ಇದು ಶಂಕರ್ ನಾಗ್ ಅವರ ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಹಾಗೂ ಕೊನೆಯ ಸೀರಿಸ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ