AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು’; ಹಿರಿಯ ನಟ ಶರತ್​ಕುಮಾರ್​ ಭಾವುಕ ನುಡಿ

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

‘ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು’; ಹಿರಿಯ ನಟ ಶರತ್​ಕುಮಾರ್​ ಭಾವುಕ ನುಡಿ
TV9 Web
| Edited By: |

Updated on: Nov 16, 2021 | 6:57 PM

Share

ದಕ್ಷಿಣ ಭಾರತದ ಖ್ಯಾತ ನಟ ಶರತ್​ಕುಮಾರ್​ ಅವರಿಗೆ ಪುನೀತ್​ ರಾಜ್​ಕುಮಾರ್​​ ಜತೆ ಒಳ್ಳೆಯ ಒಡನಾಟ ಇತ್ತು. ‘ರಾಜಕುಮಾರ’ ಸಿನಿಮಾದಲ್ಲಿ ಪುನೀತ್​ ತಂದೆಯ ಪಾತ್ರವನ್ನು ಮಾಡಿದ್ದರು ಶರತ್​ಕುಮಾರ್​. ಈ ಸಿನಿಮಾ 100 ದಿನದ ಸಂಭ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಡಲಾಗಿತ್ತು. ಈಗ ಅದೇ ಅರಮನೆ ಮೈದಾನದಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ. ‘ಪುನೀತ ನಮನ’ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶರತ್​ ಕುಮಾರ್​ ಭಾವುಕರಾದರು. ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು ಎನ್ನುವ ಮಾತನ್ನು ಹೇಳಿದರು.

‘ಪುನೀತ್​ ನಮ್ಮನ್ನು ಬಿಟ್ಟು ಹೋಗಿದ್ದು ನಂಬೋಕೆ ಆಗಿಲ್ಲ. ‘ರಾಜಕುಮಾರ’ ಸಿನಿಮಾ 100 ದಿನದ ಸಂಭ್ರಮವನ್ನು ಇಲ್ಲಿಯೇ ಮಾಡಿದ್ದೆವು. ಈಗ ಇಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ. ಖಂಡಿತವಾಗಿಯೂ ನಾನು ಇದನ್ನು ಅಂದುಕೊಂಡಿರಲಿಲ್ಲ. ನನಗೆ ಈಗ 67 ವರ್ಷ. ಬಹುಶಃ ಪುನೀತ್​ ನನ್ನ ಶ್ರದ್ಧಾಂಜಲಿಗೆ ಬರಹುದು ಎಂದುಕೊಂಡಿದ್ದೆ. ದೇವರು ಪುನೀತ್​ ಬದಲಿಗೆ ನನ್ನನ್ನು ಕರೆದುಕೊಳ್ಳಬಹುದಿತ್ತು. ನಾನು ಪುನೀತ್​ಗಾಗಿ ನನ್ನ ಜೀವಕೊಡೋಕು ಸಿದ್ಧನಿದ್ದೇನೆ. ಪುನೀತ್​ ಕುಟುಂಬ ನನಗೆ ತುಂಬಾನೇ ಕ್ಲೋಸ್​ ಆಗಿದೆ’ ಎಂದರು ಅವರು.

‘ನಾನು ಮೊದಲು ನಟಿಸಿದ್ದು ಕರ್ನಾಟಕದಲ್ಲಿ. ನನ್ನ ಮೊದಲ ವೇತನ ಪಡೆದಿದ್ದು ಇಲ್ಲಿಯೇ. ಈ ಕರ್ನಾಟಕ ನನಗೆ ಯಾವಾಗಲೂ ಹತ್ತಿರ. ನಾನು ಶಿವರಾಜ್​ಕುಮಾರ್ ಸಹಾಯಕ್ಕೆ ಸದಾ ಸಿದ್ಧನಿದ್ದೇನೆ. ಅವರು ಮಾಡಿರುವ ಒಳ್ಳೆಯ ಕೆಲಸಗಳನ್ನು ನಾವು ಮಾದರಿಯಾಗಿ ಇಟ್ಟುಕೊಳ್ಳೋಣ’ ಎಂದರು ಶರತ್​ಕುಮಾರ್​.

ಜೇಮ್ಸ್​ ಸಿನಿಮಾದಲ್ಲಿ ಶರತ್​ಕುಮಾರ್​ ನಟಿಸಿದ್ದಾರೆ. ಶೂಟಿಂಗ್​ ಸಮಯದಲ್ಲಿ ಪುನೀತ್​ ಅವರೇ ಅಡುಗೆ ಮಾಡಿ ಶರತ್​ ಅವರಿಗೆ ನೀಡಿದ್ದರಂತೆ. ಈ ಘಟನೆಯನ್ನು ಕೂಡ ಶರತ್​ ಅವರು ನೆನಪು ಮಾಡಿಕೊಂಡಿದ್ದಾರೆ. ಭಾಷಣದ ವೇಳೆ ಅವರು ತುಂಬಾನೇ ಭಾವುಕರಾಗಿದ್ದರು.

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಘೋಷಣೆ: ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರು ಇವರು

‘ಪುನೀತ್ ಹೆಸರಲ್ಲಿ ಹೊಸ ಸಂಸ್ಥೆ ಅಥವಾ ಸ್ಟುಡಿಯೋ ಆರಂಭಿಸಿ’; ಡಿ.ಕೆ. ಶಿವ​ಕುಮಾರ್​ ಮನವಿ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು