AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣ್​-ಆಶಿಕಾ ನಟನೆಯ ‘ಅವತಾರ ಪುರುಷ 2’ ಚಿತ್ರಕ್ಕೆ ಬಿಡುಗಡೆ ಭಾಗ್ಯ

‘ಅವತಾರ ಪುರುಷ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್​ 22ರಂದು ಈ ಸಿನಿಮಾವನ್ನು ತೆರೆಕಾಣಿಸಲು ನಿರ್ಮಾಪಕ ಪುಷ್ಕರ್​ ಮಲ್ಲಿಕಾರ್ಜುನಯ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಶರಣ್​, ಆಶಿಕಾ ರಂಗನಾಥ್​, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ಸುಧಾರಾಣಿ, ಭವ್ಯಾ ಮುಂತಾದವರು ನಟಿಸಿದ್ದಾರೆ. 150ರಿಂದ 200 ಚಿತ್ರಮಂದಿರಗಳಲ್ಲಿ ‘ಅವತಾರ ಪುರುಷ 2’ ತೆರೆಕಾಣಲಿದೆ.

ಶರಣ್​-ಆಶಿಕಾ ನಟನೆಯ ‘ಅವತಾರ ಪುರುಷ 2’ ಚಿತ್ರಕ್ಕೆ ಬಿಡುಗಡೆ ಭಾಗ್ಯ
‘ಅವತಾರ ಪುರುಷ 2’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Mar 07, 2024 | 10:48 PM

Share

ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ (Pushkara Mallikarjunaiah) ಅವರು ಮತ್ತೆ ಆ್ಯಕ್ಟೀವ್​ ಆಗಿದ್ದಾರೆ. ಅವರು ನಿರ್ಮಾಣ ಮಾಡಿರುವ ‘ಅವತಾರ ಪುರುಷ 2’ ಸಿನಿಮಾ ಮಾರ್ಚ್ 22ಕ್ಕೆ ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಶರಣ್ (Sharan) ಅವರು ನಾಯಕನಾಗಿ ಅಭಿನಯಿಸಿದ್ದಾರೆ. ಅವರಿಗೆ ಆಶಿಕಾ ರಂಗನಾಥ್​ ಜೋಡಿ ಆಗಿದ್ದಾರೆ. ‘ಒಂದು ಸರಳ ಪ್ರೇಮಕಥೆ’ ಸಿನಿಮಾದ ಯಶಸ್ಸಿನಲ್ಲಿ ಇರುವ ಸಿಂಪಲ್​ ಸುನಿ ಅವರು ‘ಅವತಾರ ಪುರುಷ 2’ (Avatara Purusha 2) ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡದವರು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ‘ಅವತಾರ ಪುರುಷ 2’ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಯಾಕೆಂದರೆ, 2022ರಲ್ಲೇ ‘ಅವತಾರ ಪುರುಷ’ ರಿಲೀಸ್​ ಆಗಿತ್ತು. ಆಗ ಅದರ ಸೀಕ್ವೆಲ್​ ಬರುತ್ತಿದೆ. ಈ ಬಗ್ಗೆ ನಿರ್ದೇಶಕ ಸಿಂಪಲ್​ ಸುನಿ ಮಾತನಾಡಿದ್ದಾರೆ. ‘2 ವರ್ಷಗಳಿಂದ ಸ್ನೇಹಿತರು ಮತ್ತು ಅಭಿಮಾನಿಗಳು ‘ಅವತಾರ ಪುರುಷ 2’ ಯಾವಾಗ ಬಿಡುಗಡೆ ಆಗತ್ತೆ ಅಂತ ಕೇಳುತ್ತಿದ್ದರು. ಈಗ ನಮ್ಮ ಸಿನಿಮಾದ ರಿಲೀಸ್​ ಡೇಟ್​ ನಿಗದಿ ಆಗಿದೆ. ಚಿತ್ರದ ಮೊದಲ ಭಾಗ ನೋಡಿದವರಿಗೂ ಹಾಗೂ ನೋಡದೇ ಇರುವವರಿಗೂ ಈ ಸಿನಿಮಾ ಇಷ್ಟವಾಗಲಿದೆ’ ಎಂದು ಸುನಿ ಹೇಳಿದ್ದಾರೆ.

ಇದನ್ನೂ ಓದಿ: ಕಪ್ಪು ಸೀರೆಯಲ್ಲಿ ಮಿಂಚಿದ ನಟಿ ಆಶಿಕಾ ರಂಗನಾಥ್

ಕುಮಾರ ಎಂಬ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಅವರು ನಟಿಸಿದ್ದಾರೆ. ಸಾಯಿಕುಮಾರ್, ಸುಧಾರಾಣಿ, ಸಾಧು ಕೋಕಿಲ, ಭವ್ಯ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ‘ಕಲಾವಿದರು ಮತ್ತು ತಾಂತ್ರಿಕ ವರ್ಗದವರ ಸಹಕಾರದಿಂದ ಸಿನಿಮಾ ಉತ್ತಮವಾಗಿ ಮೂಡಿಬಂದಿದೆ’ ಎಂದು ಸುನಿ ಹೇಳಿದ್ದಾರೆ. ಈ ಸಿನಿಮಾವನ್ನು ಮೋಹನ್ ಅವರು ವಿತರಣೆ ಮಾಡುತ್ತಿದ್ದಾರೆ. ‘ಪ್ರೇಕ್ಷಕರಿಗೆ ಈ ಸಿನಿಮಾ ಸಖತ್​ ಮನರಂಜನೆ ನೀಡುವುದು ಗ್ಯಾರಂಟಿ. ಶೀಘ್ರದಲ್ಲೇ ಟ್ರೇಲರ್ ಮತ್ತು ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡಲಿದ್ದೇವೆ. ಸಿನಿಮಾ ಉತ್ತಮವಾಗಿ ಮೂಡಿಬರಲು ಸಹಕರಿಸಿದ ನಮ್ಮ ಇಡೀ ತಂಡಕ್ಕೆ ಧನ್ಯವಾದಗಳು’ ಎಂದು ಪುಷ್ಕರ್ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 5ಕ್ಕೆ ಬರ್ತಿದೆ ಶರಣ್ ನಟನೆಯ ಹಾರರ್ ಸಿನಿಮಾ ‘ಛೂ‌ ಮಂತರ್’

ನಟ ಶರಣ್​ ಕೂಡ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ಡೈರೆಕ್ಟರ್​ ಸಿಂಪಲ್ ಸುನಿ ಮತ್ತು ನಿರ್ಮಾಪಕ ಪುಷ್ಕರ್ ಅವರಿಗೆ ಸಿನಿಮಾ ಮೇಲೆ ಇರುವ ಪ್ರೀತಿ ನೋಡಿ ನನಗೆ ಬಹಳ ಖುಷಿ ಆಯಿತು. ಈ ಸಿನಿಮಾ ಯಾವಾಗ ರಿಲೀಸ್​ ಅಂತ ಅನೇಕರು ನನ್ನ ಬಳಿ ಕೂಡ ಕೇಳಿದ್ದಾರೆ. ಚಿತ್ರದ 2ನೇ ಭಾಗ ಇಷ್ಟು ಕುತೂಹಲ ಮೂಡಿಸಿದೆ ಎಂದರೆ ಮೊದಲ ಭಾಗ ನಿಜಕ್ಕೂ ಜನರಿಗೆ ಇಷ್ಟ ಆಗಿದೆ ಎಂದೇ ಅರ್ಥ. ನಾನು ಕೂಡ ಅಭಿಮಾನಿಗಳ ಜೊತೆ ಈ ಸಿನಿಮಾವನ್ನು ಕಾದಿದ್ದೇನೆ’ ಎಂದು ಶರಣ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ