AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sharan: ‘ಅವತಾರ ಪುರುಷ’ ರಿಲೀಸ್​ಗೆ ಮುಹೂರ್ತ ಫಿಕ್ಸ್; ಸಾವು- ಬದುಕು ನಡುವಿನ ಕೊನೆಯ ಆಸರೆ ಈ ಸಿನಿಮಾ ಎಂದ ಪುಷ್ಕರ್

Simpe Suni | Avatara Purusha: ಶರಣ್ ಹಾಗೂ ಆಶಿಕಾ ರಂಗನಾಥ್ ನಟನೆಯ ‘ಅವತಾರ ಪುರುಷ’ ಹಲವು ಕಾರಣಗಳಿಗೆ ಸದ್ದು ಮಾಡುತ್ತಿರುವ ಚಿತ್ರ. ಇದೀಗ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

Sharan: ‘ಅವತಾರ ಪುರುಷ’ ರಿಲೀಸ್​ಗೆ ಮುಹೂರ್ತ ಫಿಕ್ಸ್; ಸಾವು- ಬದುಕು ನಡುವಿನ ಕೊನೆಯ ಆಸರೆ ಈ ಸಿನಿಮಾ ಎಂದ ಪುಷ್ಕರ್
‘ಅವತಾರ ಪುರುಷ’ ಚಿತ್ರದ ಹೊಸ ಪೋಸ್ಟರ್
TV9 Web
| Edited By: |

Updated on:Mar 11, 2022 | 8:56 PM

Share

ಸ್ಯಾಂಡಲ್​ವುಡ್​ನ ಹಲವು ಚಿತ್ರಗಳು ಹೊಸ ಬಿಡುಗಡೆ ದಿನಾಂಕಗಳನ್ನು ಘೋಷಿಸಿಕೊಳ್ಳುತ್ತಿವೆ. ಈ ಪಟ್ಟಿಗೆ ಹೊಸ ಸೇರ್ಪಡೆ ‘ಅವತಾರ ಪುರುಷ’ (Avatara Purusha). ಶರಣ್ (Sharan) ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ಅವರಿಗೆ ಜತೆಯಾಗಿ ಬಣ್ಣಹಚ್ಚಿರುವವರು ಆಶಿಕಾ ರಂಗನಾಥ್. ಈಗಾಗಲೇ ತೆರೆಯ ಮೇಲೆ ಮೋಡಿ ಮಾಡಿರುವ ಈ ಜೋಡಿಯನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ಎಲ್ಲವೂ ಸರಿಯಿದ್ದಿದ್ದರೆ 2021ರ ಡಿಸೆಂಬರ್​ನಲ್ಲೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ನಿಯಮಾವಳಿಗಳ ಕಾರಣದಿಂದ ಚಿತ್ರದ ರಿಲೀಸ್ ಮುಂದೂಡಲಾಗಿತ್ತು. ಇದೀಗ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಲಾಗಿದೆ. ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರ ಮೇ 6ರಂದು ತೆರೆಗೆ ಬರಲಿದೆ. ಈ ಕುರಿತು ಟ್ವೀಟ್ ಮಾಡಿರುವ ಸುನಿ, ‘‘ಕಪ್ಪುಜಾದು ಶುರುವಾಗುವ ಸಮಯ. ಮೇ 6ಂದು ಬಿಡುಗಡೆ. ಆಶೀರ್ವಾದವಿರಲಿ’’ ಎಂದು ಬರೆದಿದ್ದಾರೆ. ಚಿತ್ರದ ರಿಲೀಸ್ ಜತೆಗೆ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದ್ದು, ಗಮನ ಸೆಳೆಯುತ್ತಿದೆ.

ಖ್ಯಾತ ಕಲಾವಿದರ ದಂಡೇ ಚಿತ್ರದಲ್ಲಿದ್ದು, ಎಲ್ಲರ ಲುಕ್​ಗಳನ್ನು ಒಳಗೊಂಡಿರುವ ಪೋಸ್ಟರ್​ಅನ್ನು ಹಂಚಿಕೊಳ್ಳಲಾಗಿದೆ. ಶ್ರೀನಗರ ಕಿಟ್ಟಿ, ಆಶಿಕಾ ರಂಗನಾಥ್ ಸೇರಿದಂತೆ ಎಲ್ಲರ ಗೆಟಪ್ ಕುತೂಹಲ ಮೂಡಿಸುತ್ತಿದೆ. ಜೂನಿಯರ್ ಆರ್ಟಿಸ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಶರಣ್, ಹಲವು ವಿಭಿನ್ನ ವೇಷ ತೊಟ್ಟಿದ್ದಾರೆ.

ಚಿತ್ರದ ರಿಲೀಸ್ ಬಗ್ಗೆ ಸಿಂಪಲ್ ಸುನಿ ಹಂಚಿಕೊಂಡ ಟ್ವೀಟ್:

‘ಅವತಾರ ಪುರುಷ’ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ವೃತ್ತಿ ಬದುಕಿನ ಇತ್ತೀಚಿನ ಏಳುಬೀಳುಗಳನ್ನು ಹಿನ್ನೆಲೆಯಾಗಿಟ್ಟು ಟ್ವೀಟ್ ಮಾಡಿದ್ದು, ‘‘ನನ್ನ ಸಾವು-ಬದುಕಿನ ಮದ್ಯೆ ಸಣ್ಣ ಎಳೆಯಂತೆ ಇರುವ ನನ್ನ ಕೊನೆಯ ಆಸರೆ ಅವತಾರಪುರುಷ. ನಿಮ್ಮ ಪ್ರಾರ್ಥನೆ ಹಾಗು ಬೆಂಬಲ ನನ್ನ ಜೊತೆಯಿರಲಿ’’ ಎಂದು ಬರೆದಿದ್ದಾರೆ.

ಪುಷ್ಕರ್ ಮಲ್ಲಿಕಾರ್ಜುನಯ್ಯ ಟ್ವೀಟ್ ಇಲ್ಲಿದೆ:

‘ಅವತಾರ ಪುರುಷ’ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ. ತಾಂತ್ರಿಕವಾಗಿ ತುಂಬ ಶ್ರೀಮಂತವಾಗಿ ಮೂಡಿಬಂದಿರುವ ಈ ಚಿತ್ರದ ಪೋಸ್ಟರ್ ಹಾಗೂ ಟೀಸರ್​ ಗಮನ ಸೆಳೆದಿತ್ತು. ಚಿತ್ರ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:

Prakash Belawadi: ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸಿದ ಪ್ರಕಾಶ್ ಬೆಳವಾಡಿ; ‘ದಿ ಕಾಶ್ಮೀರ್ ಫೈಲ್ಸ್’ ಬಗ್ಗೆ ನಟ ಹೇಳಿದ್ದೇನು?

James: ಪುನೀತ್ ಕುರಿತು ಪ್ರೀತಿಯ ಮಾತನ್ನಾಡಿದ ಕಿಚ್ಚ; ‘ಸಲಾಂ ಸೋಲ್ಜರ್’ ಹಾಡಿನ ರಿಲೀಸ್ ಫೋಟೋಗಳು ಇಲ್ಲಿವೆ

Published On - 8:13 pm, Fri, 11 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ