AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವತಾರ ಪುರುಷ’ ಸಿನಿಮಾ ರಿಲೀಸ್ ದಿನಾಂಕ ಪೋಸ್ಟ್​​ಪೋನ್​; ಕಾರಣವೇನು?

ಸಿಂಪಲ್​ ಸುನಿ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ಮತ್ತು ಶರಣ್​ ಜೋಡಿಯಾಗಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ.

‘ಅವತಾರ ಪುರುಷ’ ಸಿನಿಮಾ ರಿಲೀಸ್ ದಿನಾಂಕ ಪೋಸ್ಟ್​​ಪೋನ್​; ಕಾರಣವೇನು?
ಶರಣ್​, ಆಶಿಕಾ, ಪುಷ್ಕರ್
TV9 Web
| Edited By: |

Updated on: Dec 09, 2021 | 2:06 PM

Share

ವಿಶ್ವದಲ್ಲೆಡೆ ಕೊವಿಡ್​ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿವೆ. ಈಗ ಒಮಿಕ್ರಾನ್​ ಹೆಸರಿನ ಹೊಸ ರೂಪಾಂತರಿ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕ ಮೂಡಿಸಿದೆ. ಇದರಿಂದ ಚಿತ್ರರಂಗದಲ್ಲಿ ಮತ್ತೆ ಅನಿಶ್ಚಿತತೆ ಕಾಡೋಕೆ ಆರಂಭವಾಗಿದೆ. ಇದರಿಂದ ಕೆಲ ಸಿನಿಮಾಗಳು ರಿಲೀಸ್ ದಿನಾಂಕ ಮುಂದೂಡುವ ಚಿಂತನೆ ನಡೆಸಿವೆ.  ಈಗ ‘ಸಿಂಪಲ್’​ ಸುನಿ ನಿರ್ದೇಶನದ, ಶರಣ್​ ಹಾಗೂ ಆಶಿಕಾ ರಂಗನಾಥ್​ ಅಭಿನಯದ ‘ಅವತಾರ ಪುರುಷ’ ಚಿತ್ರದ ಮೇಲೂ ಕೊರೊನಾ ಆತಂಕದ ಛಾಯೆ ಬಿದ್ದಿದೆ. ಹೀಗಾಗಿ, ಸಿನಿಮಾ ರಿಲೀಸ್​ ದಿನಾಂಕವನ್ನು ತಂಡ ಮುಂದೂಡಿದೆ.

ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನ ‘ಅವತಾರ ಪುರುಷ’ಕ್ಕೆ ಬಂಡವಾಳ ಹೂಡಿದ್ದಾರೆ.. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ. ತಾಂತ್ರಿಕವಾಗಿ ತುಂಬ ಶ್ರೀಮಂತವಾಗಿ ಮೂಡಿಬಂದಿರುವ ‘ಅವತಾರ ಪುರುಷ’ ಚಿತ್ರ ಡಿ.10ರಂದು ದೇಶಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ಆಗುತ್ತಿಲ್ಲ.

‘ಅವತಾರ ಪುರುಷ’ ಸಿನಿಮಾದಲ್ಲಿ ನಟ ಶರಣ್​ ಅವರು ಜ್ಯೂನಿಯರ್​ ಆರ್ಟಿಸ್ಟ್​ ಪಾತ್ರ ಮಾಡಿದ್ದಾರೆ. ಹಾಗಾಗಿ ಅವರು ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶರಣ್​ ಎಂದರೆ ಕಾಮಿಡಿಗೆ ಫೇಮಸ್. ಇನ್ನು, ಸುನಿ ಅವರು ತಮ್ಮದೇ ಶೈಲಿಯ ಸಿನಿಮಾಗಳಿಂದ ಗುರುತಿಸಿಕೊಂಡವರು. ಈಗ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಅವತಾರ ಪುರುಷ’ ಮೂಡಿಬಂದಿದ್ದು ಪ್ರೇಕ್ಷಕರಿಗೆ ಹೊಸ ಬಗೆಯ ಮನರಂಜನೆ ಸಿಗಲಿದೆ ಎಂಬ ಭರವಸೆಯನ್ನು ಚಿತ್ರತಂಡ ನೀಡಿತ್ತು. ಈ ಮನರಂಜನೆ ಸಂಪೂರ್ಣವಾಗಿ ಪ್ರೇಕ್ಷಕರಿಗೆ ತಲುಪಬೇಕು ಎಂಬುದು ಚಿತ್ರತಂಡದ ಆಶಯ.

ಈಗ ಎಲ್ಲೆಲ್ಲೂ ಕೊವಿಡ್​ ಭಯ ಆವರಿಸಿದೆ. ಈ ಸಂದರ್ಭದಲ್ಲಿ ನೈಟ್​ ಕರ್ಫ್ಯೂ ಮತ್ತು ವೀಕೆಂಡ್​ ಕರ್ಫ್ಯೂ ಹೇರಿದರೆ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಉಂಟಾಗಲಿದೆ. ಒಂದೊಮ್ಮೆ ಒಮಿಕ್ರಾನ್​ ಪ್ರಕರಣ ಹೆಚ್ಚಿದರೆ ಚಿತ್ರಮಂದಿರದಲ್ಲಿ ಶೇ.50 ಆಸನಭರ್ತಿಗೆ ಮಾತ್ರ ಅವಕಾಶ ನೀಡಿದರೆ ಚಿತ್ರದ ಕಲೆಕ್ಷನ್​ಗೆ ಹೊಡೆತಬೀಳಲಿದೆ. ಈ ಆತಂಕದ ಮಧ್ಯೆ ಸಾಕಷ್ಟು ಮಂದಿ ಸಿನಿಮಾ ನೋಡೋಕೆ ಹಿಂದೇಟು ಹಾಕುತ್ತಾರೆ. ಹಾಗಾಗಬಾರದು ಎಂಬುದು ಚಿತ್ರತಂಡದ ಆಶಯ. ಈ ಕಾರಣಕ್ಕೆ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದೂಡಲು ಚಿತ್ರತಂಡ ನಿರ್ಧರಿಸಿದೆ. ಕೊರೊನಾ ಭಯ ಕಳೆದ ನಂತರ ಸೂಕ್ತ ದಿನಾಂಕ ನಿಗದಿ ಮಾಡಿ ಈ ಬಗ್ಗೆ ಘೋಷಣೆ ಮಾಡಲು ಪುಷ್ಕರ್​ ಮಲ್ಲಿಕಾರ್ಜುನಯ್ಯ ನಿರ್ಧರಿಸಿದ್ದಾರೆ.

ಇದನ್ನೂ ಓದಿ: Samantha: ‘ಪುಷ್ಪ’ ಐಟಮ್​ ಸಾಂಗ್​ನಲ್ಲಿ ಸಮಂತಾ ಹಾಟ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ

ಶಂಕರ್​ ನಾಗ್​ ಹೊಸ ಸಿನಿಮಾ ‘ಅಬ ಜಬ ದಬ’; ಕೌತುಕ ಮೂಡಿಸಿದ ‘ಕನ್ನಡ್​ ಗೊತ್ತಿಲ್ಲ’ ನಿರ್ದೇಶಕ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ