AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಂತೂ ಸೆಟ್ಟೇರಲ್ಲ ಯಶ್​-ಶಂಕರ್ ಸಿನಿಮಾ; ಕಮಲ್ ಹಾಸನ್ ಟ್ವೀಟ್​ನಲ್ಲೇ ಅಡಗಿದೆ ಉತ್ತರ

ಶಂಕರ್ ಜತೆ ಯಶ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಈ ವಿಚಾರವನ್ನು ಹೌದು ಎಂದವರು ಯಾರೂ ಇಲ್ಲ, ಅಲ್ಲ ಎಂದವರೂ ಯಾರು ಇಲ್ಲ.

ಸದ್ಯಕ್ಕಂತೂ ಸೆಟ್ಟೇರಲ್ಲ ಯಶ್​-ಶಂಕರ್ ಸಿನಿಮಾ; ಕಮಲ್ ಹಾಸನ್ ಟ್ವೀಟ್​ನಲ್ಲೇ ಅಡಗಿದೆ ಉತ್ತರ
ಯಶ್​-ಶಂಕರ್
TV9 Web
| Edited By: |

Updated on: Sep 22, 2022 | 2:39 PM

Share

ಯಶ್ (Yash) ನಟನೆಯ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಹಲವು ತಿಂಗಳು ಕಳೆದಿದೆ. ಆದರೆ, ಈವರೆಗೆ ಅವರ ಮುಂದಿನ ಸಿನಿಮಾ ಘೋಷಣೆ ಆಗಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಯಶ್ ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಸಿಗಲಿ ಎಂದು ಫ್ಯಾನ್ಸ್ ನಿತ್ಯ ಕೋರಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಹಲವು ವದಂತಿಗಳು ಈ ಚಿತ್ರದ ಬಗ್ಗೆ ಹುಟ್ಟಿಕೊಳ್ಳುತ್ತಿವೆ. ಈ ರೀತಿಯ ಸುದ್ದಿಗಳನ್ನು ಕೇಳಿ ಕೇಳಿ ಫ್ಯಾನ್ಸ್ ರೋಸಿ ಹೋಗಿದ್ದಾರೆ. ಈ ಮಧ್ಯೆ ಒಂದು ವಿಚಾರದ ಬಗ್ಗೆ ಫ್ಯಾನ್ಸ್​ಗೆ ಸ್ಪಷ್ಟನೆ ಸಿಕ್ಕಿದೆ. ಅದೂ ಕಮಲ್ ಹಾಸನ್ (Kamal Haasan) ಅವರ ಟ್ವೀಟ್ ಮೂಲಕ ಅನ್ನೋದು ವಿಶೇಷ.

ಶಂಕರ್ ಜತೆ ಯಶ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಈ ವಿಚಾರವನ್ನು ಹೌದು ಎಂದವರು ಯಾರೂ ಇಲ್ಲ, ಅಲ್ಲ ಎಂದವರೂ ಯಾರು ಇಲ್ಲ. ಹೀಗಾಗಿ ಗಾಸಿಪ್ ಮಂದಿಯ ಬಾಯಲ್ಲಿ ಈ ಸುದ್ದಿ ಆಗಾಗ ಹೊರ ಬೀಳುತ್ತಲೇ ಇರುತ್ತದೆ. ಇತ್ತೀಚೆಗೆ ಈ ವಿಚಾರದ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಹೀಗಿರುವಾಗಲೇ ಶಂಕರ್ ಅವರು ‘ಇಂಡಿಯನ್ 2’ ಸಿನಿಮಾದ ಶೂಟಿಂಗ್ ಆರಂಭಿಸಿದ್ದಾರೆ. ಈ ಮೂಲಕ ಯಶ್ ಫ್ಯಾನ್ಸ್​ಗೆ ಒಂದು ವಿಚಾರದಲ್ಲಿ ಸ್ಪಷ್ಟನೆ ಸಿಕ್ಕಂತೆ ಆಗಿದೆ.

‘ಇಂಡಿಯನ್’ ಸಿನಿಮಾ ಹಿಟ್ ಆಗಿತ್ತು. ಹಲವು ವರ್ಷಗಳ ಬಳಿಕ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗುತ್ತಿದೆ. ಶಂಕರ್ ನಿರ್ದೇಶನ ಇರುವ ಈ ಚಿತ್ರದಲ್ಲಿ ಕಮಲ್ ಹಾಸನ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೆಲ ವರ್ಷಗಳ ಹಿಂದೇ ಆರಂಭ ಆಗಿತ್ತು. ಆದರೆ, ಸೆಟ್​ನಲ್ಲಿ ಕ್ರೇನ್ ಅಪಘಾತ ಉಂಟಾಗಿ ಕೆಲವರು ಮೃತಪಟ್ಟರು. ಆ ಬಳಿಕ ಚಿತ್ರದ ಶೂಟಿಂಗ್ ನಿಂತಿತ್ತು. ‘ವಿಕ್ರಮ್’ ಹಿಟ್ ಆದ ಬಳಿಕ ಕಮಲ್ ಹಾಸನ್​ ಅವರು ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಶೂಟಿಂಗ್​ನಲ್ಲಿ ತೊಡಗಿಕೊಂಡಿರುವ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯಶ್​-ರಾಧಿಕಾ ಸುಂದರ ಫೋಟೋಗಳಲ್ಲಿದೆ ನಿರ್ದೇಶಕ ನಾಗರಾಜ್​ ಸೋಮಯಾಜಿ ಫೋಕಸ್​

ಸಾಮಾನ್ಯವಾಗಿ ಸ್ಟಾರ್ ನಿರ್ದೇಶಕರು ಅದರಲ್ಲೂ ಶಂಕರ್ ಅವರಂತಹ ನಿರ್ದೇಶಕರು ಏಕಕಾಲಕ್ಕೆ ಒಂದೇ ಸಿನಿಮಾ ಶೂಟಿಂಗ್ ಮಾಡೋಕೆ ಆದ್ಯತೆ ನೀಡುತ್ತಾರೆ. ಎರಡೆರಡು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದರೆ ಅವರಿಗೇ ತೊಂದರೆ. ಈ ಕಾರಣದಿಂದ ಶಂಕರ್ ಸದ್ಯದ ಮಟ್ಟಿಗಂತೂ ‘ಇಂಡಿಯನ್ 2’ ಶೂಟಿಂಗ್​ನಲ್ಲಿ ತೊಡಗಿಕೊಳ್ಳಲಿದ್ದಾರೆ. ಹೀಗಾಗಿ, ಯಶ್ ಜತೆಗೆ ಅವರು ಸಿನಿಮಾ ಮಾಡುತ್ತಾರೆ ಎಂದಾದರೂ ಅದು ಸದ್ಯಕ್ಕಂತೂ ಸೆಟ್ಟೇರುವುದಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು