AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡೆನೂರು ಮನು ವಿರುದ್ಧ ಶಿವಣ್ಣ ಅಭಿಮಾನಿಗಳ ಆಕ್ರೋಶ, ಚೇಂಬರ್​ಗೆ ದೂರು

Madenuru Manu: ಅತ್ಯಾಚಾರ ಆರೋಪಿ ಮಡೆನೂರು ಮನುಗೆ ಒಂದರ ಮೇಲೊಂದು ಸಂಕಷ್ಟಗಳು ಎದುರಾಗುತ್ತಲೇ ಇವೆ. ಮಡೆನೂರು ಮನುವಿನದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಆಡಿಯೋನಲ್ಲಿ ಶಿವರಾಜ್ ಕುಮಾರ್ ಹಾಗೂ ಇತರೆ ನಟರ ಬಗ್ಗೆ ಮನು ತುಚ್ಛವಾಗಿ ಮಾತನಾಡಿದ್ದ. ಇದೀಗ ಶಿವರಾಜ್ ಕುಮಾರ್ ಅಭಿಮಾನಿಗಳು ಮನು ವಿರುದ್ಧ ದೂರು ನೀಡಿದ್ದಾರೆ.

ಮಡೆನೂರು ಮನು ವಿರುದ್ಧ ಶಿವಣ್ಣ ಅಭಿಮಾನಿಗಳ ಆಕ್ರೋಶ, ಚೇಂಬರ್​ಗೆ ದೂರು
Madenuru Manu1
ಮಂಜುನಾಥ ಸಿ.
|

Updated on: May 26, 2025 | 1:08 PM

Share

ಮಡೆನೂರು ಮನು (Madenuru Manu) ಸಿನಿಮಾ ಹೀರೋ ಆಗಿ ಎಂಟ್ರಿ ಕೊಡುವ ಸಮಯದಲ್ಲಿಯೇ ಜೀವನದಲ್ಲಿ ದೊಡ್ಡ ಹೊಡೆತ ಬಿದ್ದಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಬೆದರಿಕೆ ಪ್ರಕರಣಗಳು ಮನು ವಿರುದ್ಧ ದಾಖಲಾಗಿದ್ದು, ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ. ಮಡೆನೂರು ಮನುಗೆ ಒಂದರ ಮೇಲೊಂದು ಹೊಡೆತ ಬೀಳುತ್ತಿದ್ದು, ಇದೀಗ ಮಡೆನೂರು ಮನು ಅದ್ದು ಎನ್ನಲಾದ ಹಳೆಯ ಆಡಿಯೋ ಒಂದು ವೈರಲ್ ಆಗಿದ್ದು, ಆಡಿಯೋನಲ್ಲಿ ಮನು, ಶಿವರಾಜ್ ಕುಮಾರ್, ದರ್ಶನ್, ಧ್ರುವ ಸರ್ಜಾ ಇನ್ನೂ ಕೆಲವು ಸ್ಟಾರ್ ನಟರನ್ನು ತುಚ್ಛವಾಗಿ ಬೈಯ್ದಿರುವುದು ದಾಖಲಾಗಿದೆ.

ಮಡೆನೂರು ಮನು ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗುತ್ತಿದ್ದಂತೆ ಶಿವರಾಜ್ ಕುಮಾರ್ ಅವರ ಅಭಿಮಾನಿಗಳು ಮನು ವಿರುದ್ಧ ಆಕ್ರೋಶ ಹೊರಹಾಕಿದ್ದು, ಇಂದು (ಮೇ 26) ಫಿಲಂ ಚೇಂಬರ್​ಗೆ ಹೋಗಿ ಮಡೆನೂರು ಮನು ವಿರುದ್ಧ ದೂರು ಸಹ ದಾಖಲು ಮಾಡಿದ್ದಾರೆ. ಅತ್ಯಾಚಾರ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಹೊತ್ತಿರುವ ಹಾಗೂ ಚಿತ್ರರಂಗದ ಹಿರಿಯ ನಟರ ಬಗ್ಗೆ ಗೌರವ ಇಲ್ಲದ, ನಟರ ಬಗ್ಗೆ ತುಚ್ಛವಾಗಿ ಮಾತನಾಡಿರುವ ಮನು ಅನ್ನು ಚಿತ್ರರಂಗದಿಂದ ನಿಷೇಧಿಸಬೇಕೆಂದು ಅಭಿಮಾನಿಗಳು ದೂರು ಸಲ್ಲಿಸಿದ್ದಾರೆ.

ಫಿಲಂ ಚೇಂಬರ್​ಗೆ ಮಾತ್ರವೇ ಅಲ್ಲದೆ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘಕ್ಕೂ ಸಹ ಮಡೆನೂರು ಮನು ವಿರುದ್ಧ ದೂರು ಸಲ್ಲಿಸಿದ್ದು, ಮೇ 28 ರಂದು ಎನ್​ಆರ್ ರಮೇಶ್ ಅವರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಡೆನೂರು ಮನು ಅನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಒತ್ತಾಯ ಮಾಡುವುದಾಗಿ ನಿರ್ಧರಿಸಿದ್ದಾರೆ.

ಇದನ್ನೂ ಓದಿ:ಸಂತ್ರಸ್ತೆ ಜತೆ ಮಡೆನೂರು ಮನು ನಡೆಸಿದ 31 ತಿಂಗಳ ವಾಟ್ಸಪ್ ಚಾಟ್ ಲಭ್ಯ

ಮಡೆನೂರು ಮನು ಅವರದ್ದು ಎನ್ನಲಾದ ವೈರಲ್ ಆಡಿಯೋನಲ್ಲಿ, ಶಿವಣ್ಣ ಇನ್ನೊಂದು ಆರು ವರ್ಷ ಬದುಕುತ್ತಾನೆ, ದರ್ಶನ್ ಈಗಾಗಲೇ ಸತ್ತೇ ಹೋಗಿದ್ದಾನೆ. ಧ್ರುವ ಸರ್ಜಾ ಇನ್ನು ಎಂಟು ವರ್ಷ ಕ್ರೇಜ್ ಇದ್ದರೆ ಹೆಚ್ಚು, ಈ ಮೂವರ ನಡುವೆ ಕಾಂಪಿಟೇಶನ್ ಕೊಡೋಕೆ ನಿಂತಿರುವ ಗಂಡು ಗಲಿ ಕಣ್ರಿ ನಾನು’ ಎಂದು ದುರಹಂಕಾರದ ಮಾತುಗಳನ್ನು ಮಡೆನೂರು ಮನು ಆಡಿದ್ದಾನೆ. ಇದು ಶಿವರಾಜ್ ಕುಮಾರ್, ಧ್ರುವ ಸರ್ಜಾ ಮತ್ತು ದರ್ಶನ್ ಅಭಿಮಾನಿಗಳು ಬಹುವಾಗಿ ಕೆರಳಿಸಿದೆ.

‘ಮಡೆನೂರು ಮನು’ ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಶುಕ್ರವಾರ ಬಿಡುಗಡೆ ಆಗಿದೆ. ಸಿನಿಮಾ ಅಟ್ಟರ್ ಫ್ಲಾಪ್ ಆಗಿದೆ. ಈಗ ಸ್ಟಾರ್ ನಟರ ಅಭಿಮಾನಿಗಳು ಮಡೆನೂರು ಮನು ವಿರುದ್ಧ ದೂರು ನೀಡಿದ್ದು, ಚಿತ್ರರಂಗದಿಂದಲೇ ಮನು ದೂರಾಗುವ ಸಾಧ್ಯತೆ ದಟ್ಟವಾಗಿದೆ. ಇಂದು (ಮೇ 26) ಮಡೆನೂರು ಮನುವನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇಂದು ಜಾಮೀನು ಸಿಗಲಿದೆಯೇ ಅಥವಾ ನ್ಯಾಯಾಂಗ ಬಂಧನ ಮುಂದುವರೆಯಲಿದೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?