AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಡಿ’ ಸಿನಿಮಾದ ಶೂಟಿಂಗ್​ ಮುಗಿಸಿದ ಶಿಲ್ಪಾ ಶೆಟ್ಟಿ; ಹೊಸ ವಿಡಿಯೋ ಹಂಚಿಕೊಂಡ ನಟಿ

ಬಹುನಿರೀಕ್ಷಿತ ‘ಕೆಡಿ’ ಸಿನಿಮಾದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರು ಸತ್ಯವತಿ ಎಂಬ ಪಾತ್ರ ಮಾಡುತ್ತಿದ್ದಾರೆ. ಈಗ ಅವರು ಈ ಚಿತ್ರದ ಶೂಟಿಂಗ್​ ಮುಗಿಸಿದ್ದಾರೆ. ಅದೇ ಖುಷಿಯಲ್ಲಿ ಚಿತ್ರೀಕರಣದ ಸೆಟ್​ನಿಂದಲೇ ಹೊಸ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾಗೆ ಪ್ರೇಮ್​ ನಿರ್ದೇಶನ ಮಾಡುತ್ತಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

‘ಕೆಡಿ’ ಸಿನಿಮಾದ ಶೂಟಿಂಗ್​ ಮುಗಿಸಿದ ಶಿಲ್ಪಾ ಶೆಟ್ಟಿ; ಹೊಸ ವಿಡಿಯೋ ಹಂಚಿಕೊಂಡ ನಟಿ
ಪ್ರೇಮ್​, ಶಿಲ್ಪಾ ಶೆಟ್ಟಿ
ಮದನ್​ ಕುಮಾರ್​
|

Updated on: May 30, 2024 | 6:02 PM

Share

ಬಾಲಿವುಡ್​ ಬೆಡಗಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಕನ್ನಡದ ‘ಕೆಡಿ’ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಮೈಸೂರಿನಲ್ಲಿ ‘ಕೆಡಿ’ ಸಿನಿಮಾ (KD Kannada Movie) ಶೂಟಿಂಗ್​ ನಡೆಯುತ್ತಿತ್ತು. ಈಗ ಅವರು ಚಿತ್ರೀಕರಣ ಮುಗಿಸಿದ್ದಾರೆ. ಈ ಖುಷಿಯಲ್ಲಿ ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಕೊನೇ ದಿನ ಶೂಟಿಂಗ್​ ಸೆಟ್​ನಿಂದಲೇ ಶಿಲ್ಪಾ ಶೆಟ್ಟಿ ಅವರು ವಿಡಿಯೋ ಮಾಡಿದ್ದಾರೆ. ನಿರ್ದೇಶಕ ‘ಜೋಗಿ’ ಪ್ರೇಮ್​ (Prem) ಸೇರಿದಂತೆ ಇಡೀ ಚಿತ್ರತಂಡದವರ ಜೊತೆ ಶಿಲ್ಪಾ ಶೆಟ್ಟಿ ಖುಷಿ ಖುಷಿಯಿಂದ ಪೋಸ್​ ನೀಡಿದ್ದಾರೆ.

ಧ್ರುವ ಸರ್ಜಾ ಅವರು ‘ಕೆಡಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​ ಹಾಗೂ ಶಿಲ್ಪಾ ಶೆಟ್ಟಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಶಿಲ್ಪಾ ಶೆಟ್ಟಿ ಅವರ ಪಾತ್ರದ ಹೆಸರು ಸತ್ಯವತಿ. ಇದು ತಮ್ಮ ಫೇವರಿಟ್​ ಪಾತ್ರಗಳಲ್ಲಿ ಒಂದು ಎಂದು ಅವರು ಹೇಳಿದ್ದಾರೆ.

‘ಕೆಡಿ’ ಸಿನಿಮಾದಲ್ಲಿ ರೆಟ್ರೋ ಕಾಲದ ಕಥೆ ಇರಲಿದೆ. ಅದಕ್ಕೆ ತಕ್ಕಂತೆಯೇ ಕಲಾವಿದರ ವೇಷಭೂಷಣ ಇದೆ. ಶಿಲ್ಪಾ ಶೆಟ್ಟಿ ಅವರು ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಕೆಲವು ತಿಂಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಸೀರೆ ಗೆಟಪ್​ನಲ್ಲಿ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕೊನೇ ದಿನ ಶೂಟಿಂಗ್​ನಲ್ಲೂ ಅವರು ಇದೇ ಗೆಟಪ್​ ಧರಿಸಿದ್ದಾರೆ. ಶೂಟಿಂಗ್​ ಮುಗಿದ ಖುಷಿಯಲ್ಲಿ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಕೆಡಿ’ ಸಿನಿಮಾ ಚಿತ್ರೀಕರಣದ ನಡುವೆ ನಂಜುಂಡೇಶ್ವರನಿಗೆ ನಮಿಸಿದ ಶಿಲ್ಪಾ ಶೆಟ್ಟಿ

ಕನ್ನಡ ಚಿತ್ರರಂಗಕ್ಕೂ ಶಿಲ್ಪಾ ಶೆಟ್ಟಿ ಅವರಿಗೂ ಹಳೆಯ ನಂಟು. ‘ಪ್ರೀತ್ಸೋದ್​ ತಪ್ಪಾ’, ‘ಆಟೋ ಶಂಕರ್​’, ‘ಒಂದಾಗೋಣ ಬಾ’ ಚಿತ್ರಗಳಲ್ಲಿ ಅವರು ನಟಿಸುವ ಮೂಲಕ ಕನ್ನಡದ ಸಿನಿಪ್ರಿಯರನ್ನು ರಂಜಿಸಿದ್ದರು. ಅನೇಕ ವರ್ಷಗಳ ಬಳಿಕ ಮತ್ತೆ ಅವರು ‘ಕೆಡಿ’ ಸಿನಿಮಾದ ಮೂಲಕ ಕನ್ನಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ಕನ್ನಡದ ಜೊತೆ ಬೇರೆ ಬೇರೆ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಶಿಲ್ಪಾ ಶೆಟ್ಟಿ ಹಂಚಿಕೊಂಡ ವಿಡಿಯೋ:

ಶಿಲ್ಪಾ ಶೆಟ್ಟಿ ಅವರು ಇತ್ತೀಚೆಗೆ ‘ಕೆಡಿ’ ಸಿನಿಮಾದ ಶೂಟಿಂಗ್​ ಬಿಡುವಿನಲ್ಲಿ ನಂಜನಗೂಡಿನ ನಂಜುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ, ದೇವಾಲಯದ ಆವರಣದಲ್ಲಿ ಕುಳಿತು ಅವರು ಧ್ಯಾನ ಮಾಡಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗಿದ್ದವು. ‘ಕೆಡಿ’ ಸಿನಿಮಾ ಈ ವರ್ಷ ಡಿಸೆಂಬರ್​ನಲ್ಲಿ ತೆರೆಕಾಣಲಿದೆ. ರವಿಚಂದ್ರನ್​, ರಮೇಶ್​ ಅರವಿಂದ್​ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್