AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ: ‘ಮೆಜೆಸ್ಟಿಕ್​ 2’ ಚಿತ್ರದಲ್ಲಿ ಹೀಗೊಂದು ಹಾಡು

ರೌಡಿಸಂ ಕಹಾನಿ ಇರುವ ‘ಮೆಜೆಸ್ಟಿಕ್​ 2’ ಸಿನಿಮಾದಲ್ಲಿ ಭರತ್​ ಹಾಗೂ ಸಂಹಿತಾ ವಿನ್ಯಾ ಜೋಡಿಯಾಗಿ ನಟಿಸುತ್ತಿದ್ದಾರೆ. ತಾಯಿ ಪಾತ್ರದಲ್ಲಿ ಶ್ರುತಿ ಅಭಿನಯಿಸುತ್ತಿದ್ದಾರೆ. ವಿನು ಮನಸು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ವೀನಸ್ ಮೂರ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಈ ಚಿತ್ರದ ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ' ಹಾಡಿನ ಚಿತ್ರೀಕರಣ ನಡೆದಿದೆ.

ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ: ‘ಮೆಜೆಸ್ಟಿಕ್​ 2’ ಚಿತ್ರದಲ್ಲಿ ಹೀಗೊಂದು ಹಾಡು
‘ಶೆಡ್ಡಿಗೆ ಹೋಗಣ ಬಾ..’ ಹಾಡಿನ ಶೂಟಿಂಗ್​
ಮದನ್​ ಕುಮಾರ್​
|

Updated on: Jul 27, 2024 | 7:31 PM

Share

ಶೀರ್ಷಿಕೆಯ ಕಾರಣದಿಂದ ‘ಮೆಜೆಸ್ಟಿಕ್​ 2’ ಸಿನಿಮಾ ಗಮನ ಸೆಳೆಯುತ್ತಿದೆ. ನಟ ದರ್ಶನ್​ ಅವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟ ಸಿನಿಮಾ ‘ಮೆಜೆಸ್ಟಿಕ್​’. ಆದರೆ ಈಗ ‘ಮೆಜೆಸ್ಟಿಕ್​ 2’ ಸಿನಿಮಾದಲ್ಲಿ ಅವರು ನಟಿಸುತ್ತಿಲ್ಲ. ಬದಲಿಗೆ, ಹೊಸ ನಟ ಭರತ್​ ಅವರು ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಈ ಸಿನಿಮಾದ ಐಟಂ ಸಾಂಗ್ ಚಿತ್ರೀಕರಣ ಮಾಡಲಾಯಿತು. ವಿಶೇಷ ಏನೆಂದರೆ, ಈ ಸಿನಿಮಾದ ಕಥಾನಾಯಕ ದರ್ಶನ್​ ಫ್ಯಾನ್​ ಆಗಿರುತ್ತಾನೆ. ಈಗಿನ ಟ್ರೆಂಡ್​ಗೆ ತಕ್ಕಂತೆ ಹಾಡುಗಳು ಇರಲಿವೆ ಎಂದು ಚಿತ್ರತಂಡ ತಿಳಿಸಿದೆ.

ಹೊಸ ಕಾನ್ಸೆಪ್ಟ್ ಇಟ್ಟುಕೊಂಡು ‘ಅಮ್ಮಾ ಎಂಟರ್​ಪ್ರೈಸಸ್’ ಬ್ಯಾನರ್​ ಮೂಲಕ ಚಿತ್ರದುರ್ಗದ ಹೆಚ್. ಹನುಮಂತಪ್ಪ ಅವರು ‘ಮೆಜೆಸ್ಟಿಕ್​ 2’ ನಿರ್ಮಿಸುತ್ತಿದ್ದಾರೆ. 2002ರಲ್ಲಿ ತೆರೆಕಂಡ ‘ಮೆಜೆಸ್ಟಿಕ್’ ಚಿತ್ರದಲ್ಲಿ 90ರ ದಶಕದಲ್ಲಿ ರೌಡಿಸಂ ಕಹಾನಿ ಇತ್ತು. ಆದರೆ ಈಗ ‘ಮೆಜೆಸ್ಟಿಕ್ 2’ ಸಿನಿಮಾದಲ್ಲಿ ಮೆಜೆಸ್ಟಿಕ್​ನ ರೌಡಿಸಂ, ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳನ್ನು ತೋರಿಸಲಾಗುವುದು. ನಿರ್ದೇಶಕ ರಾಮು ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ನಿರ್ಮಾಪಕ ಹಾಗೂ ವಿತರಕ ಶಿಲ್ಪಾ ಶ್ರೀನಿವಾಸ್ ಅವರ ಮಗ ಭರತ್ ಅವರು ‘ಮೆಜೆಸ್ಟಿಕ್​ 2’ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ‘ಕಂಠೀರವ ಸ್ಟುಡಿಯೋ’ದಲ್ಲಿ ಕಲರ್​ಫುಲ್​ ಸೆಟ್​ ನಿರ್ಮಿಸಿ ಹಾಡಿನ ಶೂಟಿಂಗ್​ ಮಾಡಲಾಗಿದೆ. ಈ ಹಾಡಿಗೆ ನಿರ್ದೇಶಕ ರಾಮು ಅವರೇ ಸಾಹಿತ್ಯ ಬರೆದಿದ್ದಾರೆ. ಸದ್ಯಕ್ಕೆ ಟ್ರೆಂಡ್ ಅನುಸಾರ ಅವರು ಲಿರಿಕ್ಸ್​ ಬರೆದಿದ್ದಾರೆ. ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಎಂಬ ಈ ಹಾಡನ್ನು ಮೇಘನಾ ಹಳ್ಳಿಹಾಳ ಅವರು ಹಾಡಿದ್ದಾರೆ. ಕಳೆದ 3 ದಿನಗಳಿಂದ ನಡೆಯುತ್ತಿರುವ ಈ ಸಾಂಗ್​ ಶೂಟಿಂಗ್​ನಲ್ಲಿ ಐಟಂ ಡ್ಯಾನ್ಸರ್ ಮತ್ತು ನಾಯಕನ ಜತೆಗೆ ಸಹ ಕಲಾವಿದರು ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ

‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಸಾಂಗ್​ಗೆ ಸಂತೋಷ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ರಾಮೋಹಳ್ಳಿ, ಮಾಕಳಿ ಸಮೀಪದ ಸಕ್ರೆ ಅಡ್ಡ, ಹೆಚ್.ಎಂ.ಟಿ., ಆರ್.ಟಿ. ನಗರದ ನಿಸರ್ಗ ಹೌಸ್ ಮುಂತಾದ ಕಡೆಗಳಲ್ಲಿ ಈ ಸಿನಿಮಾಗೆ ಈಗಾಗಲೇ ಶೇಕಡ 50ರಷ್ಟು ಶೂಟಿಂಗ್​ ಮಾಡಲಾಗಿದೆ. ಚಿತ್ರದುರ್ಗದ ಮುರುಘಾ ಮಠದಲ್ಲಿ ಡ್ಯುಯೆಟ್ ಹಾಡನ್ನು ಚಿತ್ರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ