AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಪ್ರಣಿತಾಗೆ ಶುಭಕೋರಿದ ಶಿಲ್ಪಾ ಶೆಟ್ಟಿ; ಇಬ್ಬರ ನಡುವೆ ಗೆಳೆತನ ಬೆಳೆದಿದ್ದು ಹೇಗೆ?

ಪ್ರಣಿತಾ ಹಾಗೂ ನಿತಿನ್​ ರಾಜು ಮದುವೆ ಆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಶಿಲ್ಪಾ ಶೆಟ್ಟಿ, ಶುಭಾಶಯ ಹೇಳಿದ್ದಾರೆ.

ಮದುವೆಯಾದ ಪ್ರಣಿತಾಗೆ ಶುಭಕೋರಿದ ಶಿಲ್ಪಾ ಶೆಟ್ಟಿ; ಇಬ್ಬರ ನಡುವೆ ಗೆಳೆತನ ಬೆಳೆದಿದ್ದು ಹೇಗೆ?
ನಿತಿನ್​ ರಾಜು, ಪ್ರಣಿತಾ ಸುಭಾಷ್​, ಶಿಲ್ಪಾ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 01, 2021 | 3:23 PM

Share

ನಟಿ ಪ್ರಣಿತಾ ಲಾಕ್​​​ಡೌನ್​ನಲ್ಲಿ ಯಾರಿಗೂ ಹೇಳದೇ ಕೇಳದೇ ಹಸೆಮಣೆ ಏರಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಕೊರೊನಾ ವೈರಸ್ ಲಾಕ್​​ಡೌನ್ ಇರುವುದರಿಂದ ಸಿಂಪಲ್ ಮದುವೆ ಆಗಿರುವುದಾಗಿ ಅವರು ತಿಳಿಸಿದ್ದಾರೆ. ಈಗ ಪ್ರಣಿತಾಗೆ ಶುಭಾಶಯಗಳ ಸುರಿಮಳೆ ಆಗುತ್ತಿದೆ. ಕರಾವಳಿ ಬೆಡಗಿ, ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಕೂಡ ಪ್ರಣಿತಾಗೆ ವಿಶ್​ ಮಾಡಿದ್ದಾರೆ. ಹಾಗಾದರೆ, ಇವರ ನಡುವೆ ಗೆಳೆತನ ಬೆಳೆದಿದ್ದು ಹೇಗೆ? ಇಬ್ಬರೂ ಮೊದಲಿನಿಂದಲೂ ಗೆಳತಿಯರಾ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಶಿಲ್ಪಾ ಶೆಟ್ಟಿ ಮದುವೆ ಆದ ನಂತರದಲ್ಲಿ ಬಾಲಿವುಡ್​ನಿಂದ ದೂರವೇ ಉಳಿದಿದ್ದರು. ಕುಟುಂಬ ಹಾಗೂ ಮಕ್ಕಳ ಜತೆಯಲ್ಲಿ ಶಿಲ್ಪಾ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಈಗ ಅವರು ಬಾಲಿವುಡ್​ಗೆ ಕಂಬ್ಯಾಕ್​ ಮಾಡುತ್ತಿದ್ದಾರೆ. ಪ್ರಿಯದರ್ಶನ್​ ನಿರ್ದೇಶನದ ‘ಹಂಗಾಮಾ 2’ ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮತ್ತೊಂದು ಹೀರೋಯಿನ್​ ಆಗಿ ಪ್ರಣಿತಾ ಕಾಣಿಸಿಕೊಂಡಿದ್ದಾರೆ.

‘ಹಂಗಾಮಾ 2’ ಚಿತ್ರದಲ್ಲಿ ಪ್ರಣಿತಾ ಹಾಗೂ ಶಿಲ್ಪಾ ನಡುವೆ ಸಾಕಷ್ಟು ಕಾಂಬಿನೇಷನ್​ಗಳು ಬರಲಿವೆ. ಹೀಗಾಗಿ, ಸೆಟ್​ನಲ್ಲಿ ಹೆಚ್ಚು ಸಮಯ ಒಟ್ಟಿಗೆ ಇದ್ದಿದ್ದರಿಂದ ಇಬ್ಬರು ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಸಿನಿಮಾ ಈಗಾಗಲೇ ಶೂಟಿಂಗ್​ ಪೂರ್ಣಗೊಳಿಸಿಕೊಂಡಿದ್ದು, ಶೀಘ್ರವೇ ತೆರೆಗೆ ಬರಲಿದೆ. ಈಗ ಪ್ರಣಿತಾ ಮದುವೆ ಆಗಿರುವ ವಿಚಾರ ಕೇಳಿ ಶಿಲ್ಪಾ ಶೆಟ್ಟಿ ಖುಷಿಯಾಗಿದ್ದಾರೆ.

ಪ್ರಣಿತಾ ಹಾಗೂ ನಿತಿನ್​ ರಾಜು ಮದುವೆ ಆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಶಿಲ್ಪಾ, ಶುಭಾಶಯ ಹೇಳಿದ್ದಾರೆ. ಈ ಸ್ಟೇಟಸ್​ಅನ್ನು ತಮ್ಮ ಸ್ಟೇಟಸ್​ನಲ್ಲಿ ಪೋಸ್ಟ್​ ಮಾಡಿಕೊಂಡಿರುವ ಪ್ರಣಿತಾ, ಧನ್ಯವಾದ ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ ಮ್ಯೂಚುವಲ್​ ಫ್ರೆಂಡ್​​​​ ಮೂಲಕ ನಿತಿನ್​ ರಾಜು ಅವರ ಗೆಳೆತನ ಪ್ರಣಿತಾಗೆ ಆಗಿತ್ತು. ಆ ನಂತರ ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಬೆಳೆದಿದೆ. ಆ ನಂತರ ಗೆಳೆತನ ಪ್ರೀತಿಯಾಗಿದೆ. ಈಗ ಇಬ್ಬರೂ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಕನಕಪುರ ರಸ್ತೆಯಲ್ಲಿ ಇರುವ ರೆಸಾರ್ಟ್​ವೊಂದರಲ್ಲಿ ಪ್ರಣಿತಾ ಮದುವೆ ನಡೆದಿದೆ. ನಿತಿನ್​ ರಾಜು​ ಜತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಮ್ಯಾ ಸೇರಿ ಅನೇಕರು ಪ್ರಣಿತಾಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ: Pranitha Marriage: ಪ್ರಣಿತಾ ಮದುವೆ ಬಳಿಕ ರಮ್ಯಾ ಕಡೆಗೆ ಪ್ರಶ್ನೆ ಎಸೆದ ಅಭಿಮಾನಿಗಳು​; ಏನಿದು ಲಿಂಕ್​?

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ