AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಸ್ಟ್ ಮ್ಯಾರೀಡ್’ ಆದ ಶೈನ್ ಶೆಟ್ಟಿ; ಪಾರ್ಟಿ ಮಾಡಿಕೊಂಡು ಹಾಯಾಗಿದ್ದ ಲೈಫ್​​ನಲ್ಲಿ ವಿವಾಹ ಎಂಬ ಚಿಂತೆ

ಶೈನ್ ಶೆಟ್ಟಿ ಅವರು ತಮ್ಮ ಹೊಸ ಚಿತ್ರ ‘ಜಸ್ಟ್ ಮ್ಯಾರೀಡ್’ನಲ್ಲಿನ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರದಲ್ಲಿ ಅವರು ಮುದ್ದಿನಿಂದ ಬೆಳೆದ, ಬ್ಯಾಚುಲರ್ ಜೀವನ ನಡೆಸುತ್ತಿದ್ದ ಯುವಕನ ಪಾತ್ರವನ್ನು ನಿರ್ವಹಿಸಿದ್ದಾರೆ. ವಿವಾಹದ ನಂತರ ಅವರ ಜೀವನದಲ್ಲಿ ಉಂಟಾಗುವ ಬದಲಾವಣೆಗಳು ಚಿತ್ರದ ಮುಖ್ಯ ಥೀಮ್ ಆಗಿದೆ.

‘ಜಸ್ಟ್ ಮ್ಯಾರೀಡ್’ ಆದ ಶೈನ್ ಶೆಟ್ಟಿ; ಪಾರ್ಟಿ ಮಾಡಿಕೊಂಡು ಹಾಯಾಗಿದ್ದ ಲೈಫ್​​ನಲ್ಲಿ ವಿವಾಹ ಎಂಬ ಚಿಂತೆ
ಶೈನ್-ಅಂಕಿತಾ
ರಾಜೇಶ್ ದುಗ್ಗುಮನೆ
|

Updated on: Apr 03, 2025 | 3:04 PM

Share

ನಟ ಶೈನ್ ಶೆಟ್ಟಿ (Shine Shetty) ಅವರು ಕನ್ನಡದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ಮಾಡಿ ಅವರು ಗಮನ ಸೆಳೆದಿದ್ದಾರೆ. ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆದ ‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ಶೆಟ್ಟಿ ಹೆಸರಿನ ಪಾತ್ರ ಮಾಡಿ ಗಮನ ಸೆಳೆದಿದ್ದರು. ಈಗ ಅವರು ‘ಜಸ್ಟ್ ಮ್ಯಾರೀಡ್’ ಆಗಿದ್ದಾರೆ. ಹಾಗಂತ ಅವರ ವಿವಾಹ ನೆರವೇರಿಲ್ಲ. ಈ ಶೀರ್ಷಿಕೆಯಲ್ಲಿ ಬರುತ್ತಿರೋ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರದ ಬಗ್ಗೆ ಟಿವಿ9 ಕನ್ನಡ ಡಿಜಿಟಲ್ ಜೊತೆ ಮಾತನಾಡಿದ್ದಾರೆ.

‘ಇಡೀ ಫ್ಯಾಮಿಲಿಯಲ್ಲಿರೋ ಎಲ್ಲರಿಗೂ ಹೆಣ್ಣು ಮಕ್ಕಳೇ. ಅಂಥ ಕುಟುಂಬದಲ್ಲಿ ಓರ್ವ ಹುಡುಗ ಹುಟ್ಟುತ್ತಾನೆ. ಆತನನ್ನು ತುಂಬಾನೇ ಮುದ್ದಿನಿಂದ ಬೆಳೆಸಲಾಗುತ್ತದೆ. ಆತ ಹಾಯಾಗಿ ಬ್ಯಾಚುಲರ್ ಜೀವನ ನಡೆಸುತ್ತಾ ಇರುತ್ತಾನೆ. ಅಂಥವನಿಗೆ ವಿವಾಹ ಆದರೆ ಏನಾಗುತ್ತದೆ ಎಂಬುದೇ ಜಸ್ಟ್ ಮ್ಯಾರೀಡ್ ಚಿತ್ರದ ಕಥೆ’ ಎಂದಿದ್ದಾರೆ ಶೈನ್ ಶೆಟ್ಟಿ.

‘ಹೋರಿಯನ್ನು ನಿಯಂತ್ರಿಸೋಕೆ ಮೂಗುದಾರ ಹಾಕುತ್ತಾರೆ. ಅದೇ ರೀತಿ ಈತನಿಗೂ ಒಂದು ಮೂಗುದಾರ ಹಾಕೋಣ ಎಂದು ಮದುವೆ ಮಾಡುತ್ತಾರೆ. ಆತರ ಮದುವೆ ಮಾಡಿದಾಗ ಏನಾಗುತ್ತದೆ? ಅವನು ಬದಲಾಗುತ್ತಾನಾ ಎಂಬಿತ್ಯಾದಿ ವಿಚಾರಗಳನ್ನು ಹೇಳುತ್ತಾ ಇದ್ದೇವೆ’ ಎಂಬುದು ಶೈನ್ ಶೆಟ್ಟಿ ಮಾತು. ಈ ಚಿತ್ರದಲ್ಲಿ ಅಂಕಿತಾ ಅಮರ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಚಿತ್ರದ ನಾಯಕಿ. ಅವರ ಜೊತೆ, ದೇವರಾಜ್ ಜೊತೆ, ಅಚ್ಯುತ್ ಕುಮಾರ್ ಹೀಗೆ ಎಲ್ಲಾ ಕಲಾವಿದರ ಜೊತೆ ನಟಿಸಿದ್ದು ಖುಷಿ ಕೊಟ್ಟಿದೆ ಎಂಬುದು ಶೈನ್ ಶೆಟ್ಟಿ ಅಭಿಪ್ರಾಯ. ಈಗಾಗಲೇ ‘ಜಸ್ಟ್ ಮ್ಯಾರೀಡ್’ ಚಿತ್ರದ ಹಾಡುಗಳು ರಿಲೀಸ್ ಆಗಿ ಗಮನ ಸೆಳೆದಿವೆ. ಸಿನಿಮಾ ರಿಲೀಸ್​ಗೆ ಈಗಾಗಲೇ ಸಕಲ ಸಿದ್ಧತೆ ನಡೆದಿದೆ.

ಇದನ್ನೂ ಓದಿ
Image
ನನಗೆ ಒಬ್ಬರ ಮೇಲೆ ಸಖತ್ ಲವ್ ಆಗಿದೆ; ವೇದಿಕೆ ಮೇಲೆ ಮನಬಿಚ್ಚಿ ಮಾತಾಡಿದ ರಮೋಲ
Image
ವಿವಾಹದ ಬಳಿಕ ನಯನಾತಾರ ಜೊತೆ ಅಫೇರ್; ಪ್ರಭುದೇವ ಜೀವನವೇ ಹಾಳಾಯಿತು
Image
ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್
Image
ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್

ಇದನ್ನೂ ಓದಿ: ಗಲ್ಲಿ ಕಿಚನ್ ಪಯಣಕ್ಕೆ ವಿದಾಯ; ಶೈನ್ ಶೆಟ್ಟಿ ಭಾವುಕ ಪೋಸ್ಟ್  

‘ಮರ್ಯಾದೆ ಪ್ರಶ್ನೆ’ ಚಿತ್ರದಲ್ಲಿ ಶೈನ್ ಶೆಟ್ಟಿ ಅವರು ಹೆಚ್ಚು ಹೊತ್ತು ತೆರೆಮೇಲೆ ಬರೋದಿಲ್ಲ. ಆದರೆ, ಅವರ ಪಾತ್ರಕ್ಕೆ ಪ್ರಾಮುಖ್ಯತೆ ಇದೆ. ‘ನೀವು ಇನ್ನೂ ಸ್ವಲ್ಪ ಹೊತ್ತು ತೆರೆಮೇಲೆ ಇರಬೇಕಿತ್ತು’ ಎಂದು ಕೆಲವರು ಶೈನ್ ಅವರಿಗೆ ಹೇಳಿದ್ದು ಇದೆಯಂತೆ. ‘ಯಾವುದೇ ಪಾತ್ರ ಸಿಕ್ಕರೂ ನಾನು ಮಾಡುತ್ತೇನೆ. ಅದಕ್ಕೆ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ. ಬೇರೆ ರೀತಿ ಮಾಡಲು ಹೋದರೆ ಅದರ ತೂಕ ಹೋಗುತ್ತದೆ’ ಎಂದಿದ್ದಾರೆ ಶೈನ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು