AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Shishyaru: ‘ಜೀ5’ ಒಟಿಟಿಯಲ್ಲಿ ಸೂಪರ್​ ಹಿಟ್​ ‘ಗುರು ಶಿಷ್ಯರು’ ಚಿತ್ರ; ನ.11ರಿಂದ ಪ್ರಸಾರ

Zee5 OTT: ಎಲ್ಲ ವಯೋಮಾನದ ಪ್ರೇಕ್ಷಕರಿಗೂ ಇಷ್ಟ ಆಗುವಂತಹ ಸಿನಿಮಾ ‘ಗುರು ಶಿಷ್ಯರು’. ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ ಹೆಚ್ಚು ಆಪ್ತ ಎನಿಸುತ್ತದೆ.

Guru Shishyaru: ‘ಜೀ5’ ಒಟಿಟಿಯಲ್ಲಿ ಸೂಪರ್​ ಹಿಟ್​ ‘ಗುರು ಶಿಷ್ಯರು’ ಚಿತ್ರ; ನ.11ರಿಂದ ಪ್ರಸಾರ
ಗುರು ಶಿಷ್ಯರು
TV9 Web
| Updated By: ಮದನ್​ ಕುಮಾರ್​|

Updated on:Nov 09, 2022 | 3:10 PM

Share

ನಿರ್ದೇಶಕ ಜಡೇಶ್ ಕುಮಾರ್ ಹಂಪಿ ಆ್ಯಕ್ಷನ್​-ಕಟ್​ ಹೇಳಿರುವ ‘ಗುರು ಶಿಷ್ಯರು’ (Guru Shishyaru) ಚಿತ್ರವು ಪ್ರೇಕ್ಷಕರ ಮನ ಗೆದ್ದಿದೆ. ಈ ಸಿನಿಮಾದಲ್ಲಿ ಖ್ಯಾತ ನಟ ಶರಣ್ (Sharan)​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅವರಿಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಖೊ ಖೊ ಆಟದ ಕಥಾಹಂದರ ಇದೆ. ಕನ್ನಡದಲ್ಲಿ ಕ್ರೀಡೆಯ ಕಥೆ ಇಟ್ಟುಕೊಂಡು ಬಂದ ಸಿನಿಮಾಗಳ ಸಂಖ್ಯೆ ವಿರಳ. ಆ ದೃಷ್ಟಿಯಲ್ಲಿ ನೋಡಿದರೆ ‘ಗುರು ಶಿಷ್ಯರು’ ಸಿನಿಮಾ ವಿಶೇಷ ಎನಿಸುತ್ತದೆ. ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಂಡ ಈ ಸಿನಿಮಾ ಈಗ ಒಟಿಟಿಗೆ ಕಾಲಿಡುತ್ತಿದೆ. ಜೀ2 (Zee5) ಒಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾಗುತ್ತಿದೆ.

ಎಲ್ಲ ವಯೋಮಾನದ ಪ್ರೇಕ್ಷಕರಿಗೂ ಇಷ್ಟ ಆಗುವಂತಹ ಸಿನಿಮಾ ‘ಗುರು ಶಿಷ್ಯರು’. ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ ಹೆಚ್ಚು ಆಪ್ತ ಎನಿಸುತ್ತದೆ. ಯಾಕೆಂದರೆ ಈ ಸಿನಿಮಾದಲ್ಲಿ ಹೈಸ್ಕೂಲ್​ ಮಕ್ಕಳ ಕಥೆ ಇದೆ. ಖೊ ಖೊ ಆಟದ ಹಿನ್ನೆಲೆಯಲ್ಲಿ ಮಕ್ಕಳಿಗೆ ಅನೇಕ ವಿಚಾರಗಳನ್ನು ತಿಳಿಸಿಕೊಡುವ ಗುಣ ಈ ಸಿನಿಮಾದ ಕಥೆಗೆ ಇದೆ. ಜೊತೆಗೆ ಶರಣ್ ಅವರು ಭರ್ಜರಿ ಕಾಮಿಡಿ ಕೂಡ ಪ್ರೇಕ್ಷಕರಿಗೆ ಕಚಗುಳಿ ಇಡುತ್ತದೆ. ಚಿಕ್ಕದಾದ ಒಂದು ಲವ್​ ಸ್ಟೋರಿ ಸಹ ಗಮನ ಸೆಳೆಯುತ್ತದೆ.

ಇಷ್ಟೆಲ್ಲ ಅಂಶಗಳನ್ನು ಒಳಗೊಂಡಿರುವ ‘ಗುರು ಶಿಷ್ಯರು’ ಸಿನಿಮಾದ ಸ್ಟ್ರೀಮಿಂಗ್​ ನವೆಂಬರ್​ 11ರಂದು ಜೀ5 ಒಟಿಟಿಯಲ್ಲಿ ಆರಂಭ ಆಗಲಿದೆ. ನವೆಂಬರ್​ 14ರಂದು ಮಕ್ಕಳ ದಿನಾಚರಣೆ. ಅದರ ಹೊಸ್ತಿಲಿನಲ್ಲಿ ಒಟಿಟಿಗೆ ಕಾಲಿಡುತ್ತಿರುವ ಈ ಸಿನಿಮಾ ಎಲ್ಲ ಮಕ್ಕಳಿಗೆ ಮಸ್ತ್​ ಮನರಂಜನೆ ನೀಡಲಿದೆ. ಥಿಯೇಟರ್​ನಲ್ಲಿ ಸೆಪ್ಟೆಂಬರ್ 23ರಂದು ರಾಜ್ಯಾದ್ಯಂತ ತೆರೆಕಂಡ ಈ ಸಿನಿಮಾದಲ್ಲಿ ದತ್ತಣ್ಣ, ಅಪೂರ್ವ ಕಾಸರವಳ್ಳಿ ಕೂಡ ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ
Image
Bhool Bhulaiyaa 2: ಒಟಿಟಿಗೆ ಬರ್ತಿದೆ ‘ಭೂಲ್​ ಭುಲಯ್ಯ 2’; ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ಗೆ ಸಿಹಿ ಸುದ್ದಿ​ ನೀಡಿದ ನೆಟ್​ಫ್ಲಿಕ್ಸ್​
Image
ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ 200 ಕೋಟಿ ರೂಪಾಯಿ ಲಾಭ ಮಾಡಿದ ‘ವಿಕ್ರಮ್​’ ಸಿನಿಮಾ
Image
‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

ಮೊದಲ ಲಾಕ್​ ಡೌನ್​ ಬಳಿಕ ಒಟಿಟಿ ಪ್ರಾಬಲ್ಯ ಹೆಚ್ಚಾಯಿತು. ಮನೆಯಲ್ಲೇ ಕುಳಿತು ಸಿನಿಮಾ ನೋಡಲು ಬಯಸುವ ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಿದೆ. ಹಾಗಾಗಿ ಹೊಸ ಹೊಸ ಸಿನಿಮಾಗಳನ್ನು ಖರೀದಿಸುವಲ್ಲಿ ಎಲ್ಲ ಪ್ರಮುಖ ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ಈಗ ‘ಗುರು ಶಿಷ್ಯರು’ ಚಿತ್ರದ ಒಟಿಟಿ ಹಕ್ಕುಗಳು ‘ಜೀ5’ ಸಂಸ್ಥೆಯ ಪಾಲಾಗಿದೆ.

ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ಕೂಡ ಇತ್ತೀಚೆಗೆ ‘ಜೀ5’ನಲ್ಲಿ ಪ್ರಸಾರ ಆರಂಭಿಸಿತು. ದಾಖಲೆ ಪ್ರಮಾಣದಲ್ಲಿ ವೀಕ್ಷಣೆ ಕಂಡಿತು. ಅದೇ ರೀತಿ ‘ಗಾಳಿಪಟ’ ಕೂಡ ಸದ್ದು ಮಾಡಿತು. ಅದರ ಬೆನ್ನಲ್ಲೇ ‘ಗುರು ಶಿಷ್ಯರು’ ಚಿತ್ರ ಒಟಿಟಿಗೆ ಕಾಲಿಡಲು ಸಜ್ಜಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:10 pm, Wed, 9 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!