AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ; ನಟಿ ಶಾನ್ವಿ ಕೈಗೆ ಪೆಟ್ಟು

‘ಬ್ಯಾಂಗ್' ಸಿನಿಮಾದಲ್ಲಿ ಶಾನ್ವಿ ಅವರದ್ದು ಗ್ಯಾಂಗ್‌ಸ್ಟರ್ ಪಾತ್ರ. ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ. ಅದಕ್ಕಾಗಿಯೇ ಅವರು ಪೂರ್ವ ತಯಾರಿ ಮಾಡಿಕೊಂಡಿದ್ದಾರೆ.

Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ; ನಟಿ ಶಾನ್ವಿ ಕೈಗೆ ಪೆಟ್ಟು
Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ; ನಟಿ ಶಾನ್ವಿ ಕೈಗೆ ಪೆಟ್ಟು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 01, 2021 | 9:03 PM

ಸಿನಿಮಾ ಶೂಟಿಂಗ್​ ವೇಳೆ ಎಷ್ಟೇ ಎಚ್ಚರಿಕೆ ತೆಗೆದುಕೊಂಡರೂ ಅವಘಡಗಳು ಸಂಭವಿಸಿ ಬಿಡುತ್ತದೆ. ಈಗ ಶಾನ್ವಿ ಶ್ರೀವಾಸ್ತವ ನಟಿಸುತ್ತಿರುವ ‘ಬ್ಯಾಂಗ್’​ ಸಿನಿಮಾ ಚಿತ್ರದ ಶೂಟಿಂಗ್​ ವೇಳೆಯೂ ಹಾಗೆಯೇ ಆಗಿದೆ. ಸಾಹಸ ಸನ್ನಿವೇಶ ಚಿತ್ರೀಕರಣದ ವೇಳೆ ಶಾನ್ವಿ ಬಿದ್ದಿದ್ದಾರೆ. ಈ ವೇಳೆ ಅವರ ಕೈಗೆ ಪೆಟ್ಟಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಶೂಟಿಂಗ್​ ನಿಂತಿದೆ. 

‘ಬ್ಯಾಂಗ್’ ಸಿನಿಮಾದಲ್ಲಿ ಶಾನ್ವಿ ಅವರದ್ದು ಗ್ಯಾಂಗ್‌ಸ್ಟರ್ ಪಾತ್ರ. ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇದೆ. ಅದಕ್ಕಾಗಿಯೇ ಅವರು ಪೂರ್ವ ತಯಾರಿ ಮಾಡಿಕೊಂಡಿದ್ದಾರೆ. ಜತೆಗೆ ಅಗತ್ಯ ಸಿದ್ಧತೆಗಳ ನಡುವೆ ಶೂಟಿಂಗ್ ಶುರು ಮಾಡಿದ್ದರು. ಆದರೆ ಮಳೆ ಎಫೆಕ್ಟ್‌ನಲ್ಲಿ ಶೂಟಿಂಗ್ ಮಾಡುವಾಗ ಶಾನ್ವಿ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ಅವರ ಕೈಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

ಈ ಚಿತ್ರಕ್ಕೆ ಶ್ರೀಗಣೇಶ್‌ ಪರಶುರಾಮ್ ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾ. ಗಾಯಕ ರಘು ದೀಕ್ಷಿತ್ ಡಾನ್ ಆಗಿ ‘ಬ್ಯಾಂಗ್‌’ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತ್ವಿಕ್ ಮುರಳೀಧರ್ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡುವುದರ ಜೊತೆಗೆ ಒಂದು  ಪಾತ್ರವನ್ನೂ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆಯುತ್ತಿದ್ದಾರೆ. ಸಾಹಸ ನಿರ್ದೇಶನವನ್ನು ಚೇತನ್ ಮಾಡುತ್ತಿದ್ದಾರೆ.

‘ಲಾಕ್‌ಡೌನ್‌ ನಂತರ ಮತ್ತೆ ಶೂಟಿಂಗ್‌ ಪ್ರಾರಂಭ ಆಗಿದ್ದು ಖುಷಿ ಕೊಟ್ಟಿದೆ. ಬ್ಯಾಂಗ್‌ ಸಿನಿಮಾ ಟೀಮ್‌ ಚೆನ್ನಾಗಿದೆ. ಫೈಟ್‌ ದೃಶ್ಯ ಮಾಡುವ ಮೊದಲು ನಾಲ್ಕೈದು ದಿನ ಟ್ರೇನಿಂಗ್‌ ಕೊಟ್ಟಿದ್ದಾರೆ’ ಎಂದು ಇತ್ತೀಚೆಗೆ ಶಾನ್ವಿ ಹೇಳಿಕೊಂಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಎಲಿಮಿನೇಷನ್​ನಲ್ಲಿ ಟ್ವಿಸ್ಟ್​; ಶನಿವಾರವೇ ಹೊರ ಬಿದ್ದ ಶುಭಾ ಪೂಂಜಾ

Are you a Virgin? ಎಂದು ಕೇಳಿದ ಅಭಿಮಾನಿಗೆ ನಟಿ ಶಾನ್ವಿ ಶ್ರೀವಾಸ್ತವ ನೀಡಿದ ಬೋಲ್ಡ್ ಉತ್ತರ ಇದು!

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ