AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಟಕ ದಮನಕ’: ಪರಸ್ಪರರ ಬಗ್ಗೆ ಶಿವಣ್ಣ-ಪ್ರಭುದೇವ ಮಾತು

Karataka Damanaka: ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ಒಟ್ಟಿಗೆ ನಟಿಸಿ ಯೋಗರಾಜ್ ಭಟ್ ನಿರ್ದೇಶನ ಮಾಡಿರುವ ‘ಕರಟಕ ದಮನಕ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾ ಬಗ್ಗೆ ಶಿವಣ್ಣ ಹಾಗೂ ಪ್ರಭುದೇವ ಮಾತನಾಡಿದ್ದಾರೆ.

‘ಕರಟಕ ದಮನಕ’: ಪರಸ್ಪರರ ಬಗ್ಗೆ ಶಿವಣ್ಣ-ಪ್ರಭುದೇವ ಮಾತು
Karataka-Damanaka
ಮಂಜುನಾಥ ಸಿ.
|

Updated on: Feb 23, 2024 | 11:13 PM

Share

ಶಿವರಾಜ್ ಕುಮಾರ್ (Shiva Rajkumar) ಹಾಗೂ ಪ್ರಭುದೇವ (Prabhudeva) ನಟನೆಯ ‘ಕರಟಕ-ದಮನಕ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಯೋಗರಾಜ್ ಭಟ್ ನಿರ್ದೇಶನದ ಈ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ‘ಕಾಟೇರ’ ಮೂಲಕ ಇತ್ತೀಚೆಗಷ್ಟೆ ಸೂಪರ್ ಹಿಟ್ ನೀಡಿರುವ ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿರುವ ಸಿನಿಮಾ ಇದು. ಸಿನಿಮಾ ತಂಡ ಪ್ರಚಾರ ಆರಂಭಿಸಿದ್ದು, ಇದೀಗ ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ಇಬ್ಬರೂ ಸಹ ಪರಸ್ಪರರೊಟ್ಟಿಗೆ ಕೆಲಸ ಮಾಡಿದ ಅನುಭವ ಹಂಚಿಕೊಂಡಿದ್ದಾರೆ.

ಮೊದಲ ಬಾರಿ ಭಟ್ರು ಹಾಗೂ ಪ್ರಭುದೇವ ಜೊತೆ ಸಿನಿಮಾ ಮಾಡಿದ್ದೀನಿ ಇದು ಸಹಜವಾಗಿಯೇ ಖುಷಿ ಕೊಡುವ ವಿಚಾರ. ಸುಂದರಂ (ಪ್ರಭುದೇವ ತಂದೆ) ಸರ್ ಅಪ್ಪಾಜಿಗೆ ಡ್ಯಾನ್ಸ್ ಹೇಳಿಕೊಡುತ್ತಿದ್ದರು. ಈಗ ಅವರ ಮಗನ ಜೊತೆ ನಾನು ನಟಿಸಿದ್ದೀನಿ. ಪ್ರಭುದೇವ ಫ್ಯಾಮಿಲಿ ಬಾಂಡಿಂಗ್ ಇರುವ ನಟ. ಪ್ರಭುದೇವ ತುಂಬಿದ ಕೊಡ, ಅವರಲ್ಲಿ ಅಪಾರ ಪ್ರತಿಭೆ ಇದೆ. ಹಾಗೆಂದು ಅವರು ಅಹಂಕಾರ ತೋರುವುದಿಲ್ಲ. ಕೊರಿಯೋಗ್ರಫಿ, ನಿರ್ದೇಶನ, ನಟನೆ ಮೂರು ವಿಭಾಗದಲ್ಲಿಯೂ ಯಶಸ್ಸು ಕಂಡಿದ್ದಾರೆ’ ಎಂದಿದ್ದಾರೆ ಶಿವರಾಜ್ ಕುಮಾರ್.

ಇದನ್ನೂ ಓದಿ:ಶಿವರಾಜ್ ಕುಮಾರ್-ರಾಮ್ ಚರಣ್ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ

ಸಿನಿಮಾದಲ್ಲಿ ಪ್ರಭುದೇವ ಜೊತೆಗೆ ತಮ್ಮ ಡ್ಯಾನ್ಸ್ ಬಗ್ಗೆ ಮಾತನಾಡಿರುವ ಶಿವರಾಜ್ ಕುಮಾರ್, ‘ಎನರ್ಜಿ ಇರುಆಗಲೇ ಡ್ಯಾನ್ಸ್, ಫೈಟ್ ಆ್ಯಕ್ಟಿಂಗ್ ಮಾಡಬೇಕು’ ಎಂದಿದ್ದಾರೆ. ‘ಕರಟಕ ದಮನಕ’ ಬಗ್ಗೆ ಮಾತನಾಡಿ, ‘ಸಮಾಜದ ಒಂದು ಸಮಸ್ಯೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೀವಿ. ಭಟ್ರೆ ಯಾವಾಗ ಸಿನ್ಮಾ ಮಾಡ್ತೀರಾ ಅಂತ ನಾನೇ ಕೇಳ್ತಿದ್ದೆ, ಕೊನೆಗೆ ‘ಕರಟಕ ದಮನಕ’ ಸಿನಿಮಾ ಮೂಲಕ ಅದು ಸಾಧ್ಯವಾಯ್ತು. ನನ್ನ ಫೇವರೇಟ್ ಯೋಗರಾಜ್ ಭಟ್, ಸೂರಿ ಪ್ರಮುಖರು’ ಎಂದು ಮೆಚ್ಚುಗೆ ಸೂಚಿಸಿದರು ಶಿವರಾಜ್ ಕುಮಾರ್.

ಇನ್ನು ನಟ ಪ್ರಭುದೇವ ಮಾತನಾಡಿ, ‘ಶಿವಣ್ಣನ ಜೊತೆ ನಟಿಸಬೇಕು ಅಂದಾಗ ನಿಜವಾಗಿಯೂ ಖುಷಿ ಆಯ್ತು. ಶಿವಣ್ಣ ಅವರಿಂದ ಒಳ್ಳೆ ಹುಡುಗ ಅನ್ನಿಸ್ಕೊಬೇಕು ಅನ್ನಿಸಿಸದ್ದಂತು ನಿಜ. ಶಿವಣ್ಣನ ಸಾಂಗ್ಸ್ ನೋಡುವಾಗ ಇಷ್ಟೊಂದು ಎನರ್ಜಿ ಹೇಗೆ ಬರುತ್ತೆ ಅನ್ನಿಸ್ತಿತ್ತು. ನಾನು ಡ್ಯಾನ್ಸ್​ಗಾಗಿ ಎರಡು ದಿನ ತರಬೇತಿ ಮಾಡಿದೆ. ಆದರೆ ಶಿವಣ್ಣ 2-3 ಗಂಟೆಲೆ ಫಿಕಪ್ ಆಗಿಬಿಡೋರು. ಮಲ್ಟಿಸ್ಟಾರರ್ ಸಿನ್ಮಾ ಎಂದರೆ ನನಗೆ ತುಂಬಾ ಇಷ್ಟ. ಶಿವಣ್ಣನ ಜೊತೆ ಆಕ್ಟಿಂಗ್ ಮಾಡಿದ್ದು ಬಹಳ ಫನ್ ಆಗಿತ್ತು. ನಾವು ಮನೇಲಿ ಕನ್ನಡನೇ ಮಾತಾಡ್ತೀವಿ. ಯೋಗರಾಜ್ ಭಟ್ರು ಬಹಳ ಡೇಂಜರಸ್ ಡೈರೆಕ್ಟರ್’ ಎಂದು ಮೆಚ್ಚುಗೆ ಸೂಚಿಸಿದರು. ಅಪ್ಪು ಅವರೊಟ್ಟಿಗೆ ಡ್ಯಾನ್ಸ್ ಮಾಡಿದ ಅನುಭವವನ್ನೂ ಸಹ ಪ್ರಭುದೇವ ನೆನಪು ಮಾಡಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ