AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shankar Rao: ‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್​ ರಾವ್​ ನಿಧನ; ಸ್ಯಾಂಡಲ್​ವುಡ್​ ಸಂತಾಪ

Shankar Rao Death News: ಹಿರಿಯ ನಟ ಶಂಕರ್​ ರಾವ್​ ಅವರು ಇಂದು (ಅ.18) ಮುಂಜಾನೆ ಇಹಲೋಕ ತ್ಯಜಿಸಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು.

Shankar Rao: ‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್​ ರಾವ್​ ನಿಧನ; ಸ್ಯಾಂಡಲ್​ವುಡ್​ ಸಂತಾಪ
ಶಂಕರ್ ರಾವ್
TV9 Web
| Updated By: ಮದನ್​ ಕುಮಾರ್​|

Updated on:Oct 18, 2021 | 2:08 PM

Share

ಕನ್ನಡ ಚಿತ್ರರಂಗದ ಹಿರಿಯ ನಟ, ಜನಪ್ರಿಯ ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ನಿಧನರಾಗಿದ್ದಾರೆ. ಸೋಮವಾರ (ಅ.18) ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್​ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಇಂದು ಮಧ್ಯಾಹ್ನ ಬನಶಂಕರಿ ಚಿತಾಗಾರದಲ್ಲಿ ಶಂಕರ್​ ರಾವ್​ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

ತುಮಕೂರಿನಲ್ಲಿ ಬಾಲ್ಯ ಮತ್ತು ಯೌವನ ಕಳೆದವರು ಶಂಕರ್​ ರಾವ್​. ಅಲ್ಲಿನ ಚಿತ್ರಮಂದಿರಗಳಲ್ಲಿ ಪ್ರದರ್ಶನ ಆಗುತ್ತಿದ್ದ ತೆಲುಗು ಸಿನಿಮಾಗಳನ್ನು ನೋಡಿ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಶಾಲಾ ದಿನಗಳಿಂದಲೇ ಅವರು ನಟನೆಯಲ್ಲಿ ಅಭಿರುಚಿ ಹೊಂದಿದ್ದರು. 1956ರಲ್ಲಿ ಬೆಂಗಳೂರಿಗೆ ಬಂದರು. ‘ಗೆಳೆಯರ ಬಳಗ’ ಟೀಮ್​ ಕಟ್ಟಿಕೊಂಡು ಶಂಕರ್​ ರಾವ್​ ನಾಟಕ ಮಾಡುತ್ತಿದ್ದರು. 19ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡು ಮನೆಯ ಜವಾಬ್ದಾರಿಯನ್ನೂ ಹೊತ್ತುಕೊಂಡರು. ಪ್ರತಿ ವರ್ಷ ಸಿಗುತ್ತಿದ್ದ ಬೋನಸ್​ ಹಣದಲ್ಲಿ ಹೊಸ ರಂಗ ತಂಡ ಕಟ್ಟಿಕೊಂಡರು. ‘ನಟರಂಗ’ ತಂಡದ ಜೊತೆಗೂ ಶಂಕರ್​ ರಾವ್​ ಗುರುತಿಸಿಕೊಂಡಿದ್ದರು. ಹವ್ಯಾಸಿ ರಂಗಭೂಮಿ ಕಲಾವಿದನಾಗಿದ್ದ ಅವರು ಹಲವಾರು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.

ವೇದಿಕೆ ಮೇಲೆ ಶಂಕರ್​ ರಾವ್​ ಅವರ ಅಭಿನಯ ನೋಡಿದ ನಿರ್ಮಾಪಕರೊಬ್ಬರು ಸಿನಿಮಾದಲ್ಲಿ ಅಭಿನಯಕ್ಕೆ ಅವಕಾಶ ನೀಡಿದರು. ‘ಯಾರ ಸಾಕ್ಷಿ’ ಸಿನಿಮಾದಲ್ಲಿ ಅವರು ಮೊದಲ ಬಾರಿಗೆ ನಟಿಸಿದರು. ಆ ಚಿತ್ರಕ್ಕೆ ಮಂಜುಳಾ ನಾಯಕಿ ಆಗಿದ್ದರು. ಲೋಕನಾಥ್​ ಕೂಡ ಅದರಲ್ಲಿ ನಟಿಸಿದ್ದರು. ನಂತರ ಶಂಕರ್​ ರಾವ್​ ಅವರಿಗೆ ಹಲವು ಅವಕಾಶಗಳು ಸಿಕ್ಕವು. ಅಪ್ಪು, ಧ್ರುವ ಸೇರಿ ಅನೇಕ ಸಿನಿಮಾಗಳಲ್ಲಿ ಶಂಕರ್​ ರಾವ್​ ಅಭಿನಯಿಸಿದ್ದರು. ಪೋಷಕ ಪಾತ್ರಗಳು ಮತ್ತು ಹಾಸ್ಯ ಪಾತ್ರಗಳ ಮೂಲಕ ಅವರು ಜನಪ್ರಿಯತೆ ಪಡೆದುಕೊಂಡಿದ್ದರು.

ಕಿರುತೆರೆಯ ಜನಪ್ರಿಯ  ‘ಪಾಪ ಪಾಂಡು’ ಧಾರಾವಾಹಿ ಮೂಲಕ ಕರುನಾಡಿನ ಜನರನ್ನು ಶಂಕರ್​ ರಾವ್​ ರಂಜಿಸಿದರು. ಅದರಲ್ಲಿ ಅವರು ಮಾಡುತ್ತಿದ್ದ ಬಾಸ್​ ಬಾಲರಾಜ್​ ಎಂಬ ಪಾತ್ರ ತುಂಬ ಫೇಮಸ್​ ಆಗಿತ್ತು.

ಇದನ್ನೂ ಓದಿ:

‘ನಾನು ಒಳ್ಳೆಯ ನಟನಾಗಲಿ ಅಂತ ಅಪ್ಪನಿಗೆ ಆಸೆ ಇತ್ತು’; ಸತ್ಯಜಿತ್​ ನಿಧನದ ಬಳಿಕ ಪುತ್ರ ಆಕಾಶ್​ ನೋವಿನ ಮಾತು

Sathyajith Obituary: ಬಸ್​ ಡ್ರೈವರ್​ ಆಗಿದ್ದ ಸತ್ಯಜಿತ್​ ನೇರ ಬಾಲಿವುಡ್​ಗೆ ಕಾಲಿಟ್ಟಿದ್ದೇ ಅಚ್ಚರಿ; ಹಿರಿಯ ನಟ ಸಾಗಿ ಬಂದ ಹಾದಿ ಇಲ್ಲಿದೆ

Published On - 11:52 am, Mon, 18 October 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ