AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಮತ್ತೊಂದು ಜನಪ್ರಿಯ ಧಾರಾವಾಹಿಯಲ್ಲಿ ಶೆಡ್ ಹಾಗೂ ಮೋರಿಯ ಬಗ್ಗೆ ಉಲ್ಲೇಖ

ಈ ಮೊದಲು ‘ಶಾಂತಂ ಪಾಪಂ’ ಧಾರಾವಾಹಿಯಲ್ಲಿ ದರ್ಶನ್ ಪ್ರಕರಣವನ್ನು ಹೋಲುವ ರೀತಿಯಲ್ಲಿ ಎಪಿಸೋಡ್ ಮಾಡಲಾಗಿತ್ತು. ಆ ದೃಶ್ಯಕ್ಕೂ ದರ್ಶನ್ ಪ್ರಕರಣಕ್ಕೂ ಸಾಕಷ್ಟು ಹೋಲಿಕೆ ಇತ್ತು. ಜುಲೈ ತಿಂಗಳಲ್ಲಿ ಈ ಎಪಿಸೋಡ್ ನಡೆದಿತ್ತು. ಈಗ ಮತ್ತೊಂದು ಧಾರಾವಾಹಿಯಲ್ಲಿ ಇದೇ ರೀತಿಯ ಯಲ್ಲೇಖ ಆಗಿದೆ.

ಕನ್ನಡದ ಮತ್ತೊಂದು ಜನಪ್ರಿಯ ಧಾರಾವಾಹಿಯಲ್ಲಿ ಶೆಡ್ ಹಾಗೂ ಮೋರಿಯ ಬಗ್ಗೆ ಉಲ್ಲೇಖ
ಅಮೃತಧಾರೆ ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on:Nov 05, 2024 | 1:05 PM

Share

ನಟ ದರ್ಶನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದವರು. ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಅವರು ನಾಲ್ಕೂವರೆ ತಿಂಗಳು ಜೈಲಿನಲ್ಲಿ ಇದ್ದರು. ಈಗ ದರ್ಶನ್ ಹೊರ ಬಂದಿದ್ದಾರೆ. ಆದಾಗ್ಯೂ ಧಾರಾವಾಹಿಗಳಲ್ಲಿ ಶೆಡ್​ ಹಾಗೂ ಮೋರಿಗಳ ಪದ ಬಳಕೆ ತಪ್ಪಿಲ್ಲ. ಈಗ ಕನ್ನಡದ ಮತ್ತೊಂದು ಜನಪ್ರಿಯ ಧಾರಾವಾಹಿಯಲ್ಲಿ ಈ ರೀತಿಯ ಪದ ಬಳಕೆ ಆಗಿದೆ.

ದರ್ಶನ್ ಹಾಗೂ ಅವರ ಗ್ಯಾಂಗ್ ರೇಣುಕಾಸ್ವಾಮಿಯನ್ನು ಶೆಡ್​ನಲ್ಲಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಇದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ. ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿ ಮೋರಿಯ ಬದಿಯಲ್ಲಿ ಹಾಕಲಾಗಿತ್ತು. ಈಗ ‘ಅಮೃತಧಾರೆ’ ಧಾರಾವಾಹಿಯಲ್ಲೂ ಶೆಡ್​ ಬಗ್ಗೆ ಉಲ್ಲೇಖ ಇದೆ.

ಕಥಾ ನಾಯಕ ಗೌತಮ್ (ರಾಜೇಶ್ ನಟರಂಗ) ತಾಯಿ ಬದುಕಿದ್ದಾಳೆ ಎಂಬ ವಿಚಾರವನ್ನು ಹೇಳಲು ಧನ್ಯಾ ಎಂಬುವವಳು ಬಂದಿದ್ದಳು. ಆದರೆ, ಈ ಸತ್ಯ ಗೊತ್ತಾಗಬಾರದು ಎನ್ನುವ ಕಾರಣಕ್ಕೆ ಗೌತಮ್ ಮಲತಾಯಿ ಶಂಕುತಲಾ ದೇವಿ (ವನಿತಾ ವಾಸು) ಪ್ರಯತ್ನಿಸುತ್ತಾಳೆ. ಹೀಗಾಗಿ, ತಮ್ಮ ಒಡೆತನದ ಶೆಡ್​ಗೆ (ಗೋಡೌನ್​) ಧನ್ಯಾನ ಕರೆತರುತ್ತಾಳೆ ಮತ್ತು ಆಕೆಯನ್ನು ಕೊಲೆ ಮಾಡುತ್ತಾಳೆ. ‘ಈ ಹೆಣವನ್ನು ತೆಗೆದುಕೊಂಡು ಹೋಗಿ ಯಾವುದಾದರೂ ಮೋರಿಗೆ ಎಸೆಯಿರಿ’ ಎಂದು ಹೇಳುತ್ತಾಳೆ.

ಸದ್ಯ ಈ ಧಾರಾವಾಹಿಯಲ್ಲಿ ಶೆಡ್​ ಹಾಗೂ ಮೋರಿ ಎರಡೂ ಸ್ಥಳಗಳ ಉಲ್ಲೇಖ ಆಗಿದೆ. ಈ ಧಾರಾವಾಹಿಯ ದೃಶ್ಯ ನೋಡಿದವರಿಗೆ ಅನೇಕರಿಗೆ ದರ್ಶನ್ ಪ್ರಕರಣ ನೆನಪಾಗಿದೆ. ಆದರೆ, ಇದು ಕೇವಲ ಕಾಕತಾಳೀಯ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ದರ್ಶನ್ ಭೇಟಿಯಾಗಲು ಅನುಮತಿ ಇರುವುದು ಈ ಏಳು ಜನರಿಗೆ ಮಾತ್ರ

ಈ ಮೊದಲು ‘ಶಾಂತಂ ಪಾಪಂ’ ಧಾರಾವಾಹಿಯಲ್ಲಿ ದರ್ಶನ್ ಪ್ರಕರಣವನ್ನು ಹೋಲುವ ರೀತಿಯಲ್ಲಿ ಎಪಿಸೋಡ್ ಮಾಡಲಾಗಿತ್ತು. ಆ ದೃಶ್ಯಕ್ಕೂ ದರ್ಶನ್ ಪ್ರಕರಣಕ್ಕೂ ಸಾಕಷ್ಟು ಹೋಲಿಕೆ ಇತ್ತು. ಜುಲೈ ತಿಂಗಳಲ್ಲಿ ಈ ಎಪಿಸೋಡ್ ನಡೆದಿತ್ತು. ಆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು.

ಸದ್ಯ ಗೌತಮ್ ತಾಯಿ ಪಾತ್ರದಲ್ಲಿ ಚಿತ್ಕಲಾ ಬಿರಾದಾರ್ ಮಾಡುತ್ತಿದ್ದಾರೆ. ಅವರು ಈ ಮೊದಲು ‘ಕನ್ನಡತಿ’ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿದ್ದರು. ಅವರು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:03 pm, Tue, 5 November 24

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ