AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಭರ್ಜರಿ ಸಿದ್ಧತೆ, ಕಾರ್ಯಕ್ರಮ ಪಟ್ಟಿ ಹೀಗಿದೆ

Shiva Rajkumar: ಶಿವರಾಜ್ ಕುಮಾರ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಭರ್ಜರಿ ಸಿದ್ಧತೆ, ಕಾರ್ಯಕ್ರಮ ಪಟ್ಟಿ ಹೀಗಿದೆ
ಶಿವರಾಜ್ ಕುಮಾರ್
ಮಂಜುನಾಥ ಸಿ.
|

Updated on: Jul 06, 2023 | 6:55 PM

Share

ಶಿವರಾಜ್ ಕುಮಾರ್ (Shiva Rajkumar) ಅವರ ಸಿನಿಮಾ ಒಂದು ಬಿಡುಗಡೆ ಆಗಿ ಆರು ತಿಂಗಳಾಗಿದೆ. ಈ ನಡುವೆ ಶಿವಣ್ಣನ ಹುಟ್ಟುಹಬ್ಬ (Birthday) ಬಂದಿರುವುದು ಅಭಿಮಾನಿಗಳಿಗೆ (Fan) ಸಂಭ್ರಮಾಚಾರಣೆ ಮಾಡಲು ಕಾರಣವೊಂದು ಸಿಕ್ಕಂತಾಗಿದೆ ಹಾಗಾಗಿ ತಮ್ಮ ಮೆಚ್ಚಿನ ಶಿವಣ್ಣನ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಭರ್ಜರಿಯಾಗಿ ತಯಾರಾಗುತ್ತಿದ್ದಾರೆ. ಜುಲೈ 12 ರಂದು ಶಿವರಾಜ್ ಕುಮಾರ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ರಾಜ್ಯದಾದ್ಯಂತ ಶಿವಣ್ಣನ ಅಭಿಮಾನಿಗಳು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ರೆಡಿಯಾಗಿದ್ದಾರೆ. ಹುಟ್ಟುಹಬ್ಬಕ್ಕೆ ಇನ್ನೂ ಆರುದಿನಗಳಿರುವಂತೆಯೇ ಅಭಿಮಾನಿಗಳು ಕಾರ್ಯಕ್ರಮದ ಪಟ್ಟಿ ತಯಾರಿಸಿದ್ದು, ಹುಟ್ಟುಹಬ್ಬದ ಆಚರಣೆಯ ರೂಪುರೇಷೆ ನೀಡಿದ್ದಾರೆ.

ಜುಲೈ 11 ನೇ ತಾರೀಖು ಮಧ್ಯರಾತ್ರಿಯಂದು ಶಿವಣ್ಣನವರ ನಾಗವಾರದ ಸ್ವಗೃಹದ ಬಳಿ ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಲಿರುವ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಿಸಲಿದ್ದಾರೆ. ಈ ಸಂಭ್ರಮದಲ್ಲಿ ಶಿವಣ್ಣನೂ ಭಾಗಿಯಾಗಲಿದ್ದಾರೆ. ಅಲ್ಲಿಯೇ ಭರ್ಜರಿಯಾಗಿ ಪಟಾಕಿಗಳನ್ನೂ ಸಹ ಹೊಡೆಯಲಿದ್ದಾರೆ ಅಭಿಮಾನಿಗಳು.

ಅದಾದ ಬಳಿಕ ಮತ್ತೆ ಜುಲೈ 12 ರಂದು ಬೆಳಿಗ್ಗೆ 8ರಿಂದ 10 ಗಂಟೆ ವರೆಗೆ ಶಿವಣ್ಣನ ಮನೆಯ ಬಳಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿ ಶಿವಣ್ಣನೊಡನೆ ಹುಟ್ಟುಹಬ್ಬ ಆಚರಣೆ ಮಾಡಲಿದ್ದಾರೆ. ಇದಕ್ಕಾಗಿ ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ ಎನ್ನಲಾಗುತ್ತಿದೆ. ಅದಾದ ಬಳಿಕ ಶಿವರಾಜ್ ಕುಮಾರ್ ಅವರು ಹಾಗೂ ಅಭಿಮಾನಿಗಳು ಡಾ ರಾಜ್​ಕುಮಾರ್ ಸಮಾಧಿ ಸ್ಥಳಕ್ಕೆ ತೆರಳಿ ದರ್ಶನ ಮಾಡಲಿದ್ದಾರೆ.

ಇದನ್ನೂ ಓದಿ:ಶಿವರಾಜ್ ಕುಮಾರ್​ ಸಿನಿಮಾಕ್ಕೆ ಬಾಲಿವುಡ್​ನಿಂದ ಬಂದ ನಟ: ಯಾರು ಈ ರಾಹುಲ್ ಭೋಸ್?

ಅದರ ಬಳಿಕ ಅಭಿಮಾನಿಗಳು ಸಂತೋಷ್ ಚಿತ್ರಮಂದಿರಕ್ಕೆ ತೆರಳಿ ಶಿವಣ್ಣನ ಹೊಸ ಸಿನಿಮಾ ಘೋಸ್ಟ್​ನ ಟೀಸರ್​ನ ವಿಶೇಷ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ. ಘೋಸ್ಟ್ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಹಾಗೂ ಚಿತ್ರತಂಡ ಭಾಗಿವಹಿಸಲಿದೆ. ಮತ್ತೆ ಅಲ್ಲೊಮ್ಮೆ ಘೋಸ್ಟ್ ಚಿತ್ರತಂಡದ ಜೊತೆ ಶಿವರಾಜ್ ಕುಮಾರ್ ಅವರು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಿದ್ದಾರೆ.

ಮಧ್ಯಾಹ್ನ 2 ಗಂಟೆಯಿಂದ ಶಿವರಾಜ್ ಕುಮಾರ್ ಅವರ ಸ್ವಗೃಹದ ಬಳಿ ಅಭಿಮಾನಿಗಳಿಗೆ ಬಿರಿಯಾನಿ ವಿತರಣೆ ಸಹ ಇರಲಿದೆ. ಇದೆಲ್ಲದರ ಜೊತೆಗೆ ಶಿವರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಲವೆಡೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಈ ಮುಂಚೆ ರಾಜ್ಯದ ನಾನಾ ಕಡೆ ಶಿವಣ್ಣನ ಹುಟ್ಟುಹಬ್ಬಕ್ಕೆ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿತ್ತು. ಅಂತೆಯೇ ಈ ಬಾರಿಯೂ ನಾಡಿನ ವಿವಿದೆಡೆ ರಕ್ತದಾನ ಶಿಬಿರಗಳು ನಡೆಯುವ ಸಾಧ್ಯತೆ ಇದೆ.

ಶಿವರಾಜ್ ಕುಮಾರ್ ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ನಟನೆಯ ತಮಿಳು ಸಿನಿಮಾಗಳಾದ ಜೈಲರ್ ಹಾಗೂ ಕ್ಯಾಪ್ಟನ್ ಮಿಲ್ಲರ್ ಎರಡೂ ಬಿಡುಗಡೆಗೆ ರೆಡಿಯಾಗಿವೆ. ಕನ್ನಡ ಸಿನಿಮಾಗಳಾದ ನೀ ಸಿಗೋವರೆಗೂ ಸಹ ಬಿಡುಗಡೆಗೆ ರೆಡಿಯಾಗಿದೆ ಇದರ ಜೊತೆಗೆ ಘೋಸ್ಟ್, 45, ಯೋಗರಾಜ್ ಭಟ್ಟರ ಕರಟಕ ಧಮನಕ, ಭೈರತಿ ರಣಗಲ್, ಸತ್ಯಮಂಗಲ, ಅಶ್ವತ್ಥಾಮ ಸಿನಿಮಾಗಳಲ್ಲಿಯೂ ಶಿವಣ್ಣ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್