AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಹವಾ ಎಬ್ಬಿಸಲು ಶಿವರಾಜ್ ಕುಮಾರ್ ರೆಡಿ: ಏನಿದು ಹೊಸ ಸುದ್ದಿ?

Shiva Rajkumar: ಕನ್ನಡ, ತಮಿಳು, ತೆಲುಗು ದಾಟಿ ಈಗ ಉತ್ತರ ಭಾರತದಲ್ಲಿ ಅಬ್ಬರಿಸಲು ಶಿವರಾಜ್ ಕುಮಾರ್ ರೆಡಿಯಾದಂತಿದೆ. ಬಾಲಿವುಡ್ ಸಿನಿಮಾ ಒಂದಕ್ಕೆ ಸಂಬಂಧಿಸಿದಂತೆ ನಿರ್ದೇಶಕರೊಬ್ಬರು ಶಿವಣ್ಣನೊಟ್ಟಿಗೆ ಮಾತುಕತೆ ಮುಗಿಸಿದ್ದಾರಂತೆ.

ಬಾಲಿವುಡ್​ನಲ್ಲಿ ಹವಾ ಎಬ್ಬಿಸಲು ಶಿವರಾಜ್ ಕುಮಾರ್ ರೆಡಿ: ಏನಿದು ಹೊಸ ಸುದ್ದಿ?
ಶಿವರಾಜ್ ಕುಮಾರ್-ಸುದಿಪ್ತೋ ಸೇನ್
ಮಂಜುನಾಥ ಸಿ.
|

Updated on: Aug 29, 2023 | 9:37 PM

Share

ಜೈಲರ್‘ (Jailer) ಸಿನಿಮಾದಿಂದ ಶಿವರಾಜ್ ಕುಮಾರ್ (Shiva Rajkumar) ಹವಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಎದ್ದಿದೆ. ಇಷ್ಟು ದಿನ ಕನ್ನಡಿಗರಿಗಷ್ಟೆ ಗೊತ್ತಿದ್ದ ಶಿವಣ್ಣನ ಗತ್ತು ‘ಜೈಲರ್’ ಸಿನಿಮಾದಿಂದ ಪ್ಯಾನ್ ಇಂಡಿಯಾ ಪ್ರೇಕ್ಷಕರಿಗೂ ಗೊತ್ತಾಗಿದೆ. ಕನ್ನಡದ ಬಹುಬೇಡಿಕೆಯ ಸ್ಟಾರ್ ನಟರಾಗಿದ್ದ ಶಿವರಾಜ್ ಕುಮಾರ್ ‘ಜೈಲರ್’ ಬಳಿಕ ಪರಭಾಷೆಗಳಲ್ಲಿಯೂ ಬೇಡಿಕೆಯ ನಟರಾಗಿಬಿಟ್ಟಿದ್ದಾರೆ. ದಕ್ಷಿಣ ಭಾರತದಲ್ಲಿ ಈಗಾಗಲೇ ಖದರ್ ತೋರಿಸಿರುವ ಶಿವಣ್ಣ, ಬಾಲಿವುಡ್​ನಲ್ಲೂ ಹವಾ ಎಬ್ಬಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿದೆ ಒಂದು ಫೋಟೊ.

ಶಿವರಾಜ್ ಕುಮಾರ್ ಅವರನ್ನು ‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ದೇಶಕ ಸುದಿಪ್ತೋ ಸೇನ್ ಭೇಟಿಯಾಗಿದ್ದಾರೆ. ಜೊತೆಗೆ ಸಿನಿಮಾ ವಿತರಕ ಹಾಗೂ ನಿರ್ಮಾಪಕ ಎನ್​ಎಸ್ ರಾಜಕುಮಾರ್ ಸಹ ಅವರ ಜೊತೆಗಿದ್ದಾರೆ. ಮೂವರು ಒಟ್ಟಿಗಿರುವ ಚಿತ್ರ ಇದೀಗ ವೈರಲ್ ಆಗಿದ್ದು, ಸಿನಿಮಾ ಸಂಬಂಧಿಸಿದಂತೆ ಮಾತುಕತೆಗೆ ಈ ಮೂವರು ಸೇರಿದ್ದಾರೆ ಎನ್ನಲಾಗುತ್ತಿದೆ.

ಹಿಂದಿ ಸಿನಿಮಾ ಒಂದರ ಮಾತುಕತೆ ನಡೆದಿದ್ದು, ಸುದಿಪ್ತೋ ನಿರ್ದೇಶನದ ಈ ಸಿನಿಮಾದ ಬಗ್ಗೆ ಶಿವರಾಜ್ ಕುಮಾರ್ ಸಹ ಆಸಕ್ತಿ ತೋರಿದ್ದು, ಕತೆ ಓಕೆ ಆಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶಿವರಾಜ್ ಕುಮಾರ್, ಡೇಟ್ಸ್ ಹೊಂದಾಣಿಕೆ ಇನ್ನಿತರೆಗಳ ವಿಷಯಗಳ ಮುಂದಿನ ಚರ್ಚೆಯ ಬಳಿಕ ಸಿನಿಮಾ ಅಧಿಕೃತವಾಗಿ ಘೋಷಣೆ ಆಗುವ ಸಾಧ್ಯತೆ ಇದೆ. ಸಿನಿಮಾದ ಕತೆ, ಇತರೆ ಪಾತ್ರವರ್ಗ ಇನ್ನೂ ಕೆಲವು ವಿಷಯಗಳ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

ಇದನ್ನೂ ಓದಿ:ತಮ್ಮದೇ ನಟನೆಯ ಜೈಲರ್ ಸಿನಿಮಾ ನೋಡಿದ ಶಿವರಾಜ್ ಕುಮಾರ್ ಸಿನಿಮಾದ ಬಗ್ಗೆ ಹೇಳಿದ್ದು ಹೀಗೆ

ಶಿವರಾಜ್ ಕುಮಾರ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ನಟನೆಯ ‘ಘೋಸ್ಟ್’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ತಮಿಳಿನಲ್ಲಿ ಧನುಶ್ ಜೊತೆ ನಟಿಸಿರುವ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಸಹ ಶೀಘ್ರವೇ ಬಿಡುಗಡೆ ಆಗಲಿದೆ. ‘ಭೈರತಿ ರಣಗಲ್’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಅದರ ಬಳಿಕ ‘ಕಬ್ಜ 2’ ಸಿನಿಮಾದಲ್ಲಿ ಶಿವಣ್ಣ ನಟಿಸಬೇಕಿದೆ. ತೆಲುಗಿನ ನಿರ್ದೇಶಕರೊಬ್ಬರ ಕನ್ನಡ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ. ಕೆಲ ತಿಂಗಳ ಹಿಂದೆ ಅವರೇ ಹೇಳಿಕೊಂಡಿದ್ದಂತೆ ಸುಮಾರು 10 ಸಿನಿಮಾಗಳು ಅವರ ಕೈಯಲ್ಲಿವೆ. ಇವುಗಳ ನಡುವೆ ಬಾಲಿವುಡ್ ಸಿನಿಮಾಕ್ಕೆ ಡೇಟ್ಸ್ ಹೊಂದಿಸಿಕೊಳ್ಳುವುದು ಕಷ್ಟ ಸಾಧ್ಯವೇ ಸರಿ.

ತಮಿಳಿನ ‘ಜೈಲರ್’ ಸಿನಿಮಾ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸಣ್ಣ ಅತಿಥಿ ಪಾತ್ರದಲ್ಲಷ್ಟೆ ಕಾಣಿಸಿಕೊಂಡಿದ್ದಾರೆ. ಆದರೆ ಆ ಪಾತ್ರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಸಿನಿಮಾ ನೋಡಿದ ತಮಿಳುನಾಡು, ಆಂಧ್ರ-ತೆಲಂಗಾಣದ ಪ್ರೇಕ್ಷಕರು ಶಿವರಾಜ್ ಕುಮಾರ್ ಸ್ವ್ಯಾಗ್​ಗೆ ಫಿದಾ ಆಗಿದ್ದಾರೆ. ‘ಜೈಲರ್’ ದೆಸೆಯಿಂದ ಪರಭಾಷೆಗಳಿಂದ ಶಿವಣ್ಣನಿಗೆ ಬರುತ್ತಿರುವ ಆಫರ್​ಗಳ ಸಂಖ್ಯೆ ದುಪ್ಪಟ್ಟಾಗಿದೆಯಂತೆ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ