AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar Surgery: ಶಿವರಾಜ್​ಕುಮಾರ್​ ಆಪರೇಷನ್ ಸಕ್ಸಸ್​; ಇದಕ್ಕೆ ತೆಗೆದುಕೊಂಡ ಗಂಟೆಗಳೆಷ್ಟು?

ಶಿವರಾಜ್ ಕುಮಾರ್ ಅವರ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಹಲವು ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಮತ್ತು ಕುಟುಂಬಸ್ಥರು ಈ ಸುದ್ದಿಯಿಂದ ಸಂತೋಷಗೊಂಡಿದ್ದಾರೆ. ಶಿವರಾಜ್ ಕುಮಾರ್ ಅವರು ಶೀಘ್ರದಲ್ಲೇ ಚೇತರಿಸಿಕೊಂಡು ನಟನೆಗೆ ಮರಳುವ ನಿರೀಕ್ಷೆಯಿದೆ.

Shiva Rajkumar Surgery: ಶಿವರಾಜ್​ಕುಮಾರ್​ ಆಪರೇಷನ್ ಸಕ್ಸಸ್​; ಇದಕ್ಕೆ ತೆಗೆದುಕೊಂಡ ಗಂಟೆಗಳೆಷ್ಟು?
ಶಿವಣ್ಣ
ಮಾಲತೇಶ ಜಗ್ಗೀನ್
| Edited By: |

Updated on:Dec 25, 2024 | 7:29 AM

Share

ನಟ ಶಿವರಾಜ್​ಕುಮರ್ ಅವರ ಅಭಿಮಾನಿಗಳ ಕೋರಿಕೆ ಈಡೇರಿದೆ. ಅವರ ಸರ್ಜರಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಭಾರತೀಯ ಕಾಲಮಾನ ಮಂಗಳವಾರ (ಡಿಸೆಂಬರ್ 24) ಸಂಜೆ 6 ಗಂಟೆಗೆ (ಅಮೆರಿಕದ ಕಾಲ ಮಾನ ಬೆಳಿಗ್ಗೆ 8 ಗಂಟೆಗೆ) ಆಪರೇಷನ್ ಆರಂಭ ಆಯಿತು. 4-5 ಗಂಟೆಗಳ ಕಾಲ ಆಪರೇಷನ್ ನಡೆದಿದ್ದು ಅದು ಯಶಸ್ವಿಯಾಗಿದೆ ಎಂಬ ವಿಚಾರ ಗೊತ್ತಾಗಿದೆ. ಈ ಬಗ್ಗೆ ಆಪ್ತ ಮೂಲಗಳು ಮಾಹಿತಿ ರಿವೀಲ್ ಮಾಡಿವೆ.

ಶಿವರಾಜ್​ಕುಮಾರ್ ಮೊದಲಿನಿಂದಲೂ ಪಾಸಿಟಿವ್ ಆಗಿ ಯೋಚಿಸುತ್ತಾ ಬಂದವರು. ಅವರು ಎಲ್ಲವನ್ನೂ ಪಾಸಿಟಿವ್ ಆಗಿ ತೆಗೆದುಕೊಳ್ಳುತ್ತಾರೆ. ಅದೇ ರೀತಿ ಸರ್ಜರಿ ನಡೆಯುತ್ತದೆ ಎಂದಾಗ ಅದನ್ನೂ ಪಾಸಿಟಿವ್ ಆಗಿ ತೆಗೆದುಕೊಂಡರಯ. ಜೋಶ್​ನಲ್ಲಿ ಅಮೆರಿಕ ತೆರಳಿದ ಅವರು ಶಸ್ತಚಿಕಿತ್ಸೆ ಪೂರ್ಣಗೊಳಿಸಿಕೊಂಡಿದ್ದಾರೆ. ಈ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಹೋಮ-ಹವನ

ಶಿವರಾಜ್​ಕುಮಾರ್ ಅವರು ಬೇಗ ಚೇತರಿಕೆ ಕಾಣಲಿ ಎಂದು ಹೋಮ-ಹವನಗಳು ನಡೆದಿದ್ದವು. ಸಾಕಷ್ಟು ಕಡೆಗಳಲ್ಲಿ ಪೂಜೆ ಪುನಸ್ಕಾರ ಮಾಡಲಾಯಿತು. ಶಿವಣ್ಣನ ಅಭಿಮಾನಿಗಳು ದೇವರ ಮೊರೆ ಹೋದರು. ಈ ಎಲ್ಲ ಪೂಜೆ-ಪುನಸ್ಕಾರ, ಹೋಮ-ಹವನ ಹಾಗೂ ಅಭಿಮಾನಿಗಳ ಪ್ರಾರ್ಥನೆ ಫಲ ಕೊಟ್ಟಿದೆ.

ಆಗಿದ್ದೇನು?

ಶಿವರಾಜ್​ಕುಮಾರ್ ಅವರಿಗೆ ಕ್ಯಾನ್ಸರ್ ಇತ್ತು. ಇದಕ್ಕಾಗಿ ಅವರು ಅಮೆರಿಕದ ಫ್ಲೋರಿಡಾದ್ಲಿರುವ ಮಿಯಾಮಿ ಕ್ಯಾನ್ಸರ್ ಇನ್​ಸ್ಟಿಟ್ಯೂಟ್​ನಲ್ಲಿ ಸರ್ಜರಿ ಮಾಡಿಸಿಕೊಂಡರು. ಆರು ಗಂಟೆಗಳ ಕಾಲ ಆಪರೇಷನ್ ನಡೆದಿದೆ. ಡಾ. ಮುರುಗೇಶ್ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದೆ. 4 ಗಂಟೆಗಳ ಕಾಲ ಆಪರೇಷನ್ ನಡೆದಿದೆ.

ಇದನ್ನೂ ಓದಿ:  ಅಮೆರಿಕದಲ್ಲಿ ಶಿವರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ; ದೂರವಾಣಿ ಮೂಲಕ ಮಾತಾಡಿದ ಸಿಎಂ

ಬ್ರೇಕ್

ಶಿವರಾಜ್​ಕುಮಾರ್ ಅವರು ಈಗ ನಟನೆಯಿಂದ ದೊಡ್ಡ ಬ್ರೇಕ್ ಪಡೆದಿದ್ದಾರೆ. ಅವರು ಸಿನಿಮಾ ಕೆಲಸಗಳಿಗೆ ಅಲ್ಪವಿರಾಮ ಹಾಕಿ ಸಂಪೂರ್ಣಗಮನ ಆರೋಗದ್ಯದ ಮೇಲೆ ಹಾಕಿದ್ದಾರೆ. ಹೋಂ ಬ್ಯಾನರ್​ನಲ್ಲಿ ಮೂಡಿ ಬಂದ ‘ಭೈರತಿ ರಣಗಲ್’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ ಅವರು, ಇದರ ಪ್ರಚಾರದಲ್ಲಿ ಭಾಗಿ ಆದರು. ಅಲ್ಲಿಯವರೆಗೆ ಶಿವಣ್ಣನಿಗೆ ಅನಾರೋಗ್ಯ ಎಂಬುದಷ್ಟೇ ಸುದ್ದಿ ಇತ್ತು. ಪ್ರಚಾರದ ವೇಳೆ ಅವರು ಈ ವಿಚಾರ ಒಪ್ಪಿಕೊಂಡರು. ಸಂದರ್ಶನದ ಸಂದರ್ಭದಲ್ಲಿ ತಮಗೆ ಅನಾರೋಗ್ಯ ಉಂಟಾಗಿರೋದು ಸತ್ಯ ಎಂದರು. ಅಮೆರಿಕಕ್ಕೆ ಹೋಗುವುದಕ್ಕೂ ಮೊದಲು ತಮಗೆ ಕ್ಯಾನ್ಸರ್ ಎಂಬ ವಿಚಾರ ರಿವೀಲ್ ಮಾಡಿದರು.

ಇದನ್ನೂ ಓದಿ: ‘ಅಪ್ಪನ ಹೆಸರನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದಕ್ಕೆ ಶಿವರಾಜ್​ಕುಮಾರ್ ಒಳ್ಳೆಯ ಉದಾಹರಣೆ’; ಧನುಷ್

ಈಗ ಅವರ ನಟನೆಯ ‘45’ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಈ ಚಿತ್ರ 2025ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಇದೆ. ಈಗ ಅವರು ಕೆಲ ತಿಂಗಳು ಬ್ರೇಕ್ ಪಡೆಯಲಿದ್ದು ಆ ಬಳಿಕ ನಟನೆಗೆ ಮರಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Wed, 25 December 24

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ