Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಮತ್ತೊಂದು ಜನಪ್ರಿಯ ಧಾರಾವಾಹಿಯಲ್ಲಿ ಶೆಡ್ ಹಾಗೂ ಮೋರಿಯ ಬಗ್ಗೆ ಉಲ್ಲೇಖ

ಈ ಮೊದಲು ‘ಶಾಂತಂ ಪಾಪಂ’ ಧಾರಾವಾಹಿಯಲ್ಲಿ ದರ್ಶನ್ ಪ್ರಕರಣವನ್ನು ಹೋಲುವ ರೀತಿಯಲ್ಲಿ ಎಪಿಸೋಡ್ ಮಾಡಲಾಗಿತ್ತು. ಆ ದೃಶ್ಯಕ್ಕೂ ದರ್ಶನ್ ಪ್ರಕರಣಕ್ಕೂ ಸಾಕಷ್ಟು ಹೋಲಿಕೆ ಇತ್ತು. ಜುಲೈ ತಿಂಗಳಲ್ಲಿ ಈ ಎಪಿಸೋಡ್ ನಡೆದಿತ್ತು. ಈಗ ಮತ್ತೊಂದು ಧಾರಾವಾಹಿಯಲ್ಲಿ ಇದೇ ರೀತಿಯ ಯಲ್ಲೇಖ ಆಗಿದೆ.

ಕನ್ನಡದ ಮತ್ತೊಂದು ಜನಪ್ರಿಯ ಧಾರಾವಾಹಿಯಲ್ಲಿ ಶೆಡ್ ಹಾಗೂ ಮೋರಿಯ ಬಗ್ಗೆ ಉಲ್ಲೇಖ
ಅಮೃತಧಾರೆ ಧಾರಾವಾಹಿ
Follow us
ರಾಜೇಶ್ ದುಗ್ಗುಮನೆ
|

Updated on:Nov 05, 2024 | 1:05 PM

ನಟ ದರ್ಶನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದವರು. ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಅವರು ನಾಲ್ಕೂವರೆ ತಿಂಗಳು ಜೈಲಿನಲ್ಲಿ ಇದ್ದರು. ಈಗ ದರ್ಶನ್ ಹೊರ ಬಂದಿದ್ದಾರೆ. ಆದಾಗ್ಯೂ ಧಾರಾವಾಹಿಗಳಲ್ಲಿ ಶೆಡ್​ ಹಾಗೂ ಮೋರಿಗಳ ಪದ ಬಳಕೆ ತಪ್ಪಿಲ್ಲ. ಈಗ ಕನ್ನಡದ ಮತ್ತೊಂದು ಜನಪ್ರಿಯ ಧಾರಾವಾಹಿಯಲ್ಲಿ ಈ ರೀತಿಯ ಪದ ಬಳಕೆ ಆಗಿದೆ.

ದರ್ಶನ್ ಹಾಗೂ ಅವರ ಗ್ಯಾಂಗ್ ರೇಣುಕಾಸ್ವಾಮಿಯನ್ನು ಶೆಡ್​ನಲ್ಲಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಇದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ. ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿ ಮೋರಿಯ ಬದಿಯಲ್ಲಿ ಹಾಕಲಾಗಿತ್ತು. ಈಗ ‘ಅಮೃತಧಾರೆ’ ಧಾರಾವಾಹಿಯಲ್ಲೂ ಶೆಡ್​ ಬಗ್ಗೆ ಉಲ್ಲೇಖ ಇದೆ.

ಕಥಾ ನಾಯಕ ಗೌತಮ್ (ರಾಜೇಶ್ ನಟರಂಗ) ತಾಯಿ ಬದುಕಿದ್ದಾಳೆ ಎಂಬ ವಿಚಾರವನ್ನು ಹೇಳಲು ಧನ್ಯಾ ಎಂಬುವವಳು ಬಂದಿದ್ದಳು. ಆದರೆ, ಈ ಸತ್ಯ ಗೊತ್ತಾಗಬಾರದು ಎನ್ನುವ ಕಾರಣಕ್ಕೆ ಗೌತಮ್ ಮಲತಾಯಿ ಶಂಕುತಲಾ ದೇವಿ (ವನಿತಾ ವಾಸು) ಪ್ರಯತ್ನಿಸುತ್ತಾಳೆ. ಹೀಗಾಗಿ, ತಮ್ಮ ಒಡೆತನದ ಶೆಡ್​ಗೆ (ಗೋಡೌನ್​) ಧನ್ಯಾನ ಕರೆತರುತ್ತಾಳೆ ಮತ್ತು ಆಕೆಯನ್ನು ಕೊಲೆ ಮಾಡುತ್ತಾಳೆ. ‘ಈ ಹೆಣವನ್ನು ತೆಗೆದುಕೊಂಡು ಹೋಗಿ ಯಾವುದಾದರೂ ಮೋರಿಗೆ ಎಸೆಯಿರಿ’ ಎಂದು ಹೇಳುತ್ತಾಳೆ.

ಸದ್ಯ ಈ ಧಾರಾವಾಹಿಯಲ್ಲಿ ಶೆಡ್​ ಹಾಗೂ ಮೋರಿ ಎರಡೂ ಸ್ಥಳಗಳ ಉಲ್ಲೇಖ ಆಗಿದೆ. ಈ ಧಾರಾವಾಹಿಯ ದೃಶ್ಯ ನೋಡಿದವರಿಗೆ ಅನೇಕರಿಗೆ ದರ್ಶನ್ ಪ್ರಕರಣ ನೆನಪಾಗಿದೆ. ಆದರೆ, ಇದು ಕೇವಲ ಕಾಕತಾಳೀಯ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ದರ್ಶನ್ ಭೇಟಿಯಾಗಲು ಅನುಮತಿ ಇರುವುದು ಈ ಏಳು ಜನರಿಗೆ ಮಾತ್ರ

ಈ ಮೊದಲು ‘ಶಾಂತಂ ಪಾಪಂ’ ಧಾರಾವಾಹಿಯಲ್ಲಿ ದರ್ಶನ್ ಪ್ರಕರಣವನ್ನು ಹೋಲುವ ರೀತಿಯಲ್ಲಿ ಎಪಿಸೋಡ್ ಮಾಡಲಾಗಿತ್ತು. ಆ ದೃಶ್ಯಕ್ಕೂ ದರ್ಶನ್ ಪ್ರಕರಣಕ್ಕೂ ಸಾಕಷ್ಟು ಹೋಲಿಕೆ ಇತ್ತು. ಜುಲೈ ತಿಂಗಳಲ್ಲಿ ಈ ಎಪಿಸೋಡ್ ನಡೆದಿತ್ತು. ಆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು.

ಸದ್ಯ ಗೌತಮ್ ತಾಯಿ ಪಾತ್ರದಲ್ಲಿ ಚಿತ್ಕಲಾ ಬಿರಾದಾರ್ ಮಾಡುತ್ತಿದ್ದಾರೆ. ಅವರು ಈ ಮೊದಲು ‘ಕನ್ನಡತಿ’ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿದ್ದರು. ಅವರು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:03 pm, Tue, 5 November 24

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !