AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 10ಕ್ಕೆ ರಿಲೀಸ್ ಆಗುತ್ತಿಲ್ಲ ಶರಣ್ ನಟನೆಯ ‘ಛೂ ಮಂತರ್’ ಸಿನಿಮಾ; ಕಾರಣವೇನು?

‘ತರುಣ್ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಒಟ್ಟಾಗಿ ‘ಛೂ ಮಂತರ್’ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರವನ್ನು ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ. ‘ಕರ್ವ’ ಸಿನಿಮಾ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಇದನ್ನು ಜನರು ಇಷ್ಟಪಟ್ಟಿದ್ದರು. ಹೀಗಾಗಿ, ‘ಛೂ‌ ಮಂತರ್’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

ಮೇ 10ಕ್ಕೆ ರಿಲೀಸ್ ಆಗುತ್ತಿಲ್ಲ ಶರಣ್ ನಟನೆಯ ‘ಛೂ ಮಂತರ್’ ಸಿನಿಮಾ; ಕಾರಣವೇನು?
ಶರಣ್
TV9 Web
| Edited By: |

Updated on: May 07, 2024 | 3:09 PM

Share

ಲೋಕಸಭಾ ಚನಾವಣೆಯು ಕರ್ನಾಟಕದಲ್ಲಿ ಎರಡು ಹಂತದಲ್ಲಿ ನಡೆಯುತ್ತಿದೆ. ಇಂದಿಗೆ (ಮೇ 7) ಕರ್ನಾಟಕ ಭಾಗಕ್ಕೆ ಮತದಾನ ಪೂರ್ಣಗೊಳ್ಳುತ್ತಿದೆ. ಹೀಗಾಗಿ ಮೇ 10ರಂದು ಅನೇಕ ತಂಡಗಳು ಸಿನಿಮಾ ರಿಲೀಸ್ ಮಾಡುವ ಘೋಷಣೆ ಮಾಡಿವೆ. ಇದರಲ್ಲಿ ಶರಣ್ (Sharan) ನಟನೆಯ ‘ಛೂ ಮಂತರ್’ ಸಿನಿಮಾ ಕೂಡ ಇತ್ತು. ಆದರೆ, ಚಿತ್ರತಂಡ ಈಗ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಕ್ಕಿದೆ.

‘ತರುಣ್ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಒಟ್ಟಾಗಿ ‘ಛೂ ಮಂತರ್’ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರವನ್ನು ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ. ‘ಕರ್ವ’ ಸಿನಿಮಾ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಇದನ್ನು ಜನರು ಇಷ್ಟಪಟ್ಟಿದ್ದರು. ಹೀಗಾಗಿ, ‘ಛೂ‌ ಮಂತರ್’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈ ಮೊದಲು ಸಿನಿಮಾನ ಮೇ 10ರಂದು ಬಿಡುಗಡೆ ಮಾಡಲು ತಂಡ ನಿರ್ಧರಿಸಿತ್ತು. ಆದರೆ, ಈಗ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ.

ಈ ಸಿನಿಮಾನ ನೋಡಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು ತಂಡಕ್ಕೆ ಒಂದು ಕಿವಿಮಾತು ಹೇಳಿದ್ದರು. ಇದನ್ನು ತಂಡ ಸ್ವೀಕರಿಸಿದೆ. ಸದ್ಯ ಕರ್ನಾಟಕದಲ್ಲಿ ಚುನಾವಣೆ ಪೂರ್ಣಗೊಂಡಿದ್ದರೂ ಉಳಿದ ಭಾಗಗಳಲ್ಲಿ ಹಂತ ಹಂತವಾಗಿ ಮತದಾನ ನಡೆಯುತ್ತಿದೆ. ಹೀಗಾಗಿ ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಿ ಎಂದು ಸಲಹೆ ಕೊಟ್ಟಿದ್ದರು. ಈ ಕಾರಣಕ್ಕೆ ನಿರ್ಮಾಪಕ ತರುಣ್ ಶಿವಪ್ಪ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ. ಹೊಸ ಬಿಡುಗಡೆ ದಿನಾಂಕ ಶೀಘ್ರವೇ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: Choo Mantar Movie: ‘ಛೂ ಮಂತರ್’ ಸಿನಿಮಾ ಸೆಟ್​​ನಲ್ಲಿ ಶರಣ್​ಗೆ ಹಾರರ್ ಅನುಭವ

‘ಛೂ ಮಂತರ್’ ಸಿನಿಮಾದಲ್ಲಿ ಶರಣ್ ಜೊತೆ ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮೊದಲಾದವರು ನಟಿಸಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ಸಂಯೋಜನೆ, ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು