AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು’; ಹಿರಿಯ ನಟ ಶರತ್​ಕುಮಾರ್​ ಭಾವುಕ ನುಡಿ

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

‘ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು’; ಹಿರಿಯ ನಟ ಶರತ್​ಕುಮಾರ್​ ಭಾವುಕ ನುಡಿ
TV9 Web
| Edited By: |

Updated on: Nov 16, 2021 | 6:57 PM

Share

ದಕ್ಷಿಣ ಭಾರತದ ಖ್ಯಾತ ನಟ ಶರತ್​ಕುಮಾರ್​ ಅವರಿಗೆ ಪುನೀತ್​ ರಾಜ್​ಕುಮಾರ್​​ ಜತೆ ಒಳ್ಳೆಯ ಒಡನಾಟ ಇತ್ತು. ‘ರಾಜಕುಮಾರ’ ಸಿನಿಮಾದಲ್ಲಿ ಪುನೀತ್​ ತಂದೆಯ ಪಾತ್ರವನ್ನು ಮಾಡಿದ್ದರು ಶರತ್​ಕುಮಾರ್​. ಈ ಸಿನಿಮಾ 100 ದಿನದ ಸಂಭ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಡಲಾಗಿತ್ತು. ಈಗ ಅದೇ ಅರಮನೆ ಮೈದಾನದಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ. ‘ಪುನೀತ ನಮನ’ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶರತ್​ ಕುಮಾರ್​ ಭಾವುಕರಾದರು. ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು ಎನ್ನುವ ಮಾತನ್ನು ಹೇಳಿದರು.

‘ಪುನೀತ್​ ನಮ್ಮನ್ನು ಬಿಟ್ಟು ಹೋಗಿದ್ದು ನಂಬೋಕೆ ಆಗಿಲ್ಲ. ‘ರಾಜಕುಮಾರ’ ಸಿನಿಮಾ 100 ದಿನದ ಸಂಭ್ರಮವನ್ನು ಇಲ್ಲಿಯೇ ಮಾಡಿದ್ದೆವು. ಈಗ ಇಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ. ಖಂಡಿತವಾಗಿಯೂ ನಾನು ಇದನ್ನು ಅಂದುಕೊಂಡಿರಲಿಲ್ಲ. ನನಗೆ ಈಗ 67 ವರ್ಷ. ಬಹುಶಃ ಪುನೀತ್​ ನನ್ನ ಶ್ರದ್ಧಾಂಜಲಿಗೆ ಬರಹುದು ಎಂದುಕೊಂಡಿದ್ದೆ. ದೇವರು ಪುನೀತ್​ ಬದಲಿಗೆ ನನ್ನನ್ನು ಕರೆದುಕೊಳ್ಳಬಹುದಿತ್ತು. ನಾನು ಪುನೀತ್​ಗಾಗಿ ನನ್ನ ಜೀವಕೊಡೋಕು ಸಿದ್ಧನಿದ್ದೇನೆ. ಪುನೀತ್​ ಕುಟುಂಬ ನನಗೆ ತುಂಬಾನೇ ಕ್ಲೋಸ್​ ಆಗಿದೆ’ ಎಂದರು ಅವರು.

‘ನಾನು ಮೊದಲು ನಟಿಸಿದ್ದು ಕರ್ನಾಟಕದಲ್ಲಿ. ನನ್ನ ಮೊದಲ ವೇತನ ಪಡೆದಿದ್ದು ಇಲ್ಲಿಯೇ. ಈ ಕರ್ನಾಟಕ ನನಗೆ ಯಾವಾಗಲೂ ಹತ್ತಿರ. ನಾನು ಶಿವರಾಜ್​ಕುಮಾರ್ ಸಹಾಯಕ್ಕೆ ಸದಾ ಸಿದ್ಧನಿದ್ದೇನೆ. ಅವರು ಮಾಡಿರುವ ಒಳ್ಳೆಯ ಕೆಲಸಗಳನ್ನು ನಾವು ಮಾದರಿಯಾಗಿ ಇಟ್ಟುಕೊಳ್ಳೋಣ’ ಎಂದರು ಶರತ್​ಕುಮಾರ್​.

ಜೇಮ್ಸ್​ ಸಿನಿಮಾದಲ್ಲಿ ಶರತ್​ಕುಮಾರ್​ ನಟಿಸಿದ್ದಾರೆ. ಶೂಟಿಂಗ್​ ಸಮಯದಲ್ಲಿ ಪುನೀತ್​ ಅವರೇ ಅಡುಗೆ ಮಾಡಿ ಶರತ್​ ಅವರಿಗೆ ನೀಡಿದ್ದರಂತೆ. ಈ ಘಟನೆಯನ್ನು ಕೂಡ ಶರತ್​ ಅವರು ನೆನಪು ಮಾಡಿಕೊಂಡಿದ್ದಾರೆ. ಭಾಷಣದ ವೇಳೆ ಅವರು ತುಂಬಾನೇ ಭಾವುಕರಾಗಿದ್ದರು.

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಘೋಷಣೆ: ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರು ಇವರು

‘ಪುನೀತ್ ಹೆಸರಲ್ಲಿ ಹೊಸ ಸಂಸ್ಥೆ ಅಥವಾ ಸ್ಟುಡಿಯೋ ಆರಂಭಿಸಿ’; ಡಿ.ಕೆ. ಶಿವ​ಕುಮಾರ್​ ಮನವಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು