AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಸ್ಟ್ ಮ್ಯಾರೀಡ್’ ಆದ ಶೈನ್ ಶೆಟ್ಟಿ; ಪಾರ್ಟಿ ಮಾಡಿಕೊಂಡು ಹಾಯಾಗಿದ್ದ ಲೈಫ್​​ನಲ್ಲಿ ವಿವಾಹ ಎಂಬ ಚಿಂತೆ

ಶೈನ್ ಶೆಟ್ಟಿ ಅವರು ತಮ್ಮ ಹೊಸ ಚಿತ್ರ ‘ಜಸ್ಟ್ ಮ್ಯಾರೀಡ್’ನಲ್ಲಿನ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರದಲ್ಲಿ ಅವರು ಮುದ್ದಿನಿಂದ ಬೆಳೆದ, ಬ್ಯಾಚುಲರ್ ಜೀವನ ನಡೆಸುತ್ತಿದ್ದ ಯುವಕನ ಪಾತ್ರವನ್ನು ನಿರ್ವಹಿಸಿದ್ದಾರೆ. ವಿವಾಹದ ನಂತರ ಅವರ ಜೀವನದಲ್ಲಿ ಉಂಟಾಗುವ ಬದಲಾವಣೆಗಳು ಚಿತ್ರದ ಮುಖ್ಯ ಥೀಮ್ ಆಗಿದೆ.

‘ಜಸ್ಟ್ ಮ್ಯಾರೀಡ್’ ಆದ ಶೈನ್ ಶೆಟ್ಟಿ; ಪಾರ್ಟಿ ಮಾಡಿಕೊಂಡು ಹಾಯಾಗಿದ್ದ ಲೈಫ್​​ನಲ್ಲಿ ವಿವಾಹ ಎಂಬ ಚಿಂತೆ
ಶೈನ್-ಅಂಕಿತಾ
ರಾಜೇಶ್ ದುಗ್ಗುಮನೆ
|

Updated on: Apr 03, 2025 | 3:04 PM

Share

ನಟ ಶೈನ್ ಶೆಟ್ಟಿ (Shine Shetty) ಅವರು ಕನ್ನಡದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ಮಾಡಿ ಅವರು ಗಮನ ಸೆಳೆದಿದ್ದಾರೆ. ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆದ ‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ಶೆಟ್ಟಿ ಹೆಸರಿನ ಪಾತ್ರ ಮಾಡಿ ಗಮನ ಸೆಳೆದಿದ್ದರು. ಈಗ ಅವರು ‘ಜಸ್ಟ್ ಮ್ಯಾರೀಡ್’ ಆಗಿದ್ದಾರೆ. ಹಾಗಂತ ಅವರ ವಿವಾಹ ನೆರವೇರಿಲ್ಲ. ಈ ಶೀರ್ಷಿಕೆಯಲ್ಲಿ ಬರುತ್ತಿರೋ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರದ ಬಗ್ಗೆ ಟಿವಿ9 ಕನ್ನಡ ಡಿಜಿಟಲ್ ಜೊತೆ ಮಾತನಾಡಿದ್ದಾರೆ.

‘ಇಡೀ ಫ್ಯಾಮಿಲಿಯಲ್ಲಿರೋ ಎಲ್ಲರಿಗೂ ಹೆಣ್ಣು ಮಕ್ಕಳೇ. ಅಂಥ ಕುಟುಂಬದಲ್ಲಿ ಓರ್ವ ಹುಡುಗ ಹುಟ್ಟುತ್ತಾನೆ. ಆತನನ್ನು ತುಂಬಾನೇ ಮುದ್ದಿನಿಂದ ಬೆಳೆಸಲಾಗುತ್ತದೆ. ಆತ ಹಾಯಾಗಿ ಬ್ಯಾಚುಲರ್ ಜೀವನ ನಡೆಸುತ್ತಾ ಇರುತ್ತಾನೆ. ಅಂಥವನಿಗೆ ವಿವಾಹ ಆದರೆ ಏನಾಗುತ್ತದೆ ಎಂಬುದೇ ಜಸ್ಟ್ ಮ್ಯಾರೀಡ್ ಚಿತ್ರದ ಕಥೆ’ ಎಂದಿದ್ದಾರೆ ಶೈನ್ ಶೆಟ್ಟಿ.

‘ಹೋರಿಯನ್ನು ನಿಯಂತ್ರಿಸೋಕೆ ಮೂಗುದಾರ ಹಾಕುತ್ತಾರೆ. ಅದೇ ರೀತಿ ಈತನಿಗೂ ಒಂದು ಮೂಗುದಾರ ಹಾಕೋಣ ಎಂದು ಮದುವೆ ಮಾಡುತ್ತಾರೆ. ಆತರ ಮದುವೆ ಮಾಡಿದಾಗ ಏನಾಗುತ್ತದೆ? ಅವನು ಬದಲಾಗುತ್ತಾನಾ ಎಂಬಿತ್ಯಾದಿ ವಿಚಾರಗಳನ್ನು ಹೇಳುತ್ತಾ ಇದ್ದೇವೆ’ ಎಂಬುದು ಶೈನ್ ಶೆಟ್ಟಿ ಮಾತು. ಈ ಚಿತ್ರದಲ್ಲಿ ಅಂಕಿತಾ ಅಮರ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಚಿತ್ರದ ನಾಯಕಿ. ಅವರ ಜೊತೆ, ದೇವರಾಜ್ ಜೊತೆ, ಅಚ್ಯುತ್ ಕುಮಾರ್ ಹೀಗೆ ಎಲ್ಲಾ ಕಲಾವಿದರ ಜೊತೆ ನಟಿಸಿದ್ದು ಖುಷಿ ಕೊಟ್ಟಿದೆ ಎಂಬುದು ಶೈನ್ ಶೆಟ್ಟಿ ಅಭಿಪ್ರಾಯ. ಈಗಾಗಲೇ ‘ಜಸ್ಟ್ ಮ್ಯಾರೀಡ್’ ಚಿತ್ರದ ಹಾಡುಗಳು ರಿಲೀಸ್ ಆಗಿ ಗಮನ ಸೆಳೆದಿವೆ. ಸಿನಿಮಾ ರಿಲೀಸ್​ಗೆ ಈಗಾಗಲೇ ಸಕಲ ಸಿದ್ಧತೆ ನಡೆದಿದೆ.

ಇದನ್ನೂ ಓದಿ
Image
ನನಗೆ ಒಬ್ಬರ ಮೇಲೆ ಸಖತ್ ಲವ್ ಆಗಿದೆ; ವೇದಿಕೆ ಮೇಲೆ ಮನಬಿಚ್ಚಿ ಮಾತಾಡಿದ ರಮೋಲ
Image
ವಿವಾಹದ ಬಳಿಕ ನಯನಾತಾರ ಜೊತೆ ಅಫೇರ್; ಪ್ರಭುದೇವ ಜೀವನವೇ ಹಾಳಾಯಿತು
Image
ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್
Image
ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್

ಇದನ್ನೂ ಓದಿ: ಗಲ್ಲಿ ಕಿಚನ್ ಪಯಣಕ್ಕೆ ವಿದಾಯ; ಶೈನ್ ಶೆಟ್ಟಿ ಭಾವುಕ ಪೋಸ್ಟ್  

‘ಮರ್ಯಾದೆ ಪ್ರಶ್ನೆ’ ಚಿತ್ರದಲ್ಲಿ ಶೈನ್ ಶೆಟ್ಟಿ ಅವರು ಹೆಚ್ಚು ಹೊತ್ತು ತೆರೆಮೇಲೆ ಬರೋದಿಲ್ಲ. ಆದರೆ, ಅವರ ಪಾತ್ರಕ್ಕೆ ಪ್ರಾಮುಖ್ಯತೆ ಇದೆ. ‘ನೀವು ಇನ್ನೂ ಸ್ವಲ್ಪ ಹೊತ್ತು ತೆರೆಮೇಲೆ ಇರಬೇಕಿತ್ತು’ ಎಂದು ಕೆಲವರು ಶೈನ್ ಅವರಿಗೆ ಹೇಳಿದ್ದು ಇದೆಯಂತೆ. ‘ಯಾವುದೇ ಪಾತ್ರ ಸಿಕ್ಕರೂ ನಾನು ಮಾಡುತ್ತೇನೆ. ಅದಕ್ಕೆ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ. ಬೇರೆ ರೀತಿ ಮಾಡಲು ಹೋದರೆ ಅದರ ತೂಕ ಹೋಗುತ್ತದೆ’ ಎಂದಿದ್ದಾರೆ ಶೈನ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ