AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 10ಕ್ಕೆ ರಿಲೀಸ್ ಆಗುತ್ತಿಲ್ಲ ಶರಣ್ ನಟನೆಯ ‘ಛೂ ಮಂತರ್’ ಸಿನಿಮಾ; ಕಾರಣವೇನು?

‘ತರುಣ್ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಒಟ್ಟಾಗಿ ‘ಛೂ ಮಂತರ್’ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರವನ್ನು ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ. ‘ಕರ್ವ’ ಸಿನಿಮಾ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಇದನ್ನು ಜನರು ಇಷ್ಟಪಟ್ಟಿದ್ದರು. ಹೀಗಾಗಿ, ‘ಛೂ‌ ಮಂತರ್’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

ಮೇ 10ಕ್ಕೆ ರಿಲೀಸ್ ಆಗುತ್ತಿಲ್ಲ ಶರಣ್ ನಟನೆಯ ‘ಛೂ ಮಂತರ್’ ಸಿನಿಮಾ; ಕಾರಣವೇನು?
ಶರಣ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 07, 2024 | 3:09 PM

ಲೋಕಸಭಾ ಚನಾವಣೆಯು ಕರ್ನಾಟಕದಲ್ಲಿ ಎರಡು ಹಂತದಲ್ಲಿ ನಡೆಯುತ್ತಿದೆ. ಇಂದಿಗೆ (ಮೇ 7) ಕರ್ನಾಟಕ ಭಾಗಕ್ಕೆ ಮತದಾನ ಪೂರ್ಣಗೊಳ್ಳುತ್ತಿದೆ. ಹೀಗಾಗಿ ಮೇ 10ರಂದು ಅನೇಕ ತಂಡಗಳು ಸಿನಿಮಾ ರಿಲೀಸ್ ಮಾಡುವ ಘೋಷಣೆ ಮಾಡಿವೆ. ಇದರಲ್ಲಿ ಶರಣ್ (Sharan) ನಟನೆಯ ‘ಛೂ ಮಂತರ್’ ಸಿನಿಮಾ ಕೂಡ ಇತ್ತು. ಆದರೆ, ಚಿತ್ರತಂಡ ಈಗ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಕ್ಕಿದೆ.

‘ತರುಣ್ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಒಟ್ಟಾಗಿ ‘ಛೂ ಮಂತರ್’ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರವನ್ನು ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ. ‘ಕರ್ವ’ ಸಿನಿಮಾ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಇದನ್ನು ಜನರು ಇಷ್ಟಪಟ್ಟಿದ್ದರು. ಹೀಗಾಗಿ, ‘ಛೂ‌ ಮಂತರ್’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈ ಮೊದಲು ಸಿನಿಮಾನ ಮೇ 10ರಂದು ಬಿಡುಗಡೆ ಮಾಡಲು ತಂಡ ನಿರ್ಧರಿಸಿತ್ತು. ಆದರೆ, ಈಗ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ.

ಈ ಸಿನಿಮಾನ ನೋಡಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು ತಂಡಕ್ಕೆ ಒಂದು ಕಿವಿಮಾತು ಹೇಳಿದ್ದರು. ಇದನ್ನು ತಂಡ ಸ್ವೀಕರಿಸಿದೆ. ಸದ್ಯ ಕರ್ನಾಟಕದಲ್ಲಿ ಚುನಾವಣೆ ಪೂರ್ಣಗೊಂಡಿದ್ದರೂ ಉಳಿದ ಭಾಗಗಳಲ್ಲಿ ಹಂತ ಹಂತವಾಗಿ ಮತದಾನ ನಡೆಯುತ್ತಿದೆ. ಹೀಗಾಗಿ ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಿ ಎಂದು ಸಲಹೆ ಕೊಟ್ಟಿದ್ದರು. ಈ ಕಾರಣಕ್ಕೆ ನಿರ್ಮಾಪಕ ತರುಣ್ ಶಿವಪ್ಪ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ. ಹೊಸ ಬಿಡುಗಡೆ ದಿನಾಂಕ ಶೀಘ್ರವೇ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: Choo Mantar Movie: ‘ಛೂ ಮಂತರ್’ ಸಿನಿಮಾ ಸೆಟ್​​ನಲ್ಲಿ ಶರಣ್​ಗೆ ಹಾರರ್ ಅನುಭವ

‘ಛೂ ಮಂತರ್’ ಸಿನಿಮಾದಲ್ಲಿ ಶರಣ್ ಜೊತೆ ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮೊದಲಾದವರು ನಟಿಸಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ಸಂಯೋಜನೆ, ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್
Daily Devotional: ರಾತ್ರಿ ವೇಳೆ ನಾಯಿಗಳು ಊಳಿಡೋದರ ಅರ್ಥವೇನು?
Daily Devotional: ರಾತ್ರಿ ವೇಳೆ ನಾಯಿಗಳು ಊಳಿಡೋದರ ಅರ್ಥವೇನು?