AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಭಾವನೆ ಇಲ್ಲದೆ ನಂದಿನಿ ಬ್ರ್ಯಾಂಡ್ ರಾಯಭಾರಿ: ತ್ಯಾಗವಲ್ಲ, ಕರ್ತವ್ಯ ಎಂದ ಶಿವರಾಜ್ ಕುಮಾರ್

KMF Nandini: ನಂದಿನಿ ಉತ್ಪನ್ನಗಳ ರಾಯಭಾರಿ ಆಗಿರುವ ಶಿವರಾಜ್ ಕುಮಾರ್, ಉಚಿತವಾಗಿ ಪ್ರಚಾರ ಮಾಡುತ್ತಿರುವುದು ತ್ಯಾಗವೇನಲ್ಲ, ಅದು ಕರ್ತವ್ಯ ಎಂದಿದ್ದಾರೆ.

ಸಂಭಾವನೆ ಇಲ್ಲದೆ ನಂದಿನಿ ಬ್ರ್ಯಾಂಡ್ ರಾಯಭಾರಿ: ತ್ಯಾಗವಲ್ಲ, ಕರ್ತವ್ಯ ಎಂದ ಶಿವರಾಜ್ ಕುಮಾರ್
ಶಿವರಾಜ್ ಕುಮಾರ್
ಮಂಜುನಾಥ ಸಿ.
|

Updated on: Aug 01, 2023 | 8:39 PM

Share

ರಾಜ್ಯದ ಹೆಮ್ಮೆಯ ಬ್ರ್ಯಾಂಡ್​ ಆಗಿರುವ ನಂದಿನಿಗೆ (Nandini) ರಾಯಭಾರಿಯಾಗಿ ನಟ ಶಿವರಾಜ್ ಕುಮಾರ್ (Shiva Rajkumar) ಅವರನ್ನು ಕೆಎಂಎಫ್ ಆಯ್ಕೆ ಮಾಡಿದೆ. ಡಾ ರಾಜ್​ಕುಮಾರ್ ಮೊದಲಿಗೆ ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿದ್ದರು, ಆ ನಂತರದಲ್ಲಿ ನಟ ಪುನೀತ್ ರಾಜ್​ಕುಮಾರ್ ಅವರು ನಂದಿನಿ ಬ್ರ್ಯಾಂಡ್​ನ ರಾಯಭಾರಿ ಆಗಿದ್ದರು. ಇದೀಗ ನಟ ಶಿವರಾಜ್ ಕುಮಾರ್ ಅವರು ರಾಯಭಾರಿ ಆಗಿದ್ದಾರೆ. ಈ ಹೊಸ ಜವಾಬ್ದಾರಿ ಕುರಿತಾಗಿ ನಟ ಶಿವರಾಜ್ ಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ.

”ನಮ್ಮ ಕುಟುಂಬಕ್ಕೆ ಮತ್ತೊಮ್ಮೆ ಈ ಅವಕಾಶ ಬಂದಿರುವುದಕ್ಕೆ ನಾನು ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ನಂದಿನಿ ರಾಯಭಾರಿ ಆಗಿರುವ ಬಗ್ಗೆ ಬಹಳ ಖುಷಿ ಇದೆ. ಕೆಎಂಎಫ್ ನಮ್ಮ ಕುಟುಂಬ ಮೇಲಿಟ್ಟಿರುವ ಗೌರವದ ಬಗ್ಗೆ ಖುಷಿ ಇದೆ. ಇದು ರೈತರಿಗೆ ಸಂಬಂಧಿಸಿದ ವಿಷಯ, ರೈತರಿಗೆ ಪರೋಕ್ಷವಾಗಿ ಸಹಾಯ ಮಾಡುತ್ತಿರುವ ಬಗ್ಗೆ ಇನ್ನೂ ಹೆಚ್ಚಿನ ಖುಷಿ ಇದೆ. ರೈತರಿಗೆ ಏನು ಮಾಡಬೇಕಿದೆಯೋ ಅದನ್ನು ಮಾಡಲೇ ಬೇಕು” ಎಂದಿದ್ದಾರೆ ಶಿವರಾಜ್ ಕುಮಾರ್.

”ನಂದಿನಿ ಉತ್ಪನ್ನಗಳಿಗೆ ಅದರದ್ದೇ ಆದ ಬೇಡಿಕೆ ಇದೆ. ಈಗಾಗಲೇ ದೇಶದಾದ್ಯಂತ ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿವೆ. ಆ ಬೇಡಿಕೆಯನ್ನು ಜೆನ್ಯೂನ್ ಆಗಿ ಹೆಚ್ಚಳ ಮಾಡುವ ಪ್ರಯತ್ನ ಆಗಬೇಕಿದೆ. ಫೋಟೊ ಕೊಡೋದು, ಜಾಹೀರಾತು ಶೂಟಿಂಗ್​ನಲ್ಲಿ ಭಾಗವಹಿಸುವುದು ಮಾತ್ರವೇ ಅಲ್ಲದೆ ಅವಕಾಶ ಸಿಕ್ಕಾಗಲೆಲ್ಲ ಕೆಎಂಎಫ್​ಗೆ ಪ್ಲ್ಯಾಂಟ್​ಗಳಿಗೆ ಭೇಟಿ ನೀಡುವ ಯೋಚನೆಯೂ ನನಗೆ ಇದೆ. ನಮ್ಮ ಮನೆಯಲ್ಲೂ ನಂದಿನಿ ತುಪ್ಪ ಬಳಸುತ್ತೇವೆ, ಮನೆಯ ಬಳಿಯೇ ಒಂದು ಪಾರ್ಲರ್ ಸಹ ಇದೆ” ಎಂದಿದ್ದಾರೆ.

ಇದನ್ನೂ ಓದಿ:Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್

”ಮೊದಲ ಬಾರಿಗೆ ಅಪ್ಪಾಜಿಯವರು ಕೆಎಂಎಫ್ ಪರವಾಗಿ ಕಾರ್ಯಕ್ರಮ ಮಾಡಿದಾಗ ವೇದಿಕೆಯಲ್ಲಿ ನಾನೂ ಇದ್ದೆ. ಅಂದು ನಂದಿನಿ ಹಾಲು ಕುಡಿದು ಬಹಳ ಚೆನ್ನಾಗಿದೆ ಎಂದು ನನಗೂ ಕುಡಿಯಲು ನೀಡಿದ್ದರು ಅದು ಚೆನ್ನಾಗಿ ನೆನಪಿದೆ. ಇತ್ತೀಚೆಗೆ ಆ ವಿಡಿಯೋ ವೈರಲ್ ಆಗಿತ್ತು. ಜನ, ಸರ್ಕಾರಗಳು ನಮ್ಮ ಮೇಲಿಟ್ಟಿರುವ ಪ್ರೀತಿಯಿಂದ ನಂದಿನಿ ಪ್ರಾಡೆಕ್ಟ್​ನ ರಾಯಭಾರಿ ಆಗುವ ಅವಕಾಶ ಪದೇ-ಪದೇ ನಮಗೆ ಸಿಗುತ್ತಿದೆ. ಜಾಹೀರಾತು ಶೂಟ್ ಮಾಡಲು ಯೋಜನೆ ಹಾಕಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಚಿತ್ರೀಕರಣ ಆಗಲಿದೆ” ಎಂದರು ಶಿವಣ್ಣ.

ಅಪ್ಪು ಹಾಗೂ ಅಪ್ಪಾಜಿ ರೀತಿಯಲ್ಲಿಯೇ ಸಂಭಾವನೆ ಪಡೆಯದೇ ನಂದಿನಿ ಪ್ರಾಡೆಕ್ಟ್​ನ ರಾಯಭಾರಿ ಆಗುತ್ತಿರುವ ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್, ”ಸಂಭಾವನೆ ಇಲ್ಲದೆ ರಾಯಭಾರಿ ಆಗಿರುವುದು ದೊಡ್ಡ ತ್ಯಾಗ ಏನೂ ಅಲ್ಲ. ಅದು ನಾವು ಮಾಡಬೇಕಾದ ಕರ್ತವ್ಯ. ಏಕೆಂದರೆ ಇದು ರೈತರ ವಿಷಯ. ಸಂಭಾವನೆ ಎಲ್ಲ ಇಲ್ಲಿ ವಿಷಯ ಅಲ್ಲ. ರೈತರ ವಿಷಯ ಬಂದಾಗ ಮುಂದೆ ನಿಂತು ಕೆಲಸ ಮಾಡಬೇಕು, ಅದು ತ್ಯಾಗ ಎಂದೇನೂ ಅಲ್ಲ” ಎಂದಿದ್ದಾರೆ ಶಿವರಾಜ್ ಕುಮಾರ್.

ಕೆಎಂಎಫ್​ನ ನಂದಿನಿ ಉತ್ಪನ್ನಗಳಿಗೆ ಮೊದಲಿಗೆ ಡಾ ರಾಜ್​ಕುಮಾರ್ ಅವರು ಪ್ರಚಾರ ರಾಯಭಾರಿ ಆಗಿದ್ದರು. ಆ ನಂತರ ಪುನೀತ್ ರಾಜ್​ಕುಮಾರ್ ಅವರು ರಾಯಭಾರಿ ಆಗಿದ್ದರು. ಇದೀಗ ಶಿವರಾಜ್ ಕುಮಾರ್ ಅವರು ರಾಯಭಾರಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ