AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಆಯ್ತು, ಈಗ ಮಲಯಾಳಂನಿಂದಲೂ ಶಿವಣ್ಣನಿಗೆ ಬೇಡಿಕೆ: ಚಾಲ್ತಿಯಲ್ಲಿದೆ ಮಾತುಕತೆ

Shiva Rajkumar: ತಮಿಳಿನ 'ಜೈಲರ್' ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟನೆಯ ಸಣ್ಣ ಪಾತ್ರ ಭಾರಿ ಜನಮನ್ನಣೆಗಳಿಸಿದ್ದು ಇದೀಗ ಮಲಯಾಳಂನಿಂದಲೂ ಶಿವಣ್ಣನಿಗೆ ಬೇಡಿಕೆ ಬಂದಿದೆ.

ತಮಿಳು ಆಯ್ತು, ಈಗ ಮಲಯಾಳಂನಿಂದಲೂ ಶಿವಣ್ಣನಿಗೆ ಬೇಡಿಕೆ: ಚಾಲ್ತಿಯಲ್ಲಿದೆ ಮಾತುಕತೆ
ಶಿವರಾಜ್ ಕುಮಾರ್
Follow us
ಮಂಜುನಾಥ ಸಿ.
|

Updated on: Aug 16, 2023 | 7:07 PM

ಕನ್ನಡ ಪ್ರೇಕ್ಷಕನಿಗೆ ಗೊತ್ತಿದ್ದ ಶಿವರಾಜ್ ಕುಮಾರ್ (Shiva Rajkumar) ಗತ್ತು, ‘ಜೈಲರ್‘ (Jailer) ಸಿನಿಮಾ ಮೂಲಕ ತಮಿಳು ಪ್ರೇಕ್ಷಕನಿಗೂ ತಿಳಿಯುವಂತಾಯ್ತು. ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮಾಡಿರುವ ಸಣ್ಣ ಪಾತ್ರ, ಇತರ ಪಾತ್ರಗಳನ್ನು ನುಂಗಿ ಹಾಕಿ, ಭರಪೂರ ಶಿಳ್ಳೆ, ಚಪ್ಪಾಳೆಗಳನ್ನು ಗಿಟ್ಟಿಸಿಕೊಳ್ಳುತ್ತಿದೆ. ‘ಜೈಲರ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸ್ವ್ಯಾಗ್ ಪ್ರೇಕ್ಷಕರಿಗೆ ಸಖತ್ ಕಿಕ್ ಕೊಟ್ಟಿದ್ದು, ಇದೀಗ ಮಲಯಾಳಂ (Malayalam) ಚಿತ್ರರಂಗದಲ್ಲೂ ಶಿವಣ್ಣನಿಗೆ ಬೇಡಿಕೆ ಶುರುವಾಗಿದೆ.

ಮಲಯಾಳಂ ಸ್ಟಾರ್ ನಟ, ನಿರ್ದೇಶಕ, ನಿರ್ಮಾಪಕ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾಕ್ಕಾಗಿ ಶಿವರಾಜ್ ಕುಮಾರ್ ಅವರನ್ನು ಕೇಳಲಾಗಿದೆ. ಪೃಥ್ವಿರಾಜ್ ಸುಕುಮಾರನ್, ತಮ್ಮ ಮೆಚ್ಚಿನ ನಟ ಮೋಹನ್​ಲಾಲ್ ಅವರಿಗಾಗಿ ‘ಎಲ್​2: ಎಂಪುರಾನ್’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಮೋಹನ್​ಲಾಲ್ ಜೊತೆಗೆ ಇನ್ನೂ ಕೆಲವು ಪ್ರತಿಭಾವಂತ ನಟರಿದ್ದಾರೆ. ಇದೇ ಸಿನಿಮಾದಲ್ಲಿ ಅತಿಥಿ ಪಾತ್ರಕ್ಕಾಗಿ ಶಿವರಾಜ್ ಕುಮಾರ್ ಅವರನ್ನು ಕೇಳಲಾಗಿದೆ.

‘ಎಲ್​2: ಎಂಪುರಾನ್’ ಸಿನಿಮಾವು, ಮೋಹನ್​ಲಾಲ್ ನಟಿಸಿ ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ್ದ ಸೂಪರ್ ಹಿಟ್ ಸಿನಿಮಾ ‘ಲುಸಿಫರ್’ನ ಮುಂದಿನ ಭಾಗವಾಗಿದ್ದು, ಆ ಸಿನಿಮಾದಲ್ಲಿ ಸಾಕಷ್ಟು ಮಾಸ್ ಎಲಿಮೆಂಟ್​ಗಳು ಇದ್ದವು. ‘ಎಲ್​2: ಎಂಪುರಾನ್’ ಸಿನಿಮಾವನ್ನು ಪ್ಯಾನ್ ಇಂಡಿಯಾ ಸಿನಿಮಾವನ್ನಾಗಿ ಮಾಡುವ ಯೋಚನೆಯಲ್ಲಿ ಪೃಥ್ವಿರಾಜ್ ಸುಕುಮಾರ್ ಇದ್ದು, ಅದೇ ಕಾರಣಕ್ಕೆ ಶಿವರಾಜ್ ಕುಮಾರ್ ಅವರನ್ನು ತಮ್ಮ ಸಿನಿಮಾದಲ್ಲಿ ನಟಿಸುವಂತೆ ಪೃಥ್ವಿರಾಜ್ ಕೇಳಿದ್ದಾರೆ. ಮೋಹನ್​ಲಾಲ್ ಜೊತೆಗೆ ಆತ್ಮೀಯ ಬಂಧ ಹೊಂದಿರುವ ಶಿವಣ್ಣನೂ ಎಸ್ ಎಂದಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ತಮ್ಮದೇ ನಟನೆಯ ‘ಜೈಲರ್’ ಸಿನಿಮಾ ನೋಡಿದ ಶಿವರಾಜ್ ಕುಮಾರ್ ಸಿನಿಮಾದ ಬಗ್ಗೆ ಹೇಳಿದ್ದು ಹೀಗೆ

ಇನ್ನುಳಿದಂತೆ ಶಿವರಾಜ್ ಕುಮಾರ್ ತಮಿಳಿನ ‘ಜೈಲರ್’ ಸಿನಿಮಾದ ಜೊತೆಗೆ ಧನುಶ್ ಜೊತೆಗೆ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅತಿಥಿ ಪಾತ್ರವಲ್ಲದೆ ಸಹ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇನ್ನು ಕನ್ನಡದಲ್ಲಿ ‘ಘೋಸ್ಟ್’ ಸಿನಿಮಾದ ಶೂಟಿಂಗ್ ಅನ್ನು ಮುಗಿಸಿದ್ದು, ಹರ್ಷ ಜೊತೆಗಿನ ಸಿನಿಮಾ, ತೆಲುಗು ನಿರ್ದೇಶಕರೊಬ್ಬರ ಕನ್ನಡ ಸಿನಿಮಾ, ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಸಿನಿಮಾ ಇನ್ನೂ ಹಲವು ಸಿನಿಮಾಗಳಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ. ಇದರ ಜೊತೆಗೆ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ಮತ್ತೊಂದು ಸಿನಿಮಾದಲ್ಲಿಯೂ ಶಿವರಾಜ್ ಕುಮಾರ್ ನಟಿಸುವ ಸಾಧ್ಯತೆ ಇದೆ. ‘ಜೈಲರ್’ ಸಿನಿಮಾದಲ್ಲಿನ ಶಿವರಾಜ್ ಕುಮಾರ್ ಅವರ ಸಣ್ಣ ಪಾತ್ರ ಅವರಿಗೆ ಪರ ರಾಜ್ಯಗಳಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಜನಮನ್ನಣೆ ದೊರಕಿಸಿಕೊಟ್ಟಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್