AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಮರಳಲಿರುವ ಶಿವಣ್ಣ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

Shiva Rajkumar: ಆರೋಗ್ಯ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ನಟ ಶಿವರಾಜ್ ಕುಮಾರ್ ಅವರು 35 ದಿನಗಳ ನಂತರ ಬೆಂಗಳೂರಿಗೆ ಇಂದು ವಾಪಸ್ಸಾಗುತ್ತಿದ್ದಾರೆ. ಶಿವರಾಜ್ ಕುಮಾರ್ ಅವರನ್ನು ಸ್ವಾಗತಿಸಲು ಅಭಿಮಾನಿಗಳು, ಆತ್ಮೀಯರು ಸಕಲ ರೀತಿಯಲ್ಲಿ ಸಜ್ಜಾಗಿದ್ದಾರೆ. ವಿಮಾನ ನಿಲ್ದಾಣದಿಂದಲೇ ಶಿವಣ್ಣನಿಗೆ ಭಾರಿ ಅದ್ಧೂರಿ ಸ್ವಾಗತ ಸಿಗಲಿದೆ.

ಬೆಂಗಳೂರಿಗೆ ಮರಳಲಿರುವ ಶಿವಣ್ಣ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ
Shiva Rajkumar
ಮಂಜುನಾಥ ಸಿ.
|

Updated on:Jan 26, 2025 | 8:22 AM

Share

ಒಂದು ತಿಂಗಳ ಹಿಂದೆ ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯಲೆಂದು ಅಮೆರಕಕ್ಕೆ ತೆರಳಿದ್ದ ನಟ ಶಿವರಾಜ್ 35 ದಿನಗಳ ಬಳಿಕ ಇಂದು (ಜನವರಿ 26) ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ. ಅನಾರೋಗ್ಯದಿಂದ ಗುಣಮುಖರಾಗಿ ರಾಜ್ಯಕ್ಕೆ ವಾಪಸ್ಸಾಗುತ್ತಿರುವ ಶಿವರಾಜ್ ಕುಮಾರ್ ಅವರನ್ನು ಸ್ವಾಗತಿಸಲು ಅವರ ಅಭಿಮಾನಿಗಳು, ಸಿನಿಮಾ ಪ್ರೇಮಿಗಳು, ಆತ್ಮೀಯರು ಸಕಲ ರೀತಿಯಲ್ಲಿ ಸಜ್ಜಾಗಿದ್ದಾರೆ. ಶಿವಣ್ಣ ಅವರಿಗೆ ಭಾರಿ ಅದ್ಧೂರಿ ಸ್ವಾಗತವನ್ನು ಅಭಿಮಾನಿಗಳು, ಆತ್ಮೀಯರು ನೀಡಲಿದ್ದಾರೆ.

ಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಭಿಮಾನಿಗಳು, ಆತ್ಮೀಯರು ವಿಮಾನ ನಿಲ್ದಾಣದ ಬಳಿಯೇ ಶಿವಣ್ಣನ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಏರ್​ಪೋರ್ಟ್ ಟೋಲ್ ಇಂದ, ಶಿವಣ್ಣನ ಮನೆಯವರೆಗೆ ಅದ್ಧೂರಿ ಮೆರವಣಿಗೆ ಮಾಡಲು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಶಿವಣ್ಣನನ್ನು ನೋಡಲು ಏರ್​ಪೋರ್ಟ್ ಟೋಲ್ ಬಳಿ ನೂರಾರು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರಜತ್​ಗೆ ಸಿಕ್ತು ವಿಶೇಷ ಅವಾರ್ಡ್; ಏನದು?

ಏರ್​ಪೋರ್ಟ್ ರಸ್ತೆ, ಶಿವಣ್ಣ ಅವರ ಮನೆಯ ಬಳಿ ಶಿವಣ್ಣ ಅವರ ಕಟೌಟ್​ಗಳು ರಾರಾಜಿಸುತ್ತಿವೆ. ಶಿವಣ್ಣ ಗುಣಮುಖರಾಗಿ ಬರುತ್ತಿರುವುದಕ್ಕೆ ಶುಭ ಕೋರಿ ಹಲವಾರು ಮಂದಿ ಕಟೌಟ್​ಗಳನ್ನು, ಶುಭ ಸಂದೇಶಗಳನ್ನು ಕಟೌಟ್​ ಮಾಡಿ ಹಾಕಿಸಿದ್ದಾರೆ. ಶಿವರಾಜ್ ಕುಮಾರ್ ಅವರ ಜೊತೆಗೆ ಕೆಲವೆಡೆ ಗೀತಾ ಶಿವರಾಜ್ ಕುಮಾರ್ ಅವರ ಕಟೌಟ್​ ಅನ್ನು ಸಹ ಹಾಕಿರುವುದು ವಿಶೇಷ. ಇಂದು ಶಿವಣ್ಣ ಮರಳುತ್ತಿರುವುದಕ್ಕೆ ಹಲವೆಡೆ ಅಭಿಮಾನಿಗಳು ಅನ್ನ ಸಂತರ್ಪಣೆ ಸಹ ಆಯೋಜನೆ ಮಾಡಿದ್ದಾರೆ.

ಶಿವರಾಜ್ ಕುಮಾರ್ ಅವರು ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯಲೆಂದು 35 ದಿನಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಮಿಸಿಸಿಪ್ಪಿ ಕ್ಯಾನ್ಸರ್ ಇನ್​ಸ್ಟಿಟ್ಯೂಷನ್​ನಲ್ಲಿ ಶಿವರಾಜ್ ಕುಮಾರ್ ಅವರಿಗೆ ಶಸ್ತಚಿಕಿತ್ಸೆ ಮಾಡಲಾಯ್ತು. ಶಿವಣ್ಣ ಅವರು ಅಲ್ಲಿಯೇ ಸುಮಾರು ಒಂದು ತಿಂಗಳ ಕಾಲ ವಿಶ್ರಾಂತಿ ಪಡೆದು ಇದೀಗ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಶಿವರಾಜ್ ಕುಮಾರ್ ಅವರ ಜೊತೆಯಲ್ಲಿ ಗೀತಾ ಶಿವರಾಜ್ ಕುಮಾರ್, ಅವರ ಪುತ್ರಿ ನಿವೇದಿತಾ, ಮಧು ಬಂಗಾರಪ್ಪ ಅವರುಗಳು ಸಹ ಅಮೆರಿಕಕ್ಕೆ ತೆರಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:22 am, Sun, 26 January 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​