ಸದ್ಯಕ್ಕಂತೂ ಸೆಟ್ಟೇರಲ್ಲ ಯಶ್​-ಶಂಕರ್ ಸಿನಿಮಾ; ಕಮಲ್ ಹಾಸನ್ ಟ್ವೀಟ್​ನಲ್ಲೇ ಅಡಗಿದೆ ಉತ್ತರ

ಶಂಕರ್ ಜತೆ ಯಶ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಈ ವಿಚಾರವನ್ನು ಹೌದು ಎಂದವರು ಯಾರೂ ಇಲ್ಲ, ಅಲ್ಲ ಎಂದವರೂ ಯಾರು ಇಲ್ಲ.

ಸದ್ಯಕ್ಕಂತೂ ಸೆಟ್ಟೇರಲ್ಲ ಯಶ್​-ಶಂಕರ್ ಸಿನಿಮಾ; ಕಮಲ್ ಹಾಸನ್ ಟ್ವೀಟ್​ನಲ್ಲೇ ಅಡಗಿದೆ ಉತ್ತರ
ಯಶ್​-ಶಂಕರ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 22, 2022 | 2:39 PM

ಯಶ್ (Yash) ನಟನೆಯ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಲವು ತಿಂಗಳು ಕಳೆದಿದೆ. ಆದರೆ, ಈವರೆಗೆ ಅವರ ಮುಂದಿನ ಸಿನಿಮಾ ಘೋಷಣೆ ಆಗಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಯಶ್ ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಸಿಗಲಿ ಎಂದು ಫ್ಯಾನ್ಸ್ ನಿತ್ಯ ಕೋರಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಹಲವು ವದಂತಿಗಳು ಈ ಚಿತ್ರದ ಬಗ್ಗೆ ಹುಟ್ಟಿಕೊಳ್ಳುತ್ತಿವೆ. ಈ ರೀತಿಯ ಸುದ್ದಿಗಳನ್ನು ಕೇಳಿ ಕೇಳಿ ಫ್ಯಾನ್ಸ್ ರೋಸಿ ಹೋಗಿದ್ದಾರೆ. ಈ ಮಧ್ಯೆ ಒಂದು ವಿಚಾರದ ಬಗ್ಗೆ ಫ್ಯಾನ್ಸ್​ಗೆ ಸ್ಪಷ್ಟನೆ ಸಿಕ್ಕಿದೆ. ಅದೂ ಕಮಲ್ ಹಾಸನ್ (Kamal Haasan) ಅವರ ಟ್ವೀಟ್ ಮೂಲಕ ಅನ್ನೋದು ವಿಶೇಷ.

ಶಂಕರ್ ಜತೆ ಯಶ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಈ ವಿಚಾರವನ್ನು ಹೌದು ಎಂದವರು ಯಾರೂ ಇಲ್ಲ, ಅಲ್ಲ ಎಂದವರೂ ಯಾರು ಇಲ್ಲ. ಹೀಗಾಗಿ ಗಾಸಿಪ್ ಮಂದಿಯ ಬಾಯಲ್ಲಿ ಈ ಸುದ್ದಿ ಆಗಾಗ ಹೊರ ಬೀಳುತ್ತಲೇ ಇರುತ್ತದೆ. ಇತ್ತೀಚೆಗೆ ಈ ವಿಚಾರದ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಹೀಗಿರುವಾಗಲೇ ಶಂಕರ್ ಅವರು ‘ಇಂಡಿಯನ್ 2’ ಸಿನಿಮಾದ ಶೂಟಿಂಗ್ ಆರಂಭಿಸಿದ್ದಾರೆ. ಈ ಮೂಲಕ ಯಶ್ ಫ್ಯಾನ್ಸ್​ಗೆ ಒಂದು ವಿಚಾರದಲ್ಲಿ ಸ್ಪಷ್ಟನೆ ಸಿಕ್ಕಂತೆ ಆಗಿದೆ.

‘ಇಂಡಿಯನ್’ ಸಿನಿಮಾ ಹಿಟ್ ಆಗಿತ್ತು. ಹಲವು ವರ್ಷಗಳ ಬಳಿಕ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗುತ್ತಿದೆ. ಶಂಕರ್ ನಿರ್ದೇಶನ ಇರುವ ಈ ಚಿತ್ರದಲ್ಲಿ ಕಮಲ್ ಹಾಸನ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೆಲ ವರ್ಷಗಳ ಹಿಂದೇ ಆರಂಭ ಆಗಿತ್ತು. ಆದರೆ, ಸೆಟ್​ನಲ್ಲಿ ಕ್ರೇನ್ ಅಪಘಾತ ಉಂಟಾಗಿ ಕೆಲವರು ಮೃತಪಟ್ಟರು. ಆ ಬಳಿಕ ಚಿತ್ರದ ಶೂಟಿಂಗ್ ನಿಂತಿತ್ತು. ‘ವಿಕ್ರಮ್’ ಹಿಟ್ ಆದ ಬಳಿಕ ಕಮಲ್ ಹಾಸನ್​ ಅವರು ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಶೂಟಿಂಗ್​ನಲ್ಲಿ ತೊಡಗಿಕೊಂಡಿರುವ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯಶ್​-ರಾಧಿಕಾ ಸುಂದರ ಫೋಟೋಗಳಲ್ಲಿದೆ ನಿರ್ದೇಶಕ ನಾಗರಾಜ್​ ಸೋಮಯಾಜಿ ಫೋಕಸ್​

ಸಾಮಾನ್ಯವಾಗಿ ಸ್ಟಾರ್ ನಿರ್ದೇಶಕರು ಅದರಲ್ಲೂ ಶಂಕರ್ ಅವರಂತಹ ನಿರ್ದೇಶಕರು ಏಕಕಾಲಕ್ಕೆ ಒಂದೇ ಸಿನಿಮಾ ಶೂಟಿಂಗ್ ಮಾಡೋಕೆ ಆದ್ಯತೆ ನೀಡುತ್ತಾರೆ. ಎರಡೆರಡು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದರೆ ಅವರಿಗೇ ತೊಂದರೆ. ಈ ಕಾರಣದಿಂದ ಶಂಕರ್ ಸದ್ಯದ ಮಟ್ಟಿಗಂತೂ ‘ಇಂಡಿಯನ್ 2’ ಶೂಟಿಂಗ್​ನಲ್ಲಿ ತೊಡಗಿಕೊಳ್ಳಲಿದ್ದಾರೆ. ಹೀಗಾಗಿ, ಯಶ್ ಜತೆಗೆ ಅವರು ಸಿನಿಮಾ ಮಾಡುತ್ತಾರೆ ಎಂದಾದರೂ ಅದು ಸದ್ಯಕ್ಕಂತೂ ಸೆಟ್ಟೇರುವುದಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ