AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವತಾರ ಪುರುಷ’ ಸಿನಿಮಾ ರಿಲೀಸ್ ದಿನಾಂಕ ಪೋಸ್ಟ್​​ಪೋನ್​; ಕಾರಣವೇನು?

ಸಿಂಪಲ್​ ಸುನಿ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ಮತ್ತು ಶರಣ್​ ಜೋಡಿಯಾಗಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ.

‘ಅವತಾರ ಪುರುಷ’ ಸಿನಿಮಾ ರಿಲೀಸ್ ದಿನಾಂಕ ಪೋಸ್ಟ್​​ಪೋನ್​; ಕಾರಣವೇನು?
ಶರಣ್​, ಆಶಿಕಾ, ಪುಷ್ಕರ್
TV9 Web
| Edited By: |

Updated on: Dec 09, 2021 | 2:06 PM

Share

ವಿಶ್ವದಲ್ಲೆಡೆ ಕೊವಿಡ್​ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿವೆ. ಈಗ ಒಮಿಕ್ರಾನ್​ ಹೆಸರಿನ ಹೊಸ ರೂಪಾಂತರಿ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕ ಮೂಡಿಸಿದೆ. ಇದರಿಂದ ಚಿತ್ರರಂಗದಲ್ಲಿ ಮತ್ತೆ ಅನಿಶ್ಚಿತತೆ ಕಾಡೋಕೆ ಆರಂಭವಾಗಿದೆ. ಇದರಿಂದ ಕೆಲ ಸಿನಿಮಾಗಳು ರಿಲೀಸ್ ದಿನಾಂಕ ಮುಂದೂಡುವ ಚಿಂತನೆ ನಡೆಸಿವೆ.  ಈಗ ‘ಸಿಂಪಲ್’​ ಸುನಿ ನಿರ್ದೇಶನದ, ಶರಣ್​ ಹಾಗೂ ಆಶಿಕಾ ರಂಗನಾಥ್​ ಅಭಿನಯದ ‘ಅವತಾರ ಪುರುಷ’ ಚಿತ್ರದ ಮೇಲೂ ಕೊರೊನಾ ಆತಂಕದ ಛಾಯೆ ಬಿದ್ದಿದೆ. ಹೀಗಾಗಿ, ಸಿನಿಮಾ ರಿಲೀಸ್​ ದಿನಾಂಕವನ್ನು ತಂಡ ಮುಂದೂಡಿದೆ.

ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನ ‘ಅವತಾರ ಪುರುಷ’ಕ್ಕೆ ಬಂಡವಾಳ ಹೂಡಿದ್ದಾರೆ.. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ. ತಾಂತ್ರಿಕವಾಗಿ ತುಂಬ ಶ್ರೀಮಂತವಾಗಿ ಮೂಡಿಬಂದಿರುವ ‘ಅವತಾರ ಪುರುಷ’ ಚಿತ್ರ ಡಿ.10ರಂದು ದೇಶಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ಆಗುತ್ತಿಲ್ಲ.

‘ಅವತಾರ ಪುರುಷ’ ಸಿನಿಮಾದಲ್ಲಿ ನಟ ಶರಣ್​ ಅವರು ಜ್ಯೂನಿಯರ್​ ಆರ್ಟಿಸ್ಟ್​ ಪಾತ್ರ ಮಾಡಿದ್ದಾರೆ. ಹಾಗಾಗಿ ಅವರು ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶರಣ್​ ಎಂದರೆ ಕಾಮಿಡಿಗೆ ಫೇಮಸ್. ಇನ್ನು, ಸುನಿ ಅವರು ತಮ್ಮದೇ ಶೈಲಿಯ ಸಿನಿಮಾಗಳಿಂದ ಗುರುತಿಸಿಕೊಂಡವರು. ಈಗ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಅವತಾರ ಪುರುಷ’ ಮೂಡಿಬಂದಿದ್ದು ಪ್ರೇಕ್ಷಕರಿಗೆ ಹೊಸ ಬಗೆಯ ಮನರಂಜನೆ ಸಿಗಲಿದೆ ಎಂಬ ಭರವಸೆಯನ್ನು ಚಿತ್ರತಂಡ ನೀಡಿತ್ತು. ಈ ಮನರಂಜನೆ ಸಂಪೂರ್ಣವಾಗಿ ಪ್ರೇಕ್ಷಕರಿಗೆ ತಲುಪಬೇಕು ಎಂಬುದು ಚಿತ್ರತಂಡದ ಆಶಯ.

ಈಗ ಎಲ್ಲೆಲ್ಲೂ ಕೊವಿಡ್​ ಭಯ ಆವರಿಸಿದೆ. ಈ ಸಂದರ್ಭದಲ್ಲಿ ನೈಟ್​ ಕರ್ಫ್ಯೂ ಮತ್ತು ವೀಕೆಂಡ್​ ಕರ್ಫ್ಯೂ ಹೇರಿದರೆ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಉಂಟಾಗಲಿದೆ. ಒಂದೊಮ್ಮೆ ಒಮಿಕ್ರಾನ್​ ಪ್ರಕರಣ ಹೆಚ್ಚಿದರೆ ಚಿತ್ರಮಂದಿರದಲ್ಲಿ ಶೇ.50 ಆಸನಭರ್ತಿಗೆ ಮಾತ್ರ ಅವಕಾಶ ನೀಡಿದರೆ ಚಿತ್ರದ ಕಲೆಕ್ಷನ್​ಗೆ ಹೊಡೆತಬೀಳಲಿದೆ. ಈ ಆತಂಕದ ಮಧ್ಯೆ ಸಾಕಷ್ಟು ಮಂದಿ ಸಿನಿಮಾ ನೋಡೋಕೆ ಹಿಂದೇಟು ಹಾಕುತ್ತಾರೆ. ಹಾಗಾಗಬಾರದು ಎಂಬುದು ಚಿತ್ರತಂಡದ ಆಶಯ. ಈ ಕಾರಣಕ್ಕೆ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದೂಡಲು ಚಿತ್ರತಂಡ ನಿರ್ಧರಿಸಿದೆ. ಕೊರೊನಾ ಭಯ ಕಳೆದ ನಂತರ ಸೂಕ್ತ ದಿನಾಂಕ ನಿಗದಿ ಮಾಡಿ ಈ ಬಗ್ಗೆ ಘೋಷಣೆ ಮಾಡಲು ಪುಷ್ಕರ್​ ಮಲ್ಲಿಕಾರ್ಜುನಯ್ಯ ನಿರ್ಧರಿಸಿದ್ದಾರೆ.

ಇದನ್ನೂ ಓದಿ: Samantha: ‘ಪುಷ್ಪ’ ಐಟಮ್​ ಸಾಂಗ್​ನಲ್ಲಿ ಸಮಂತಾ ಹಾಟ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ

ಶಂಕರ್​ ನಾಗ್​ ಹೊಸ ಸಿನಿಮಾ ‘ಅಬ ಜಬ ದಬ’; ಕೌತುಕ ಮೂಡಿಸಿದ ‘ಕನ್ನಡ್​ ಗೊತ್ತಿಲ್ಲ’ ನಿರ್ದೇಶಕ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ