AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar: ಶಿವಣ್ಣ ಹೃದಯವಂತಿಕೆಗಿಲ್ಲ ಸರಿಸಾಟಿ; ಮಕ್ಕಳೊಂದಿಗೆ ಖೋ ಖೋ ಆಡುತ್ತಿರುವ ಅಪರೂಪದ ವಿಡಿಯೋ ಇಲ್ಲಿದೆ

Shivanna: ಶಿವರಾಜ್​ಕುಮಾರ್ ಅವರ ವ್ಯಕ್ತಿತ್ವಕ್ಕೆ ಮಾರುಹೋಗದವರಿಲ್ಲ. ಇತ್ತೀಚೆಗೆ ಅವರ ಅಪರೂಪದ ವಿಡಿಯೋವೊಂದು ವೈರಲ್ ಆಗಿದೆ. ಏನದರ ವಿಶೇಷ? ಮುಂದೆ ಓದಿ.

Shiva Rajkumar: ಶಿವಣ್ಣ ಹೃದಯವಂತಿಕೆಗಿಲ್ಲ ಸರಿಸಾಟಿ; ಮಕ್ಕಳೊಂದಿಗೆ ಖೋ ಖೋ ಆಡುತ್ತಿರುವ ಅಪರೂಪದ ವಿಡಿಯೋ ಇಲ್ಲಿದೆ
ಮಕ್ಕಳೊಂದಿಗೆ ಆಟದಲ್ಲಿ ತಲ್ಲೀನರಾಗಿರುವ ಶಿವಣ್ಣ
TV9 Web
| Edited By: |

Updated on: Dec 28, 2021 | 11:11 AM

Share

ಚಂದನವನದ (Sandalwood) ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shiva Rajkumar) ಅವರದ್ದು ನಿಷ್ಕಲ್ಮಶ ಮನಸ್ಸಿನ ವ್ಯಕ್ತಿತ್ವ. ಇದೇ ಕಾರಣಕ್ಕೆ ಇಡೀ ಕರುನಾಡು ಅವರ ಅಭಿಮಾನಿ. ಜತೆಗೆ ಬಹಳಷ್ಟು ಜನರಿಗೆ ಶಿವರಾಜ್​ಕುಮಾರ್ ಆದರ್ಶವೂ ಹೌದು ಮತ್ತು ಅವರಿಗಿರುವ ಅಭಿಮಾನಿ ಬಳಗವೂ ದೊಡ್ಡದು. ಆದರೆ ಶಿವಣ್ಣ ಒಮ್ಮೆಯೂ ಸ್ಟಾರ್ ಎಂಬುದನ್ನು ಎಲ್ಲರೆದುರು ತೋರಿಸಿಕೊಂಡಿಲ್ಲ. ಸಾಧ್ಯವಾದಷ್ಟು ಜನರ ನಡುವೆ ಬೆರೆತು, ಅವರೊಡನೆ ಒಂದಾಗುತ್ತಾರೆ. ಇದಕ್ಕೆ ನಿದರ್ಶನವೆಂಬಂತೆ ಇತ್ತೀಚಿಗೆ ವಿಡಿಯೋವೊಂದು ವೈರಲ್ ಆಗಿದೆ. ಹೌದು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ನಲಿಯುತ್ತಿರುವ ಶಿವರಾಜ್‌ಕುಮಾರ್ ಅವರ ಅಪರೂಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು‌ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.

ವಿಡಿಯೋದಲ್ಲಿ ಶಿವರಾಜ್​ಕುಮಾರ್ ಮಕ್ಕಳೊಂದಿಗೆ ಖೋ ಖೋ ಆಟದಲ್ಲಿ ನಿರತರಾಗಿರುವುದನ್ನು ಕಾಣಬಹುದು. ಸ್ಟಾರ್ ನಟ ತಮ್ಮೊಂದಿಗೆ ಆಟವಾಡುತ್ತಿರುವುದಕ್ಕೆ ಸಖತ್ ಖುಷಿಯಾಗಿರುವ ಮಕ್ಕಳು ಉತ್ಸಾಹದಿಂದ ಆಟದಲ್ಲಿ ತೊಡಗಿಕೊಂಡಿದ್ದಾರೆ. ಸುತ್ತ ನೆರೆದಿರುವವರೂ ಕೂಡ ಸಂಭ್ರಮದಿಂದ ಪ್ರೋತ್ಸಾಹಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ವಿಡಿಯೋ ನೋಡಿದ ಅಭಿಮಾನಿಗಳು ಶಿವರಾಜ್​ಕುಮಾರ್ ಅವರ ವ್ಯಕ್ತಿತ್ವಕ್ಕೆ ಮಾರುಹೋಗಿದ್ದಾರೆ.

ಶಿವರಾಜ್​ಕುಮಾರ್ ಖೋ ಖೋ ಆಡುತ್ತಿರುವ ವೈರಲ್ ವಿಡಿಯೋ ಇಲ್ಲಿದೆ:

ಜೀ5ನಲ್ಲಿ ಪ್ರದರ್ಶನ ಕಾಣುತ್ತಿದೆ ‘ಭಜರಂಗಿ 2’: ಚಿತ್ರಗಳ ವಿಷಯಕ್ಕೆ ಬಂದರೆ ಶಿವರಾಜ್​ಕುಮಾರ್ ನಟನೆಯ ‘ಭಜರಂಗಿ 2’ ಜೀ5 ಒಟಿಟಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಎ ಹರ್ಷ ನಿರ್ದೇಶನದ ಈ ಚಿತ್ರ ಅಕ್ಟೋಬರ್ 29ರಂದು ಚಿತ್ರಮಂದಿರಗಳಲ್ಲಿ ತೆರೆ ಕಂಡಿತ್ತು. ಈ ಚಿತ್ರದಲ್ಲಿ ನಾಯಕಿಯಾಗಿ ಭಾವನಾ ಮೆನನ್​ ಅಭಿನಯಿಸಿದ್ದಾರೆ. ಭಜರಂಗಿ ಲೋಕಿ, ಶ್ರುತಿ, ಶಿವರಾಜ್​ ಕೆ.ಆರ್​. ಪೇಟೆ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಈ ಸಿನಿಮಾಗೆ ಖ್ಯಾತ ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

‘ಭಜರಂಗಿ 2’ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ಗೆ ಅರ್ಪಿಸಿದ ಶಿವರಾಜ್​ಕುಮಾರ್​

Year Ender 2021: ಈ ವರ್ಷ ಮದುವೆ ಆದ ಸ್ಯಾಂಡಲ್​ವುಡ್​ ಜೋಡಿಗಳ ಬಗ್ಗೆ ಇಲ್ಲಿದೆ ಮಾಹಿತಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು