AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು’; ಹಿರಿಯ ನಟ ಶರತ್​ಕುಮಾರ್​ ಭಾವುಕ ನುಡಿ

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

‘ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು’; ಹಿರಿಯ ನಟ ಶರತ್​ಕುಮಾರ್​ ಭಾವುಕ ನುಡಿ
TV9 Web
| Edited By: |

Updated on: Nov 16, 2021 | 6:57 PM

Share

ದಕ್ಷಿಣ ಭಾರತದ ಖ್ಯಾತ ನಟ ಶರತ್​ಕುಮಾರ್​ ಅವರಿಗೆ ಪುನೀತ್​ ರಾಜ್​ಕುಮಾರ್​​ ಜತೆ ಒಳ್ಳೆಯ ಒಡನಾಟ ಇತ್ತು. ‘ರಾಜಕುಮಾರ’ ಸಿನಿಮಾದಲ್ಲಿ ಪುನೀತ್​ ತಂದೆಯ ಪಾತ್ರವನ್ನು ಮಾಡಿದ್ದರು ಶರತ್​ಕುಮಾರ್​. ಈ ಸಿನಿಮಾ 100 ದಿನದ ಸಂಭ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಡಲಾಗಿತ್ತು. ಈಗ ಅದೇ ಅರಮನೆ ಮೈದಾನದಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ. ‘ಪುನೀತ ನಮನ’ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶರತ್​ ಕುಮಾರ್​ ಭಾವುಕರಾದರು. ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು ಎನ್ನುವ ಮಾತನ್ನು ಹೇಳಿದರು.

‘ಪುನೀತ್​ ನಮ್ಮನ್ನು ಬಿಟ್ಟು ಹೋಗಿದ್ದು ನಂಬೋಕೆ ಆಗಿಲ್ಲ. ‘ರಾಜಕುಮಾರ’ ಸಿನಿಮಾ 100 ದಿನದ ಸಂಭ್ರಮವನ್ನು ಇಲ್ಲಿಯೇ ಮಾಡಿದ್ದೆವು. ಈಗ ಇಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ. ಖಂಡಿತವಾಗಿಯೂ ನಾನು ಇದನ್ನು ಅಂದುಕೊಂಡಿರಲಿಲ್ಲ. ನನಗೆ ಈಗ 67 ವರ್ಷ. ಬಹುಶಃ ಪುನೀತ್​ ನನ್ನ ಶ್ರದ್ಧಾಂಜಲಿಗೆ ಬರಹುದು ಎಂದುಕೊಂಡಿದ್ದೆ. ದೇವರು ಪುನೀತ್​ ಬದಲಿಗೆ ನನ್ನನ್ನು ಕರೆದುಕೊಳ್ಳಬಹುದಿತ್ತು. ನಾನು ಪುನೀತ್​ಗಾಗಿ ನನ್ನ ಜೀವಕೊಡೋಕು ಸಿದ್ಧನಿದ್ದೇನೆ. ಪುನೀತ್​ ಕುಟುಂಬ ನನಗೆ ತುಂಬಾನೇ ಕ್ಲೋಸ್​ ಆಗಿದೆ’ ಎಂದರು ಅವರು.

‘ನಾನು ಮೊದಲು ನಟಿಸಿದ್ದು ಕರ್ನಾಟಕದಲ್ಲಿ. ನನ್ನ ಮೊದಲ ವೇತನ ಪಡೆದಿದ್ದು ಇಲ್ಲಿಯೇ. ಈ ಕರ್ನಾಟಕ ನನಗೆ ಯಾವಾಗಲೂ ಹತ್ತಿರ. ನಾನು ಶಿವರಾಜ್​ಕುಮಾರ್ ಸಹಾಯಕ್ಕೆ ಸದಾ ಸಿದ್ಧನಿದ್ದೇನೆ. ಅವರು ಮಾಡಿರುವ ಒಳ್ಳೆಯ ಕೆಲಸಗಳನ್ನು ನಾವು ಮಾದರಿಯಾಗಿ ಇಟ್ಟುಕೊಳ್ಳೋಣ’ ಎಂದರು ಶರತ್​ಕುಮಾರ್​.

ಜೇಮ್ಸ್​ ಸಿನಿಮಾದಲ್ಲಿ ಶರತ್​ಕುಮಾರ್​ ನಟಿಸಿದ್ದಾರೆ. ಶೂಟಿಂಗ್​ ಸಮಯದಲ್ಲಿ ಪುನೀತ್​ ಅವರೇ ಅಡುಗೆ ಮಾಡಿ ಶರತ್​ ಅವರಿಗೆ ನೀಡಿದ್ದರಂತೆ. ಈ ಘಟನೆಯನ್ನು ಕೂಡ ಶರತ್​ ಅವರು ನೆನಪು ಮಾಡಿಕೊಂಡಿದ್ದಾರೆ. ಭಾಷಣದ ವೇಳೆ ಅವರು ತುಂಬಾನೇ ಭಾವುಕರಾಗಿದ್ದರು.

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಘೋಷಣೆ: ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರು ಇವರು

‘ಪುನೀತ್ ಹೆಸರಲ್ಲಿ ಹೊಸ ಸಂಸ್ಥೆ ಅಥವಾ ಸ್ಟುಡಿಯೋ ಆರಂಭಿಸಿ’; ಡಿ.ಕೆ. ಶಿವ​ಕುಮಾರ್​ ಮನವಿ

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ