AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಶೂಟಿಂಗ್ ವೇಳೆ ಅವಘಡ, ಚಿತ್ರತಂಡಕ್ಕೆ ನೊಟೀಸ್

Kantara Chapter 1: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ಕಾಂತಾರ: ಚಾಪ್ಟರ್ 1 ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಭಾರಿ ಅವಘಡ ಸಂಭವಿಸಿದೆ. ಆದರೆ ಯಾವುದೇ ಪ್ರಾಣಹಾನಿ ಆಗಿಲ್ಲ ಎನ್ನಲಾಗುತ್ತಿದೆ. ಶೂಟಿಂಗ್ ವೇಳೆ ದೋಣಿಯೊಂದು ಮುಗುಚಿಕೊಂಡಿದೆ. ಘಟನೆಯನ್ನು ಪೊಲೀಸರು ಹಾಗೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಚಿತ್ರತಂಡಕ್ಕೆ ನೊಟೀಸ್ ನೀಡಲು ಮುಂದಾಗಿದೆ.

‘ಕಾಂತಾರ’ ಶೂಟಿಂಗ್ ವೇಳೆ ಅವಘಡ, ಚಿತ್ರತಂಡಕ್ಕೆ ನೊಟೀಸ್
Kantara Chapter 1
ಮಂಜುನಾಥ ಸಿ.
|

Updated on: Jun 15, 2025 | 4:19 PM

Share

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಚಿತ್ರೀಕರಣದ ವೇಳೆ ಭಾರಿ ಅವಘಡ ಸಂಭವಿಸಿದೆ. ಶೂಟಿಂಗ್​ ನಡೆಯುತ್ತಿದ್ದ ದೋಣಿ ನೀರಿನಲ್ಲಿ ಮುಗುಚಿಕೊಂಡಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭಿವಿಸಿಲ್ಲ ಎಂದು ಚಿತ್ರತಂಡ ಹೇಳಿದೆ. ದೋಣಿ ಮುಗಿಚುವುದು ಸಾಮಾನ್ಯ ಅವಘಡ ಅಲ್ಲ. ಸ್ವಲ್ಪ ಅದೃಷ್ಟ ಕೈಕೊಟ್ಟಿದ್ದರೂ ಹತ್ತಾರು ಮಂದಿ ಜೀವ ಕಳೆದುಕೊಳ್ಳಬಹುದಾಗಿತ್ತು. ಆದರೆ ಅದೃಷ್ಟವಶಾತ್ ಅಂತಹದ್ದು ನಡೆದಂತಿಲ್ಲ. ಆದರೆ ಈ ವಿಷಯವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಚಿತ್ರತಂಡಕ್ಕೆ ನೊಟೀಸ್ ನೀಡಲು ಮುಂದಾಗಿದೆ.

ನಿನ್ನೆ (ಜೂನ್ 14)ರ ಸಂಜೆ ಶಿವಮೊಗ್ಗ ಜಿಲ್ಲೆಯ ಮಾಣಿ ಜಲಾಶಯದ ಬಳಿ ಚಿತ್ರೀಕರಣ ನಡೆಸುವಾಗ ದೋಣಿ ಮುಗುಚಿದೆ ಎನ್ನಲಾಗುತ್ತಿದೆ. ದೋಣಿ ಮುಗುಚಿದ ವೇಳೆ ದೋಣಿಯಲ್ಲಿ 30 ಮಂದಿ ಇದ್ದರಂತೆ. ಎಲ್ಲರೂ ಈಜಿಕೊಂಡು ದಡ ಸೇರಿದ್ದಾರೆ. ಕೆಲವರಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಶಿಕಾರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ ಸ್ಪಷ್ಟನೆ ನೀಡಿರುವ ನಿರ್ಮಾಣ ಸಂಸ್ಥೆ ಹೊಂಬಾಳೆಯ ಎಕ್ಸಿಕ್ಯೂಟಿವ್ ನಿರ್ಮಾಪಕ ಆದರ್ಶ್, ಯಾವುದೇ ಸಾವು-ನೋವು ಸಂಭವಿಸಿಲ್ಲ, ನಾವು ಎಲ್ಲ ಎಚ್ಚರಿಕೆ ತೆಗೆದುಕೊಂಡಿದ್ದೇವು ಎಂದಿದ್ದಾರೆ.

ಇದೀಗ ಶಿವಮೊಗ್ಗ ಜಿಲ್ಲಾಧಿಕಾರಿ, ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಚಿತ್ರತಂಡ, ಶೂಟಿಂಗ್​ಗೆ ಎಲ್ಲ ರೀತಿಯ ಪರವಾನಗಿಗಳನ್ನು ತೆಗೆದುಕೊಂಡಿದೆಯೇ, ಚಿತ್ರೀಕರಣದ ವೇಳೆ ಅಗತ್ಯ ಭದ್ರತಾ ಎಚ್ಚರಿಕೆಗಳನ್ನು ವಹಿಸಿದೆಯೇ ಎಂದು ಪರೀಕ್ಷಿಸಲು ಮುಂದಾಗಿದ್ದಾರೆ. ಈ ಕುರಿತು ಟಿವಿ9 ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ,‘ಸ್ಥಳೀಯ ಆಡಳಿತದಿಂದ ಕಾಂತರ ಶೂಟಿಂಗ್ ಅನುಮತಿ ಪಡೆದಿಲ್ಲ, ಎಲ್ಲಾ ಅನುಮತಿಯನ್ನ ಬೆಂಗಳೂರಿನಿಂದಲೇ ಪಡೆದಿರುವುದಾಗಿ ಪಡೆದಿರುವುದಾಗಿ ಚಿತ್ರ ತಂಡ ಹೇಳಿದೆ. ಈ ಹಿನ್ನಲೆಯಲ್ಲಿ ಚಿತ್ರತಂಡಕ್ಕೆ ನೋಟೀಸ್ ಜಾರಿ ಮಾಡಿ ಶೂಟಿಂಗ್ ನ ಅನುಮತಿಯ ಪರವಾನಗಿಯನ್ನ ಪರಿಶೀಲಿಸಲಾಗುವುದು’ ಎಂದಿದ್ದಾರೆ.

ಇದನ್ನೂ ಓದಿ:‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆ

‘ಘಟನೆ ಕುರಿತು ಈಗಾಗಲೇ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶೂಟಿಂಗ್ ಮಾಡುವುದಕ್ಕೆ ನಮ್ಮದು ಯಾವುದೇ ಅಭ್ಯಂತರವಿಲ್ಲ, ಶಿವಮೊಗ್ಗ ಪ್ರವಾಸೋದ್ಯಮ ಕ್ಕೆ ಶೂಟಿಂಗ್ ನಿಂದ ಅನುಕೂಲ ಆಗುತ್ತದೆ. ಆದರೆ ಶೂಟಿಂಗ್ ಮಾಡುವ ಸಂದರ್ಭದಲ್ಲಿ ಎಲ್ಲ ಸುರಕ್ಷಿತ ಕ್ರಮ ತೆಗೆದುಕೊಳ್ಳಬೇಕಿದೆ. ‘ಕಾಂತಾರ’ ಚಿತ್ರತಂಡ ಎಲ್ಲ ಸುರಕ್ಷಿತ ಕ್ರಮಗಳನ್ನು ತೆಗೆದುಕೊಂಡಿತ್ತೆ ಎಂಬುದನ್ನು ಪರಿಶೀಲಿಸಬೇಕಿದ್ದು, ಇದೀಗ ಹೊಸನಗರ ತಹಸೀಲ್ದಾರ ರಶ್ಮಿ ಮೂಲಕ ನೋಟೀಸ್ ನೀಡುವಂತೆ ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ