ಸೆಟ್ಟೇರಿತು ಶಶಿಕುಮಾರ್ ಮಗನ ಮೂರನೇ ಸಿನಿಮಾ; ಹೆಸರು ಬದಲಿಸಿಕೊಂಡ ಯುವ ನಟ

ಧುವನ್ ಫಿಲ್ಮ್ಸ್​ ಲಾಂಛನದಲ್ಲಿ ಅಖಿಲೇಶ್ ‘ರಾಶಿ’ ಸಿನಿಮಾ ನಿರ್ಮಾಣ ಆಗುತ್ತಿದ್ದು, ವಿಜಯ್ ಪಾಳೇಗಾರ್ ನಿರ್ದೇಶನ ಮಾಡುತ್ತಿದ್ದಾರೆ. ಲವ್​ಸ್ಟೋರಿ ಕಥಾ ಹಂದರದ ಈ ಚಿತ್ರಕ್ಕೆ ಹಲವು ಗಣ್ಯರು ಸಾಥ್ ನೀಡಿದ್ದಾರೆ. ಆದಿತ್ಯ ಅವರ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ ಅನ್ನೋದು ವಿಶೇಷ.

ಸೆಟ್ಟೇರಿತು ಶಶಿಕುಮಾರ್ ಮಗನ ಮೂರನೇ ಸಿನಿಮಾ; ಹೆಸರು ಬದಲಿಸಿಕೊಂಡ ಯುವ ನಟ
ಶಶಿಕುಮಾರ್
Follow us
|

Updated on: Sep 21, 2024 | 10:55 AM

ನಟ ಶಶಿಕುಮಾರ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಈಗ ಅವರು ಪೋಷಕ ಪಾತ್ರಗಳ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರ ಮಗ ಆದಿತ್ಯ ಅವರು ನಟನಾಗಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದಾರೆ. ಅವರು ಹೀರೋ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಆಗಿದೆ. ಈ ಚಿತ್ರಕ್ಕೆ ‘ರಾಶಿ’ ಎನ್ನುವ ಟೈಟಲ್ ಇಡಲಾಗಿದೆ.

ಧುವನ್ ಫಿಲ್ಮ್ಸ್​ ಲಾಂಛನದಲ್ಲಿ ಅಖಿಲೇಶ್ ‘ರಾಶಿ’ ಸಿನಿಮಾ ನಿರ್ಮಾಣ ಆಗುತ್ತಿದ್ದು, ವಿಜಯ್ ಪಾಳೇಗಾರ್ ನಿರ್ದೇಶನ ಮಾಡುತ್ತಿದ್ದಾರೆ. ಲವ್​ಸ್ಟೋರಿ ಕಥಾ ಹಂದರದ ಈ ಚಿತ್ರಕ್ಕೆ ಹಲವು ಗಣ್ಯರು ಸಾಥ್ ನೀಡಿದ್ದಾರೆ. ಆದಿತ್ಯ ಅವರ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ ಅನ್ನೋದು ವಿಶೇಷ. ಚಿತ್ರದ ನಾಯಕಿ ಆಗಿ ಸಮೀಕ್ಷಾ ನಟಿಸುತ್ತಿದ್ದಾರೆ.

ನಟ ಶಶಿಕುಮಾರ್, ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷರಾದ ಜಿ.ಎಸ್.ಚಂದ್ರಶೇಖರ್, ಬೆಂಗಳೂರು ಪೊಲೀಸ್ ಉಪ ಆಯುಕ್ತ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಸ್. ಚಿದಂಬರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಜೊತೆಗೆ ಆದಿತ್ಯಗೆ ಶುಭಕೋರಿದ್ದಾರೆ.

ಆದಿತ್ಯ ಶಶಿಕುಮಾರ್ ಅವರು ಹೀರೋ ಆಗಿ ನಟಿಸುತ್ತಿರುವ ಮೂರನೇ ಸಿನಿಮಾ ಇದು. ಈ ಚಿತ್ರದ ಬಗ್ಗೆ ಅವರಿಗೆ ನಂಬಿಕೆ ಇದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ಅವರು ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ. ‘ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು’ ಎಂದು ಮನವಿ ಮಾಡಿದರು.

ಇದನ್ನೂ ಓದಿ: ‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್

ಅಖಿಲೇಶ್ ನಿರ್ಮಾಣ ಮಾಡುವುದರ ಜೊತೆಗೆ ಚಿತ್ರಕ್ಕೆ ಕಥೆ ಕೂಡ ಅವರದ್ದೇ. ಚಿತ್ರಕ್ಕೆ ಗೀತರಚನೆ ಮಾಡಿರುವ ವಿಜಯ್ ಪಾಳೇಗಾರ ಅವರು ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಈ ಮೊದಲು ‘ಟ್ರಿಗರ್’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ‌, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು