AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಜೊತೆ ಶಿವಣ್ಣ ಸಿನಿಮಾ ಮಾಡ್ತಾರಾ? ಶಿವರಾಜ್​ಕುಮಾರ್ ಕೊಟ್ಟರು ಉತ್ತರ

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ‘ಒರಿಜಿನಲ್ ಮಾನ್ಸ್ಟರ್’ ಹಾಗೂ ಸಲ್ಮಾನ್ ಖಾನ್ ಅವರ ‘ಮಾನ್ಸ್ಟರ್’ ಸಿನಿಮಾಗಳ ನಡುವೆ ಯಾವುದೇ ಸ್ಪರ್ಧೆಯಿಲ್ಲ ಎಂದು ಶಿವಣ್ಣ ಸ್ಪಷ್ಟಪಡಿಸಿದ್ದಾರೆ. ಎರಡೂ ಸಿನಿಮಾಗಳ ಶೀರ್ಷಿಕೆಗಳು ಒಂದೇ ರೀತಿಯಲ್ಲಿದ್ದರೂ, ಕಥಾಹಂದರ ಸಂಪೂರ್ಣ ವಿಭಿನ್ನವಾಗಿದೆ ಎಂದು ಅವರು ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಸಲ್ಮಾನ್ ಖಾನ್ ಜೊತೆ ಶಿವಣ್ಣ ಸಿನಿಮಾ ಮಾಡ್ತಾರಾ? ಶಿವರಾಜ್​ಕುಮಾರ್ ಕೊಟ್ಟರು ಉತ್ತರ
ಶಿವಣ್ಣ-ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Aug 31, 2026 | 11:02 AM

Share

ಮುಖ್ಯಾಂಶಗಳು

  • ಮಾನ್ಸ್ಟರ್ ಶೀರ್ಷಿಕೆ ಗೊಂದಲಕ್ಕೆ ತೆರೆ ಎಳೆದ ಶಿವಣ್ಣ
  • ಸಲ್ಮಾನ್ ಖಾನ್ ಜೊತೆ ನಟಿಸುವ ಇಂಗಿತ ವ್ಯಕ್ತಪಡಿಸಿದ ಶಿವರಾಜ್‌ಕುಮಾರ್
  • ಪ್ಯಾನ್ ಇಂಡಿಯಾ ಮಟ್ಟದಲ್ಲಿ ಧೂಳೆಬ್ಬಿಸಲು ಸಜ್ಜಾದ 'ಒರಿಜಿನಲ್ ಮಾನ್ಸ್ಟರ್' 

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ತಮ್ಮ ಮುಂಬರುವ ‘ಒರಿಜಿನಲ್ ಮಾನ್ಸ್ಟರ್’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ‘ಮಾನ್ಸ್ಟರ್’ ಚಿತ್ರಕ್ಕೂ ತಮ್ಮ ಸಿನಿಮಾಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎರಡೂ ಸಿನಿಮಾಗಳ ಶೀರ್ಷಿಕೆಗಳು ಒಂದೇ ರೀತಿಯಲ್ಲಿ ಇದ್ದರೂ ಕಥೆಗಳು ಸಂಪೂರ್ಣ ವಿಭಿನ್ನವಾಗಿವೆ ಎಂದಿದ್ದಾರೆ.

ಇತ್ತೀಚೆಗೆ ನಡೆದ ‘ಒರಿಜಿನಲ್ ಮಾನ್ಸ್ಟರ್’ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮದಲ್ಲಿ ಶಿವಣ್ಣ ಈ ವಿಷಯ ತಿಳಿಸಿದರು. ಇದು ಶಿವಣ್ಣ ಮತ್ತು ಸಲ್ಮಾನ್ ಖಾನ್ ನಡುವಿನ ಸ್ಪರ್ಧೆಯಲ್ಲ ಎಂದು ಅವರು ಹೇಳಿದ್ದಾರೆ. ನಾವಿಬ್ಬರೂ ಒಂದೇ ಎನ್ನುವ ಮೂಲಕ ಅವರು ಅಭಿಮಾನಿಗಳ ಸಂಶಯವನ್ನು ದೂರ ಮಾಡಿದ್ದಾರೆ.

ಇದೇ ವೇಳೆ ಭವಿಷ್ಯದಲ್ಲಿ ಸಲ್ಮಾನ್ ಖಾನ್ ಜೊತೆ ನಟಿಸುವ ಸುಳಿವನ್ನು ಕೂಡ ಶಿವರಾಜ್‌ಕುಮಾರ್ ನೀಡಿದ್ದಾರೆ. ‘ದೇವರ ಹಾಗೂ ಅಭಿಮಾನಿಗಳ ಆಶೀರ್ವಾದ ಇದ್ದರೆ ನಾವಿಬ್ಬರೂ ಸೇರಿ ಖಂಡಿತ ಸಿನಿಮಾ ಮಾಡುತ್ತೇವೆ’ ಎಂದು ಅವರು ತಿಳಿಸಿದ್ದಾರೆ. ಈ ಮಾತು ಚಿತ್ರಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿವೆ.

‘ಒರಿಜಿನಲ್ ಮಾನ್ಸ್ಟರ್’ ಬಹುಭಾಷೆಯ ಆಕ್ಷನ್ ಸಿನಿಮಾ. ಈ ಚಿತ್ರವನ್ನು ಪ್ರಖ್ಯಾತ ನಿರ್ದೇಶಕ ಆರ್‌. ಚಂದ್ರು ನಿರ್ದೇಶಿಸುತ್ತಿದ್ದಾರೆ. ಆನಂದ್ ಪಂಡಿತ್ ಈ ಬಿಗ್ ಬಜೆಟ್ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಲಾಯರ್ ಪಾತ್ರ ಮಾಡಿದ ಶಿವರಾಜ್​ಕುಮಾರ್; ‘ಮಹಾನ್’ ಸಿನಿಮಾದಲ್ಲಿ ನಟನೆ

ಇನ್ನೊಂದೆಡೆ ಸಲ್ಮಾನ್ ಖಾನ್ ಹಾಗೂ ವಂಶಿ ಪೈಡಿಪಲ್ಲಿ ಕಾಂಬಿನೇಷನ್‌ನಲ್ಲಿಯೂ ‘ಮಾನ್ಸ್ಟರ್’ ಸಿನಿಮಾ ಮೂಡಿಬರುತ್ತಿದೆ. ನಯನತಾರಾ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ದಿಲ್ ರಾಜು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಸಿನಿಮಾ 2027ರ ಈದ್ ಹಬ್ಬದ ಸಮಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್