ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ: ‘ಮೆಜೆಸ್ಟಿಕ್​ 2’ ಚಿತ್ರದಲ್ಲಿ ಹೀಗೊಂದು ಹಾಡು

ರೌಡಿಸಂ ಕಹಾನಿ ಇರುವ ‘ಮೆಜೆಸ್ಟಿಕ್​ 2’ ಸಿನಿಮಾದಲ್ಲಿ ಭರತ್​ ಹಾಗೂ ಸಂಹಿತಾ ವಿನ್ಯಾ ಜೋಡಿಯಾಗಿ ನಟಿಸುತ್ತಿದ್ದಾರೆ. ತಾಯಿ ಪಾತ್ರದಲ್ಲಿ ಶ್ರುತಿ ಅಭಿನಯಿಸುತ್ತಿದ್ದಾರೆ. ವಿನು ಮನಸು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ವೀನಸ್ ಮೂರ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಈ ಚಿತ್ರದ ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ' ಹಾಡಿನ ಚಿತ್ರೀಕರಣ ನಡೆದಿದೆ.

ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ: ‘ಮೆಜೆಸ್ಟಿಕ್​ 2’ ಚಿತ್ರದಲ್ಲಿ ಹೀಗೊಂದು ಹಾಡು
‘ಶೆಡ್ಡಿಗೆ ಹೋಗಣ ಬಾ..’ ಹಾಡಿನ ಶೂಟಿಂಗ್​
Follow us
|

Updated on: Jul 27, 2024 | 7:31 PM

ಶೀರ್ಷಿಕೆಯ ಕಾರಣದಿಂದ ‘ಮೆಜೆಸ್ಟಿಕ್​ 2’ ಸಿನಿಮಾ ಗಮನ ಸೆಳೆಯುತ್ತಿದೆ. ನಟ ದರ್ಶನ್​ ಅವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟ ಸಿನಿಮಾ ‘ಮೆಜೆಸ್ಟಿಕ್​’. ಆದರೆ ಈಗ ‘ಮೆಜೆಸ್ಟಿಕ್​ 2’ ಸಿನಿಮಾದಲ್ಲಿ ಅವರು ನಟಿಸುತ್ತಿಲ್ಲ. ಬದಲಿಗೆ, ಹೊಸ ನಟ ಭರತ್​ ಅವರು ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಈ ಸಿನಿಮಾದ ಐಟಂ ಸಾಂಗ್ ಚಿತ್ರೀಕರಣ ಮಾಡಲಾಯಿತು. ವಿಶೇಷ ಏನೆಂದರೆ, ಈ ಸಿನಿಮಾದ ಕಥಾನಾಯಕ ದರ್ಶನ್​ ಫ್ಯಾನ್​ ಆಗಿರುತ್ತಾನೆ. ಈಗಿನ ಟ್ರೆಂಡ್​ಗೆ ತಕ್ಕಂತೆ ಹಾಡುಗಳು ಇರಲಿವೆ ಎಂದು ಚಿತ್ರತಂಡ ತಿಳಿಸಿದೆ.

ಹೊಸ ಕಾನ್ಸೆಪ್ಟ್ ಇಟ್ಟುಕೊಂಡು ‘ಅಮ್ಮಾ ಎಂಟರ್​ಪ್ರೈಸಸ್’ ಬ್ಯಾನರ್​ ಮೂಲಕ ಚಿತ್ರದುರ್ಗದ ಹೆಚ್. ಹನುಮಂತಪ್ಪ ಅವರು ‘ಮೆಜೆಸ್ಟಿಕ್​ 2’ ನಿರ್ಮಿಸುತ್ತಿದ್ದಾರೆ. 2002ರಲ್ಲಿ ತೆರೆಕಂಡ ‘ಮೆಜೆಸ್ಟಿಕ್’ ಚಿತ್ರದಲ್ಲಿ 90ರ ದಶಕದಲ್ಲಿ ರೌಡಿಸಂ ಕಹಾನಿ ಇತ್ತು. ಆದರೆ ಈಗ ‘ಮೆಜೆಸ್ಟಿಕ್ 2’ ಸಿನಿಮಾದಲ್ಲಿ ಮೆಜೆಸ್ಟಿಕ್​ನ ರೌಡಿಸಂ, ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳನ್ನು ತೋರಿಸಲಾಗುವುದು. ನಿರ್ದೇಶಕ ರಾಮು ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ನಿರ್ಮಾಪಕ ಹಾಗೂ ವಿತರಕ ಶಿಲ್ಪಾ ಶ್ರೀನಿವಾಸ್ ಅವರ ಮಗ ಭರತ್ ಅವರು ‘ಮೆಜೆಸ್ಟಿಕ್​ 2’ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ‘ಕಂಠೀರವ ಸ್ಟುಡಿಯೋ’ದಲ್ಲಿ ಕಲರ್​ಫುಲ್​ ಸೆಟ್​ ನಿರ್ಮಿಸಿ ಹಾಡಿನ ಶೂಟಿಂಗ್​ ಮಾಡಲಾಗಿದೆ. ಈ ಹಾಡಿಗೆ ನಿರ್ದೇಶಕ ರಾಮು ಅವರೇ ಸಾಹಿತ್ಯ ಬರೆದಿದ್ದಾರೆ. ಸದ್ಯಕ್ಕೆ ಟ್ರೆಂಡ್ ಅನುಸಾರ ಅವರು ಲಿರಿಕ್ಸ್​ ಬರೆದಿದ್ದಾರೆ. ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಎಂಬ ಈ ಹಾಡನ್ನು ಮೇಘನಾ ಹಳ್ಳಿಹಾಳ ಅವರು ಹಾಡಿದ್ದಾರೆ. ಕಳೆದ 3 ದಿನಗಳಿಂದ ನಡೆಯುತ್ತಿರುವ ಈ ಸಾಂಗ್​ ಶೂಟಿಂಗ್​ನಲ್ಲಿ ಐಟಂ ಡ್ಯಾನ್ಸರ್ ಮತ್ತು ನಾಯಕನ ಜತೆಗೆ ಸಹ ಕಲಾವಿದರು ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ

‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಸಾಂಗ್​ಗೆ ಸಂತೋಷ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ರಾಮೋಹಳ್ಳಿ, ಮಾಕಳಿ ಸಮೀಪದ ಸಕ್ರೆ ಅಡ್ಡ, ಹೆಚ್.ಎಂ.ಟಿ., ಆರ್.ಟಿ. ನಗರದ ನಿಸರ್ಗ ಹೌಸ್ ಮುಂತಾದ ಕಡೆಗಳಲ್ಲಿ ಈ ಸಿನಿಮಾಗೆ ಈಗಾಗಲೇ ಶೇಕಡ 50ರಷ್ಟು ಶೂಟಿಂಗ್​ ಮಾಡಲಾಗಿದೆ. ಚಿತ್ರದುರ್ಗದ ಮುರುಘಾ ಮಠದಲ್ಲಿ ಡ್ಯುಯೆಟ್ ಹಾಡನ್ನು ಚಿತ್ರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್