Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar: ಶಿವಣ್ಣ ಹೃದಯವಂತಿಕೆಗಿಲ್ಲ ಸರಿಸಾಟಿ; ಮಕ್ಕಳೊಂದಿಗೆ ಖೋ ಖೋ ಆಡುತ್ತಿರುವ ಅಪರೂಪದ ವಿಡಿಯೋ ಇಲ್ಲಿದೆ

Shivanna: ಶಿವರಾಜ್​ಕುಮಾರ್ ಅವರ ವ್ಯಕ್ತಿತ್ವಕ್ಕೆ ಮಾರುಹೋಗದವರಿಲ್ಲ. ಇತ್ತೀಚೆಗೆ ಅವರ ಅಪರೂಪದ ವಿಡಿಯೋವೊಂದು ವೈರಲ್ ಆಗಿದೆ. ಏನದರ ವಿಶೇಷ? ಮುಂದೆ ಓದಿ.

Shiva Rajkumar: ಶಿವಣ್ಣ ಹೃದಯವಂತಿಕೆಗಿಲ್ಲ ಸರಿಸಾಟಿ; ಮಕ್ಕಳೊಂದಿಗೆ ಖೋ ಖೋ ಆಡುತ್ತಿರುವ ಅಪರೂಪದ ವಿಡಿಯೋ ಇಲ್ಲಿದೆ
ಮಕ್ಕಳೊಂದಿಗೆ ಆಟದಲ್ಲಿ ತಲ್ಲೀನರಾಗಿರುವ ಶಿವಣ್ಣ
Follow us
TV9 Web
| Updated By: shivaprasad.hs

Updated on: Dec 28, 2021 | 11:11 AM

ಚಂದನವನದ (Sandalwood) ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shiva Rajkumar) ಅವರದ್ದು ನಿಷ್ಕಲ್ಮಶ ಮನಸ್ಸಿನ ವ್ಯಕ್ತಿತ್ವ. ಇದೇ ಕಾರಣಕ್ಕೆ ಇಡೀ ಕರುನಾಡು ಅವರ ಅಭಿಮಾನಿ. ಜತೆಗೆ ಬಹಳಷ್ಟು ಜನರಿಗೆ ಶಿವರಾಜ್​ಕುಮಾರ್ ಆದರ್ಶವೂ ಹೌದು ಮತ್ತು ಅವರಿಗಿರುವ ಅಭಿಮಾನಿ ಬಳಗವೂ ದೊಡ್ಡದು. ಆದರೆ ಶಿವಣ್ಣ ಒಮ್ಮೆಯೂ ಸ್ಟಾರ್ ಎಂಬುದನ್ನು ಎಲ್ಲರೆದುರು ತೋರಿಸಿಕೊಂಡಿಲ್ಲ. ಸಾಧ್ಯವಾದಷ್ಟು ಜನರ ನಡುವೆ ಬೆರೆತು, ಅವರೊಡನೆ ಒಂದಾಗುತ್ತಾರೆ. ಇದಕ್ಕೆ ನಿದರ್ಶನವೆಂಬಂತೆ ಇತ್ತೀಚಿಗೆ ವಿಡಿಯೋವೊಂದು ವೈರಲ್ ಆಗಿದೆ. ಹೌದು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ನಲಿಯುತ್ತಿರುವ ಶಿವರಾಜ್‌ಕುಮಾರ್ ಅವರ ಅಪರೂಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು‌ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.

ವಿಡಿಯೋದಲ್ಲಿ ಶಿವರಾಜ್​ಕುಮಾರ್ ಮಕ್ಕಳೊಂದಿಗೆ ಖೋ ಖೋ ಆಟದಲ್ಲಿ ನಿರತರಾಗಿರುವುದನ್ನು ಕಾಣಬಹುದು. ಸ್ಟಾರ್ ನಟ ತಮ್ಮೊಂದಿಗೆ ಆಟವಾಡುತ್ತಿರುವುದಕ್ಕೆ ಸಖತ್ ಖುಷಿಯಾಗಿರುವ ಮಕ್ಕಳು ಉತ್ಸಾಹದಿಂದ ಆಟದಲ್ಲಿ ತೊಡಗಿಕೊಂಡಿದ್ದಾರೆ. ಸುತ್ತ ನೆರೆದಿರುವವರೂ ಕೂಡ ಸಂಭ್ರಮದಿಂದ ಪ್ರೋತ್ಸಾಹಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ವಿಡಿಯೋ ನೋಡಿದ ಅಭಿಮಾನಿಗಳು ಶಿವರಾಜ್​ಕುಮಾರ್ ಅವರ ವ್ಯಕ್ತಿತ್ವಕ್ಕೆ ಮಾರುಹೋಗಿದ್ದಾರೆ.

ಶಿವರಾಜ್​ಕುಮಾರ್ ಖೋ ಖೋ ಆಡುತ್ತಿರುವ ವೈರಲ್ ವಿಡಿಯೋ ಇಲ್ಲಿದೆ:

ಜೀ5ನಲ್ಲಿ ಪ್ರದರ್ಶನ ಕಾಣುತ್ತಿದೆ ‘ಭಜರಂಗಿ 2’: ಚಿತ್ರಗಳ ವಿಷಯಕ್ಕೆ ಬಂದರೆ ಶಿವರಾಜ್​ಕುಮಾರ್ ನಟನೆಯ ‘ಭಜರಂಗಿ 2’ ಜೀ5 ಒಟಿಟಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಎ ಹರ್ಷ ನಿರ್ದೇಶನದ ಈ ಚಿತ್ರ ಅಕ್ಟೋಬರ್ 29ರಂದು ಚಿತ್ರಮಂದಿರಗಳಲ್ಲಿ ತೆರೆ ಕಂಡಿತ್ತು. ಈ ಚಿತ್ರದಲ್ಲಿ ನಾಯಕಿಯಾಗಿ ಭಾವನಾ ಮೆನನ್​ ಅಭಿನಯಿಸಿದ್ದಾರೆ. ಭಜರಂಗಿ ಲೋಕಿ, ಶ್ರುತಿ, ಶಿವರಾಜ್​ ಕೆ.ಆರ್​. ಪೇಟೆ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಈ ಸಿನಿಮಾಗೆ ಖ್ಯಾತ ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

‘ಭಜರಂಗಿ 2’ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ಗೆ ಅರ್ಪಿಸಿದ ಶಿವರಾಜ್​ಕುಮಾರ್​

Year Ender 2021: ಈ ವರ್ಷ ಮದುವೆ ಆದ ಸ್ಯಾಂಡಲ್​ವುಡ್​ ಜೋಡಿಗಳ ಬಗ್ಗೆ ಇಲ್ಲಿದೆ ಮಾಹಿತಿ

ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ