ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಸಿನಿ ಚಿತ್ತಾರ

ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರವಿದೆ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌ ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ […]

ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಸಿನಿ ಚಿತ್ತಾರ

Updated on: Oct 11, 2020 | 3:46 PM

ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರವಿದೆ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.

ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌ ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶಿಸುತ್ತಿದ್ದಾರೆ. ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ.

ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ RC ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ ನವೀನ್ RC ಹಾಗೂ ಅಕ್ಷಯ್ CN ಅವರ ಸಹ ನಿರ್ಮಾಣವಿದೆ. PKH ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನ ಕಸ್ತೂರಿ ಮಹಲ್ ಚಿತ್ರಕ್ಕಿದೆ. ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್ ಮುಂತಾದವರಿದ್ದಾರೆ.

Published On - 3:41 pm, Sun, 11 October 20