AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಪ್ರಣಿತಾಗೆ ಶುಭಕೋರಿದ ಶಿಲ್ಪಾ ಶೆಟ್ಟಿ; ಇಬ್ಬರ ನಡುವೆ ಗೆಳೆತನ ಬೆಳೆದಿದ್ದು ಹೇಗೆ?

ಪ್ರಣಿತಾ ಹಾಗೂ ನಿತಿನ್​ ರಾಜು ಮದುವೆ ಆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಶಿಲ್ಪಾ ಶೆಟ್ಟಿ, ಶುಭಾಶಯ ಹೇಳಿದ್ದಾರೆ.

ಮದುವೆಯಾದ ಪ್ರಣಿತಾಗೆ ಶುಭಕೋರಿದ ಶಿಲ್ಪಾ ಶೆಟ್ಟಿ; ಇಬ್ಬರ ನಡುವೆ ಗೆಳೆತನ ಬೆಳೆದಿದ್ದು ಹೇಗೆ?
ನಿತಿನ್​ ರಾಜು, ಪ್ರಣಿತಾ ಸುಭಾಷ್​, ಶಿಲ್ಪಾ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 01, 2021 | 3:23 PM

Share

ನಟಿ ಪ್ರಣಿತಾ ಲಾಕ್​​​ಡೌನ್​ನಲ್ಲಿ ಯಾರಿಗೂ ಹೇಳದೇ ಕೇಳದೇ ಹಸೆಮಣೆ ಏರಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಕೊರೊನಾ ವೈರಸ್ ಲಾಕ್​​ಡೌನ್ ಇರುವುದರಿಂದ ಸಿಂಪಲ್ ಮದುವೆ ಆಗಿರುವುದಾಗಿ ಅವರು ತಿಳಿಸಿದ್ದಾರೆ. ಈಗ ಪ್ರಣಿತಾಗೆ ಶುಭಾಶಯಗಳ ಸುರಿಮಳೆ ಆಗುತ್ತಿದೆ. ಕರಾವಳಿ ಬೆಡಗಿ, ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಕೂಡ ಪ್ರಣಿತಾಗೆ ವಿಶ್​ ಮಾಡಿದ್ದಾರೆ. ಹಾಗಾದರೆ, ಇವರ ನಡುವೆ ಗೆಳೆತನ ಬೆಳೆದಿದ್ದು ಹೇಗೆ? ಇಬ್ಬರೂ ಮೊದಲಿನಿಂದಲೂ ಗೆಳತಿಯರಾ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಶಿಲ್ಪಾ ಶೆಟ್ಟಿ ಮದುವೆ ಆದ ನಂತರದಲ್ಲಿ ಬಾಲಿವುಡ್​ನಿಂದ ದೂರವೇ ಉಳಿದಿದ್ದರು. ಕುಟುಂಬ ಹಾಗೂ ಮಕ್ಕಳ ಜತೆಯಲ್ಲಿ ಶಿಲ್ಪಾ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಈಗ ಅವರು ಬಾಲಿವುಡ್​ಗೆ ಕಂಬ್ಯಾಕ್​ ಮಾಡುತ್ತಿದ್ದಾರೆ. ಪ್ರಿಯದರ್ಶನ್​ ನಿರ್ದೇಶನದ ‘ಹಂಗಾಮಾ 2’ ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮತ್ತೊಂದು ಹೀರೋಯಿನ್​ ಆಗಿ ಪ್ರಣಿತಾ ಕಾಣಿಸಿಕೊಂಡಿದ್ದಾರೆ.

‘ಹಂಗಾಮಾ 2’ ಚಿತ್ರದಲ್ಲಿ ಪ್ರಣಿತಾ ಹಾಗೂ ಶಿಲ್ಪಾ ನಡುವೆ ಸಾಕಷ್ಟು ಕಾಂಬಿನೇಷನ್​ಗಳು ಬರಲಿವೆ. ಹೀಗಾಗಿ, ಸೆಟ್​ನಲ್ಲಿ ಹೆಚ್ಚು ಸಮಯ ಒಟ್ಟಿಗೆ ಇದ್ದಿದ್ದರಿಂದ ಇಬ್ಬರು ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಸಿನಿಮಾ ಈಗಾಗಲೇ ಶೂಟಿಂಗ್​ ಪೂರ್ಣಗೊಳಿಸಿಕೊಂಡಿದ್ದು, ಶೀಘ್ರವೇ ತೆರೆಗೆ ಬರಲಿದೆ. ಈಗ ಪ್ರಣಿತಾ ಮದುವೆ ಆಗಿರುವ ವಿಚಾರ ಕೇಳಿ ಶಿಲ್ಪಾ ಶೆಟ್ಟಿ ಖುಷಿಯಾಗಿದ್ದಾರೆ.

ಪ್ರಣಿತಾ ಹಾಗೂ ನಿತಿನ್​ ರಾಜು ಮದುವೆ ಆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಶಿಲ್ಪಾ, ಶುಭಾಶಯ ಹೇಳಿದ್ದಾರೆ. ಈ ಸ್ಟೇಟಸ್​ಅನ್ನು ತಮ್ಮ ಸ್ಟೇಟಸ್​ನಲ್ಲಿ ಪೋಸ್ಟ್​ ಮಾಡಿಕೊಂಡಿರುವ ಪ್ರಣಿತಾ, ಧನ್ಯವಾದ ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ ಮ್ಯೂಚುವಲ್​ ಫ್ರೆಂಡ್​​​​ ಮೂಲಕ ನಿತಿನ್​ ರಾಜು ಅವರ ಗೆಳೆತನ ಪ್ರಣಿತಾಗೆ ಆಗಿತ್ತು. ಆ ನಂತರ ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಬೆಳೆದಿದೆ. ಆ ನಂತರ ಗೆಳೆತನ ಪ್ರೀತಿಯಾಗಿದೆ. ಈಗ ಇಬ್ಬರೂ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಕನಕಪುರ ರಸ್ತೆಯಲ್ಲಿ ಇರುವ ರೆಸಾರ್ಟ್​ವೊಂದರಲ್ಲಿ ಪ್ರಣಿತಾ ಮದುವೆ ನಡೆದಿದೆ. ನಿತಿನ್​ ರಾಜು​ ಜತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಮ್ಯಾ ಸೇರಿ ಅನೇಕರು ಪ್ರಣಿತಾಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ: Pranitha Marriage: ಪ್ರಣಿತಾ ಮದುವೆ ಬಳಿಕ ರಮ್ಯಾ ಕಡೆಗೆ ಪ್ರಶ್ನೆ ಎಸೆದ ಅಭಿಮಾನಿಗಳು​; ಏನಿದು ಲಿಂಕ್​?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ