AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರಿತು ಶಶಿಕುಮಾರ್ ಮಗನ ಮೂರನೇ ಸಿನಿಮಾ; ಹೆಸರು ಬದಲಿಸಿಕೊಂಡ ಯುವ ನಟ

ಧುವನ್ ಫಿಲ್ಮ್ಸ್​ ಲಾಂಛನದಲ್ಲಿ ಅಖಿಲೇಶ್ ‘ರಾಶಿ’ ಸಿನಿಮಾ ನಿರ್ಮಾಣ ಆಗುತ್ತಿದ್ದು, ವಿಜಯ್ ಪಾಳೇಗಾರ್ ನಿರ್ದೇಶನ ಮಾಡುತ್ತಿದ್ದಾರೆ. ಲವ್​ಸ್ಟೋರಿ ಕಥಾ ಹಂದರದ ಈ ಚಿತ್ರಕ್ಕೆ ಹಲವು ಗಣ್ಯರು ಸಾಥ್ ನೀಡಿದ್ದಾರೆ. ಆದಿತ್ಯ ಅವರ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ ಅನ್ನೋದು ವಿಶೇಷ.

ಸೆಟ್ಟೇರಿತು ಶಶಿಕುಮಾರ್ ಮಗನ ಮೂರನೇ ಸಿನಿಮಾ; ಹೆಸರು ಬದಲಿಸಿಕೊಂಡ ಯುವ ನಟ
ಶಶಿಕುಮಾರ್
ರಾಜೇಶ್ ದುಗ್ಗುಮನೆ
|

Updated on: Sep 21, 2024 | 10:55 AM

Share

ನಟ ಶಶಿಕುಮಾರ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಈಗ ಅವರು ಪೋಷಕ ಪಾತ್ರಗಳ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರ ಮಗ ಆದಿತ್ಯ ಅವರು ನಟನಾಗಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದಾರೆ. ಅವರು ಹೀರೋ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಆಗಿದೆ. ಈ ಚಿತ್ರಕ್ಕೆ ‘ರಾಶಿ’ ಎನ್ನುವ ಟೈಟಲ್ ಇಡಲಾಗಿದೆ.

ಧುವನ್ ಫಿಲ್ಮ್ಸ್​ ಲಾಂಛನದಲ್ಲಿ ಅಖಿಲೇಶ್ ‘ರಾಶಿ’ ಸಿನಿಮಾ ನಿರ್ಮಾಣ ಆಗುತ್ತಿದ್ದು, ವಿಜಯ್ ಪಾಳೇಗಾರ್ ನಿರ್ದೇಶನ ಮಾಡುತ್ತಿದ್ದಾರೆ. ಲವ್​ಸ್ಟೋರಿ ಕಥಾ ಹಂದರದ ಈ ಚಿತ್ರಕ್ಕೆ ಹಲವು ಗಣ್ಯರು ಸಾಥ್ ನೀಡಿದ್ದಾರೆ. ಆದಿತ್ಯ ಅವರ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ ಅನ್ನೋದು ವಿಶೇಷ. ಚಿತ್ರದ ನಾಯಕಿ ಆಗಿ ಸಮೀಕ್ಷಾ ನಟಿಸುತ್ತಿದ್ದಾರೆ.

ನಟ ಶಶಿಕುಮಾರ್, ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷರಾದ ಜಿ.ಎಸ್.ಚಂದ್ರಶೇಖರ್, ಬೆಂಗಳೂರು ಪೊಲೀಸ್ ಉಪ ಆಯುಕ್ತ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಸ್. ಚಿದಂಬರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಜೊತೆಗೆ ಆದಿತ್ಯಗೆ ಶುಭಕೋರಿದ್ದಾರೆ.

ಆದಿತ್ಯ ಶಶಿಕುಮಾರ್ ಅವರು ಹೀರೋ ಆಗಿ ನಟಿಸುತ್ತಿರುವ ಮೂರನೇ ಸಿನಿಮಾ ಇದು. ಈ ಚಿತ್ರದ ಬಗ್ಗೆ ಅವರಿಗೆ ನಂಬಿಕೆ ಇದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ಅವರು ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ. ‘ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು’ ಎಂದು ಮನವಿ ಮಾಡಿದರು.

ಇದನ್ನೂ ಓದಿ: ‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್

ಅಖಿಲೇಶ್ ನಿರ್ಮಾಣ ಮಾಡುವುದರ ಜೊತೆಗೆ ಚಿತ್ರಕ್ಕೆ ಕಥೆ ಕೂಡ ಅವರದ್ದೇ. ಚಿತ್ರಕ್ಕೆ ಗೀತರಚನೆ ಮಾಡಿರುವ ವಿಜಯ್ ಪಾಳೇಗಾರ ಅವರು ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಈ ಮೊದಲು ‘ಟ್ರಿಗರ್’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ‌, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ