AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bairagee: ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿ; ‘ಜೇಮ್ಸ್’ ಜತೆಗೆ ಪ್ರದರ್ಶನವಾಗಲಿದೆ ‘ಬೈರಾಗಿ’ ಟೀಸರ್!

Shiva Rajkumar | Puneeth Rajkumar: ಶಿವರಾಜ್​ಕುಮಾರ್ ಅಭಿನಯದ ‘ಬೈರಾಗಿ’ ಈಗಾಗಲೇ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟಿಸಿರುವ ಚಿತ್ರ. ಇದೀಗ ಚಿತ್ರತಂಡ ಅಭಿಮಾನಿಗಳಿಗೆ ಹೊಸ ಸಮಾಚಾರ ನೀಡಿದೆ. ಮಾರ್ಚ್ 17ರಂದು ‘ಬೈರಾಗಿ’ ಟೀಸರ್ ರಿಲೀಸ್ ಆಗಲಿದ್ದು, ‘ಜೇಮ್ಸ್’ ಜತೆ ಪ್ರದರ್ಶನವಾಗಲಿದೆ.

Bairagee: ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿ; ‘ಜೇಮ್ಸ್’ ಜತೆಗೆ ಪ್ರದರ್ಶನವಾಗಲಿದೆ ‘ಬೈರಾಗಿ’ ಟೀಸರ್!
‘ಬೈರಾಗಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ (ಎಡ), ಶಿವಣ್ಣ, ಅಪ್ಪು (ಬಲ)
TV9 Web
| Edited By: |

Updated on: Mar 13, 2022 | 3:40 PM

Share

ಮಾರ್ಚ್ 17ರಂದು ಪುನೀತ್ ರಾಜ್​ಕುಮಾರ್ (Puneeth Rajkumar) ಜನ್ಮದಿನ. ಅಂದು ಅವರು ನಾಯಕನಾಗಿ ಅಭಿನಯಿಸಿದ್ದ ‘ಜೇಮ್ಸ್’ ರಿಲೀಸ್ (James Release) ಆಗಲಿದೆ. ಚಿತ್ರವನ್ನು ಸಂಭ್ರಮಿಸಲು ಅಭಿಮಾನಿಗಳು ಭರ್ಜರಿ ತಯಾರಿ ನಡೆಸುತ್ತಿರುವಂತೆಯೇ ಹೊಸ ಸಮಾಚಾರ ಸಿಕ್ಕಿದೆ. ಇದನ್ನು ಕೇಳಿ ಫ್ಯಾನ್ಸ್ ಮತ್ತಷ್ಟು ಥ್ರಿಲ್ ಆಗಿದ್ದಾರೆ. ಶಿವರಾಜ್​ಕುಮಾರ್ (Shiva Rajkumar) ಅಭಿನಯದ ‘ಬೈರಾಗಿ’ ಚಿತ್ರದ ಟೀಸರ್​ಅನ್ನು (Bairagee Teaser) ಮಾರ್ಚ್ 17ರಂದು ರಿಲೀಸ್ ಮಾಡಲು ನಿರ್ಧರಿಸಲಾಗಿದೆ; ಅದೂ ಕೂಡ ಚಿತ್ರಮಂದಿರಗಳಲ್ಲಿ! ಹೌದು. ‘ಜೇಮ್ಸ್’ ಪ್ರದರ್ಶನದ ವೇಳೆ ‘ಬೈರಾಗಿ’ ಟೀಸರ್ ಕಾಣಿಸಿಕೊಳ್ಳಲಿದೆ. ಪುನೀತ್​ ಜನ್ಮದಿನದ ಸಂಭ್ರಮಾಚರಣೆಗೆ ‘ಬೈರಾಗಿ’ ಕೂಡ ಸೇರಿಕೊಳ್ಳಲಿದೆ ಎಂದು ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ. ಈ ಮೂಲಕ ಫ್ಯಾನ್ಸ್​​ಗೆ ಮಾರ್ಚ್ 17ರಂದು ಡಬಲ್ ಧಮಾಕಾ ಸಿಗಲಿದೆ. ಈ ಕುರಿತು ನಿರ್ದೇಶಕ ವಿಜಯ್ ಮಿಲ್ಟನ್ ಟ್ವೀಟ್ ಮಾಡಿದ್ದು, ‘‘ಪವರ್​ಸ್ಟಾರ್ ಹುಟ್ಟುಹಬ್ಬವನ್ನು ಆಚರಿಸಲು ಇಡೀ ಕರ್ನಾಟಕದೊಂದಿಗೆ ‘ಬೈರಾಗಿ’ ತಂಡ ಕೂಡ ಸೇರಿಕೊಳ್ಳಲಿದೆ. ಮಾರ್ಚ್ 17ರಿಂದ ಚಿತ್ರಮಂದಿರದಲ್ಲಿ ‘ಬೈರಾಗಿ’ ಟೀಸರ್ ಪ್ರದರ್ಶನವಾಗಲಿದೆ’’ ಎಂದು ಬರೆದಿದ್ದಾರೆ.

ಟೀಸರ್ ರಿಲೀಸ್ ಬಗ್ಗೆ ವಿಜಯ್ ಮಿಲ್ಟನ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

‘ಬೈರಾಗಿ’ ಈಗಾಗಲೇ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ. ಶಿವರಾಜ್​ಕುಮಾರ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಕ್ರೇಜ್ ಹುಟ್ಟಿಸಿವೆ. ಕಲರ್​ಫುಲ್ ಲುಕ್ ಮೂಲಕ ಶಿವಣ್ಣ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ. ತಮ್ಮ 123ನೇ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಲವು ಅವತಾರ ತಾಳಿದ್ದಾರೆ. ಈ ಹಿಂದೆ ಹುಲಿ ಮುಖವರ್ಣಿಕೆಯಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದ ಚಿತ್ರವೊಂದು ವೈರಲ್ ಆಗಿತ್ತು.

‘ಬೈರಾಗಿ’ ತಾರಾಗಣ ಕೂಡ ದೊಡ್ಡದಿದೆ. ‘ಟಗರು’ ಬಳಿಕ​ ಶಿವಣ್ಣ ಹಾಗೂ ಧನಂಜಯ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ದಿಯಾ’ ಮೂಲಕ ಕನ್ನಡಿಗರ ಮನೆಮಾತಾದ ‘ಪೃಥ್ವಿ ಅಂಬರ್’ ಈ ಚಿತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. ನಾಯಕಿಯಾಗಿ ಅಂಜಲಿ ನಟಿಸುತ್ತಿದ್ದಾರೆ. ಹಿರಿಯ ನಟ ಶಶಿಕುಮಾರ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಕಾಲಿವುಡ್​ನ ಜನಪ್ರಿಯ ನಿರ್ದೇಶಕ ವಿಜಯ್ ಮಿಲ್ಟನ್ ಆಕ್ಷನ್ ಕಟ್ ಹೇಳಿದ್ದು, ಛಾಯಾಗ್ರಹಣದ ಹೊಣೆಯನ್ನೂ ಹೊತ್ತಿದ್ದಾರೆ.

ಇಂದು ಪುನೀತ್​ ಅಭಿಮಾನಿಗಳಿಗೆ ಹಲವು ವಿಶೇಷ ಸುದ್ದಿ:

ಇಂದು (ಮಾ.13) ಅಪ್ಪು ಅಭಿಮಾನಿಗಳಿಗೆ ವಿಶೇಷ ದಿನವೆಂದೇ ಹೇಳಬೇಕು. ಇದಕ್ಕೆ ಕಾರಣಗಳು ಹಲವು. ಮೈಸೂರು ವಿಶ್ವವಿದ್ಯಾನಿಲಯವು ಪುನೀತ್​ಗೆ ಗೌರವ ಡಾಕ್ಟರೇಟ್ ಘೋಷಿಸಿದೆ. ಮಾರ್ಚ್ 22ರಂದು ರಾಜ್ಯಪಾಲರು ಪ್ರದಾನ ಮಾಡಲಿದ್ದು, ಅಶ್ವಿನಿ ಪುನೀತ್​ ರಾಜ್​ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದೇ ‘ಜೇಮ್ಸ್ ಪ್ರಿ ರಿಲೀಸ್ ಈವೆಂಟ್’ ಕೂಡ ನಡೆಯಲಿದೆ. ಜತೆಗೆ ‘ಜೇಮ್ಸ್’ ರಿಲೀಸ್ ಸಿದ್ಧತೆಯಲ್ಲಿ ಅಭಿಮಾನಿಗಳಿದ್ದು, ಟಿಕೆಟ್​ಗಳು ಖಾಲಿಯಾಗುತ್ತಿವೆ. ಈ ನಡುವೆ ‘ಬೈರಾಗಿ’ ಟೀಸರ್ ರಿಲೀಸ್ ಬಗ್ಗೆ ಮಾಹಿತಿ ಬಂದಿದ್ದು, ಎಲ್ಲರೂ ಮತ್ತಷ್ಟು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ:

Puneeth Rajkumar: ಡಾ.ರಾಜ್ ಹಾದಿಯಲ್ಲಿ ಅಪ್ಪು; ಮೈಸೂರು ವಿವಿಯಿಂದ ಪುನೀತ್​ಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ

‘ಜೇಮ್ಸ್​’ ಮಾತ್ರವಲ್ಲ; ಮಾ.17ಕ್ಕೆ ಸಿಗಲಿದೆ ಇನ್ನೊಂದು ಸರ್ಪ್ರೈಸ್​: ಇಲ್ಲಿದೆ ಗುಡ್​ ನ್ಯೂಸ್​

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ