AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಗ್ ರೀ-ರೆಕಾರ್ಡಿಂಗ್​ಗೆ ಮದ್ರಾಸ್​​ಗೆ ಹೋಗುವುದನ್ನು ತಪ್ಪಿಸಿದ್ದ ಶಂಕರ್​ ನಾಗ್

ಇಂದು (ನವೆಂಬರ್ 9) ಶಂಕರ್ ನಾಗ್ ಅವರ 70ನೇ ಜನ್ಮದಿನ. ಕನ್ನಡ ಚಿತ್ರರಂಗಕ್ಕೆ ಅವರ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮೊದಲ ಸಂಗೀತ ರೀ-ರೆಕಾರ್ಡಿಂಗ್ ಸ್ಟುಡಿಯೋ ಸ್ಥಾಪಿಸಿ ಕನ್ನಡ ಚಿತ್ರರಂಗದಲ್ಲಿ ಕ್ರಾಂತಿ ಮಾಡಿದವರು. ಮೆಟ್ರೋ ಮತ್ತು ನಂದಿ ಬೆಟ್ಟದ ರೋಪ್ ವೇಯಂತಹ ಅನೇಕ ದೂರದೃಷ್ಟಿಯ ಕನಸುಗಳನ್ನು ಕಂಡಿದ್ದರು.

ಸಾಂಗ್ ರೀ-ರೆಕಾರ್ಡಿಂಗ್​ಗೆ ಮದ್ರಾಸ್​​ಗೆ ಹೋಗುವುದನ್ನು ತಪ್ಪಿಸಿದ್ದ ಶಂಕರ್​ ನಾಗ್
ಶಂಕರ್ ನಾಗ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 09, 2024 | 7:35 AM

Share

ಶಂಕರ್ ನಾಗ್ ಅವರಿಗೆ ಇಂದು (ನವೆಂಬರ್ 9) ಜನ್ಮದಿನ. ಅವರು ಬದುಕಿದ್ದರೆ 70ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ, ಕೇವಲ 35ನೇ ವಯಸ್ಸಿಗೆ ಶಂಕರ್ ನಾಗ್ ಅವರು ನಿಧನ ಹೊಂದಿದರು. ಶಂಕರ್ ನಾಗ್ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಅವರು ಕನ್ನಡ ಚಿತ್ರರಂಗದಲ್ಲಿ ಹಲವು ಕ್ರಾಂತಿ ಮಾಡಿದ್ದರು. ಇದರಲ್ಲಿ ಸಾಂಗ್ ರೀರೆಕಾರ್ಡಿಂಗ್ ಸ್ಟುಡಿಯೋ ಮಾಡಿದ ಖ್ಯಾತಿಯೂ ಅವರಿಗೆ ಸಿಗುತ್ತದೆ ಎಂದರೆ ತಪ್ಪಾಗಲಾರದು. ಆ ಬಗ್ಗೆ ಇಲ್ಲಿದೆ ವಿವರ.

ಮೊದಲು ಸಿನಿಮಾಗಳ ಹಾಡಿನ ರೀರೆಕಾರ್ಡಿಂಗ್ ಕೆಲಸಗಳು ಮದ್ರಾಸ್​ ಅಂದರೆ ಈಗಿನ ಚೆನ್ನೈನಲ್ಲಿ ನಡೆಯುತ್ತಿತ್ತು. ಕನ್ನಡ ಸಿನಿಮಾದ ಶೂಟಿಂಗ್ ಎಲ್ಲೇ ಆದರೂ, ಅದರ ಹಾಡಿಸ ಕೆಲಸಗಳಿಗೆ ಚೆನ್ನೈ ಅಥವಾ ಮುಂಬೈಗೆ ತೆರಳಬೇಕಿತ್ತು. ಹೀಗಾಗಿ, ಸಿನಿಮಾ ಕೆಲಸಗಳ ಕೇಂದ್ರ ಬಿಂದುವು ಮದ್ರಾಸೇ ಆಗಿತ್ತು. ಈ ಬಗ್ಗೆ ಶಂಕರ್ ನಾಗ್​ಗೆ ಬೇಸರ ಇತ್ತು. ಸಿನಿಮಾ ನಿರ್ಮಾಣ ಮಾಡೋದು ಕನ್ನಡಿಗರು, ಸಿನಿಮಾ ನೋಡೋದು ಕನ್ನಡಿಗರು ಹೀಗಿರುವಾಗ ಅದರ ಕೆಲಸಗಳು ಏಕೆ ಚೆನ್ನೈನಲ್ಲಿ ನಡೆಯಬೇಕು ಎಂಬುದು ಅವರ ಪ್ರಶ್ನೆ ಆಗಿತ್ತು.

‘ಒಂದು ಮುತ್ತಿನ ಕಥೆ’ ಚಿತ್ರದ ಶೂಟಿಂಗ್ ವಿದೇಶದಲ್ಲಿ ನಡೆದಿತ್ತು. ರಾಜ್​ಕುಮಾರ್ ನಟನೆಯ ಈ ಚಿತ್ರವನ್ನು, ಶಂಕರ್ ನಾಗ್ ನಿರ್ದೇಶನ ಮಾಡಿದ್ದರು. ಈ ಚಿತ್ರದ ಹಾಡಿನ ರೆಕಾರ್ಡ್ ಬೆಂಗಳೂರಿನಲ್ಲೇ ನಡೆದಿತ್ತು ಅನ್ನೋದು ವಿಶೇಷ. ‘ಮೊದಲು ಹಾಡುಗಳ ರೆಕಾರ್ಡಿಂಗ್ ಮಾಡಬೇಕು ಎಂದರೆ ಮದ್ರಾಸ್ ಅಥವಾ ಮುಂಬೈಗೆ ಹೋಗಬೇಕಿತ್ತು. ಆ ವ್ಯವಸ್ಥೆ ಕರ್ನಾಟಕದಲ್ಲಿ ಇರಲಿಲ್ಲ. ಪ್ರರಿ ಬಾರಿ ರೆಕಾರ್ಡಿಂಗ್ ಮಾಡಬೇಕಾದರೆ ತಿಂಗಳು ಗಟ್ಟಲೆ ನಿಂತು ಕಾಯಬೇಕಿತ್ತು’ ಎಂದಿದ್ದರು ಶಂಕರ್ ನಾಗ್.

‘ಸಿನಿಮಾ ನಿರ್ಮಾಪಕರ ಈ ಸ್ಥಿತಿ ಕಂಡು ಬೇಸರ ಆಗಿತ್ತು. ಹೀಗಾಗಿ ನಮ್ಮದೇ ಸ್ಟುಡಿಯೋ ಬೇಕು ಎನಿಸಿತು. ಅನಂತ್ ನಾಗ್​, ರಮೇಶ್ ಭಟ್, ಸೂರ್ಯ ರಾವ್ ಅವರಿಂದ ಆರ್ಥಿಕ ಸಹಾಯ ಪಡೆದು ರೀ-ರೆಕಾರ್ಡಿಂಗ್ ಸ್ಟುಡಿಯೋ ಮಾಡಿದೆವು. ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅದನ್ನು ಉದ್ಘಾಟನೆ ಮಾಡಿದರು. ನಮ್ಮಲ್ಲೂ ಎಲ್ಲಾ ಸೌಲಭ್ಯ ಇದೆ ಎಂಬುದರ ಸಂಕೇತವೇ ಈ ಸ್ಟುಡಿಯೋ’ ಎಂದಿದ್ದರು ಶಂಕರ್ ನಾಗ್.

ಇದನ್ನೂ ಓದಿ: ಅಪಘಾತದ ವೇಳೆ ನಿಜಕ್ಕೂ ಶಂಕರ್ ನಾಗ್ ಕಾರು ಚಲಾಯಿಸುತ್ತಿದ್ದರಾ?

ಶಂಕರ್ ನಾಗ್ ಅವರು ಅನೇಕ ಕನಸನ್ನು ಕಂಡಿದ್ದರು. ಬೆಂಗಳೂರಲ್ಲಿ ಮೆಟ್ರೋ ನಿರ್ಮಾಣ ಮಾಡಬೇಕು ಎಂದು ಅವರು ಕನಸು ಕಂಡಿದ್ದರು. ನಂದಿ ಬೆಟ್ಟದಲ್ಲಿ ರೋಪ್​ವೇ ಬರಬೇಕು ಎಂಬುದು ಅವರ ಆಸೆ ಆಗಿತ್ತು. ಅವರು ಮೃತಪಟ್ಟ ಹಲವು ವರ್ಷಗಳ ಬಳಿಕ ಬೆಂಗಳೂರಿಗೆ ಮೆಟ್ರೋ ಬಂತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Sat, 9 November 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?