ಅಭಿಮಾನಿಗಳಿಗೆ ನಿರಾಸೆ, ಹುಟ್ಟುಹಬ್ಬದಂದು ಸಿಗಲ್ಲ ಶಿವಣ್ಣ

ಜುಲೈ 12 ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬ. ಪ್ರತಿಬಾರಿಯೂ ಅಭಿಮಾನಿಗಳು ಹಬ್ಬದಂತೆ ಶಿವಣ್ಣನ ಹುಟ್ಟುಹಬ್ಬವನ್ನು ಆಚರಿಸುತ್ತಾರೆ. ಆದರೆ ಈ ಬಾರಿ ಶಿವಣ್ಣ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹಾಗೆಂದು ಅಭಿಮಾನಿಗಳು ಸಂಪೂರ್ಣವಾಗಿ ನಿರಾಶರಾಗಬೇಕು ಎಂದೇನಿಲ್ಲ.

ಅಭಿಮಾನಿಗಳಿಗೆ ನಿರಾಸೆ, ಹುಟ್ಟುಹಬ್ಬದಂದು ಸಿಗಲ್ಲ ಶಿವಣ್ಣ
Follow us
|

Updated on:Jul 11, 2024 | 10:46 AM

ಶಿವರಾಜ್ ಕುಮಾರ್ ಹುಟ್ಟುವೆಂದರೆ ಅಭಿಮಾನಿಗಳಿಗೆ ಹಬ್ಬ. ಬಹುತೇಕ ಪ್ರತಿವರ್ಷವೂ ಅಭಿಮಾನಿಗಳು ಶಿವರಾಜ್ ಕುಮಾರ್ ನಿವಾಸದ ಮುಂದೆ ನೆರೆದು ಅವರೊಟ್ಟಿಗೆ ಕೇಕ್ ಕತ್ತರಿಸಿ, ಹಾರ ಹಾಕಿ, ಘೋಷಣೆಗಳನ್ನು ಕೂಗಿ ಸಂಭ್ರಮದಿಂದ ಹುಟ್ಟುಹಬ್ಬ ಆಚರಣೆ ಮಾಡುತ್ತಾರೆ. ಈ ಬಾರಿಯೂ ಸಹ ಅದೇ ಯೋಜನೆಯಲ್ಲಿ ಅಭಿಮಾನಿಗಳಿದ್ದರು. ಆದರೆ ಶಿವರಾಜ್ ಕುಮಾರ್ ನಿರ್ಣಯವೊಂದನ್ನು ಮಾಡಿದ್ದು, ತಾವು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಟ್ಟಿಗೆ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದಿದ್ದಾರೆ. ಅದಕ್ಕಾಗಿ ಕ್ಷಮೆಯನ್ನೂ ಸಹ ಕೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಶಿವರಾಜ್ ಕುಮಾರ್, ‘ಅಭಿಮಾನಿ ದೇವರುಗಳಿಗೆ, ಪ್ರತಿ ವರ್ಷ ನನ್ನ ಹುಟ್ಟುಹಬ್ಬ ದೊಡ್ಡ ಹಬ್ಬ ಆಗೋದು ನಿಮ್ಮ ಜೊತೆ ಕಳೆದಾಗ. ನೀವು ಅಕ್ಕರೆಯಿಂದ ಕೊಡೋ ಹಸ್ತಲಾಘವ, ಪ್ರೀತಿಯ ಅಪ್ಪುಗೆ, ನೀಡೋ ಆಶೀರ್ವಾದ ನಿಮ್ಮ ಶಿವುಗೆ ಶ್ರೀರಕ್ಷೆ. ಈ ವರ್ಷ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರೋದಕ್ಕೆ ಆಗುವುದಿಲ್ಲ, ಆದರೆ ವರ್ಷವಿಡೀ ಒಟ್ಟಿಗೆ ಪ್ರತಿ ದಿನ ಸೆಲೆಬ್ರೇಟ್ ಮಾಡೋಣ. ನಾನು ಹುಟ್ಟುಹಬ್ಬಕ್ಕೆ ಇಲ್ಲದೆ ಇದ್ರೂ ನಿಮ್ಮ ಜೊತೆ ಭೈರತಿ ರಣಗಲ್ ಇರ್ತಾನೆ, ಜುಲೈ 12 ರಂದು ಬೆಳಿಗ್ಗೆ 10:10 ಕ್ಕೆ, ನಿಮ್ಮ ಆಶೀರ್ವಾದ ಸದಾ ಇರಲಿ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ:ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಶಿವರಾಜ್ ಕುಮಾರ್ ಹುಟ್ಟುಹಬ್ಬ ಜುಲೈ 12 ರಂದು ಇದ್ದು ಆ ದಿನ ಶಿವರಾಜ್ ಕುಮಾರ್ ನಟನೆಯ ಹಲವು ಸಿನಿಮಾಗಳ ಅಪ್​ಡೇಟ್​ಗಳು ಹೊರಬೀಳಲಿವೆ. ‘ಭೈರತಿ ರಣಗಲ್’ ಟ್ರೈಲರ್, ‘ಭೈರವನ ಕೊನೆ ಪಾಠ’ ಸಿನಿಮಾದ ಪೋಸ್ಟರ್, ‘45’ ಸಿನಿಮಾದ ಪೋಸ್ಟರ್, ‘ಉತ್ತರಕಾಂಡ’ ಸಿನಿಮಾದ ಪೋಸ್ಟರ್, ಶಿವಣ್ಣ, ರಾಮ್ ಚರಣ್ ತೇಜ ಜೊತೆಗೆ ನಟಿಸುತ್ತಿರುವ ತೆಲುಗಿನ ಸಿನಿಮಾದ ಪೋಸ್ಟರ್ ಹೀಗೆ ಅನೇಕ ಸಿನಿಮಾಗಳ ಅಪ್​ಡೇಟ್​ಗಳು ಹೊರಬೀಳಲಿವೆ. ಶಿವಣ್ಣನ ಸಿನಿಮಾ ಇಷ್ಟಪಡುವವರಿಗೆ ಅಂದು ಹಬ್ಬವೇ ಆಗಲಿದೆ.

ಅಂದಹಾಗೆ ಇತ್ತೀಚೆಗೆ ಕೆಲವು ಸಿನಿಮಾ ನಟರು ತಮ್ಮ ಹುಟ್ಟುಹಬ್ಬ ಆಚರಣೆಯಿಂದ ಹಿಂದೆ ಸರಿದಿದ್ದಾರೆ. ಇದಕ್ಕೆ ದರ್ಶನ್ ಪ್ರಕರಣವೇ ಕಾರಣ ಎನ್ನಲಾಗುತ್ತಿದೆ. ಚಿತ್ರರಂಗದ ಪ್ರಮುಖ ನಟನೊಬ್ಬ ಜೈಲಿನಲ್ಲಿರುವಾಗ ಹುಟ್ಟುಹಬ್ಬ ಆಚರಣೆ ಸೂಕ್ತವಲ್ಲ ಎಂಬ ಕಾರಣಕ್ಕೆ ನಟರುಗಳು ತಮ್ಮ ಹುಟ್ಟುಹಬ್ಬ ಆಚರಣೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ. ಗೋಲ್ಡನ್ ಸ್ಟಾರ್ ಗಣೇಶ್, ಆ ಬಳಿಕ ಪ್ರಜ್ವಲ್ ದೇವರಾಜ್ ಹಾಗೂ ಲೂಸ್ ಮಾದ ಯೋಗಿ ಅವರುಗಳು ಸಹ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಲಿಲ್ಲ. ಅಂತೆಯೇ ಈಗ ಶಿವಣ್ಣ ಸಹ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:08 am, Thu, 11 July 24

ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ