Sharan: ‘ಅವತಾರ ಪುರುಷ’ ರಿಲೀಸ್​ಗೆ ಮುಹೂರ್ತ ಫಿಕ್ಸ್; ಸಾವು- ಬದುಕು ನಡುವಿನ ಕೊನೆಯ ಆಸರೆ ಈ ಸಿನಿಮಾ ಎಂದ ಪುಷ್ಕರ್

Simpe Suni | Avatara Purusha: ಶರಣ್ ಹಾಗೂ ಆಶಿಕಾ ರಂಗನಾಥ್ ನಟನೆಯ ‘ಅವತಾರ ಪುರುಷ’ ಹಲವು ಕಾರಣಗಳಿಗೆ ಸದ್ದು ಮಾಡುತ್ತಿರುವ ಚಿತ್ರ. ಇದೀಗ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

Sharan: ‘ಅವತಾರ ಪುರುಷ’ ರಿಲೀಸ್​ಗೆ ಮುಹೂರ್ತ ಫಿಕ್ಸ್; ಸಾವು- ಬದುಕು ನಡುವಿನ ಕೊನೆಯ ಆಸರೆ ಈ ಸಿನಿಮಾ ಎಂದ ಪುಷ್ಕರ್
‘ಅವತಾರ ಪುರುಷ’ ಚಿತ್ರದ ಹೊಸ ಪೋಸ್ಟರ್
Follow us
| Updated By: shivaprasad.hs

Updated on:Mar 11, 2022 | 8:56 PM

ಸ್ಯಾಂಡಲ್​ವುಡ್​ನ ಹಲವು ಚಿತ್ರಗಳು ಹೊಸ ಬಿಡುಗಡೆ ದಿನಾಂಕಗಳನ್ನು ಘೋಷಿಸಿಕೊಳ್ಳುತ್ತಿವೆ. ಈ ಪಟ್ಟಿಗೆ ಹೊಸ ಸೇರ್ಪಡೆ ‘ಅವತಾರ ಪುರುಷ’ (Avatara Purusha). ಶರಣ್ (Sharan) ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ಅವರಿಗೆ ಜತೆಯಾಗಿ ಬಣ್ಣಹಚ್ಚಿರುವವರು ಆಶಿಕಾ ರಂಗನಾಥ್. ಈಗಾಗಲೇ ತೆರೆಯ ಮೇಲೆ ಮೋಡಿ ಮಾಡಿರುವ ಈ ಜೋಡಿಯನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ಎಲ್ಲವೂ ಸರಿಯಿದ್ದಿದ್ದರೆ 2021ರ ಡಿಸೆಂಬರ್​ನಲ್ಲೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ನಿಯಮಾವಳಿಗಳ ಕಾರಣದಿಂದ ಚಿತ್ರದ ರಿಲೀಸ್ ಮುಂದೂಡಲಾಗಿತ್ತು. ಇದೀಗ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಲಾಗಿದೆ. ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರ ಮೇ 6ರಂದು ತೆರೆಗೆ ಬರಲಿದೆ. ಈ ಕುರಿತು ಟ್ವೀಟ್ ಮಾಡಿರುವ ಸುನಿ, ‘‘ಕಪ್ಪುಜಾದು ಶುರುವಾಗುವ ಸಮಯ. ಮೇ 6ಂದು ಬಿಡುಗಡೆ. ಆಶೀರ್ವಾದವಿರಲಿ’’ ಎಂದು ಬರೆದಿದ್ದಾರೆ. ಚಿತ್ರದ ರಿಲೀಸ್ ಜತೆಗೆ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದ್ದು, ಗಮನ ಸೆಳೆಯುತ್ತಿದೆ.

ಖ್ಯಾತ ಕಲಾವಿದರ ದಂಡೇ ಚಿತ್ರದಲ್ಲಿದ್ದು, ಎಲ್ಲರ ಲುಕ್​ಗಳನ್ನು ಒಳಗೊಂಡಿರುವ ಪೋಸ್ಟರ್​ಅನ್ನು ಹಂಚಿಕೊಳ್ಳಲಾಗಿದೆ. ಶ್ರೀನಗರ ಕಿಟ್ಟಿ, ಆಶಿಕಾ ರಂಗನಾಥ್ ಸೇರಿದಂತೆ ಎಲ್ಲರ ಗೆಟಪ್ ಕುತೂಹಲ ಮೂಡಿಸುತ್ತಿದೆ. ಜೂನಿಯರ್ ಆರ್ಟಿಸ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಶರಣ್, ಹಲವು ವಿಭಿನ್ನ ವೇಷ ತೊಟ್ಟಿದ್ದಾರೆ.

ಚಿತ್ರದ ರಿಲೀಸ್ ಬಗ್ಗೆ ಸಿಂಪಲ್ ಸುನಿ ಹಂಚಿಕೊಂಡ ಟ್ವೀಟ್:

‘ಅವತಾರ ಪುರುಷ’ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ವೃತ್ತಿ ಬದುಕಿನ ಇತ್ತೀಚಿನ ಏಳುಬೀಳುಗಳನ್ನು ಹಿನ್ನೆಲೆಯಾಗಿಟ್ಟು ಟ್ವೀಟ್ ಮಾಡಿದ್ದು, ‘‘ನನ್ನ ಸಾವು-ಬದುಕಿನ ಮದ್ಯೆ ಸಣ್ಣ ಎಳೆಯಂತೆ ಇರುವ ನನ್ನ ಕೊನೆಯ ಆಸರೆ ಅವತಾರಪುರುಷ. ನಿಮ್ಮ ಪ್ರಾರ್ಥನೆ ಹಾಗು ಬೆಂಬಲ ನನ್ನ ಜೊತೆಯಿರಲಿ’’ ಎಂದು ಬರೆದಿದ್ದಾರೆ.

ಪುಷ್ಕರ್ ಮಲ್ಲಿಕಾರ್ಜುನಯ್ಯ ಟ್ವೀಟ್ ಇಲ್ಲಿದೆ:

‘ಅವತಾರ ಪುರುಷ’ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ. ತಾಂತ್ರಿಕವಾಗಿ ತುಂಬ ಶ್ರೀಮಂತವಾಗಿ ಮೂಡಿಬಂದಿರುವ ಈ ಚಿತ್ರದ ಪೋಸ್ಟರ್ ಹಾಗೂ ಟೀಸರ್​ ಗಮನ ಸೆಳೆದಿತ್ತು. ಚಿತ್ರ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:

Prakash Belawadi: ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸಿದ ಪ್ರಕಾಶ್ ಬೆಳವಾಡಿ; ‘ದಿ ಕಾಶ್ಮೀರ್ ಫೈಲ್ಸ್’ ಬಗ್ಗೆ ನಟ ಹೇಳಿದ್ದೇನು?

James: ಪುನೀತ್ ಕುರಿತು ಪ್ರೀತಿಯ ಮಾತನ್ನಾಡಿದ ಕಿಚ್ಚ; ‘ಸಲಾಂ ಸೋಲ್ಜರ್’ ಹಾಡಿನ ರಿಲೀಸ್ ಫೋಟೋಗಳು ಇಲ್ಲಿವೆ

Published On - 8:13 pm, Fri, 11 March 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ