AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀರೋ ಆಗಿ ಎಂಟ್ರಿ ಕೊಟ್ಟ ವಿಲನ್ ಪುತ್ರ, ಆರ್ಮುಗಂ ಸಾಹಸಕ್ಕೆ ಶಿವಣ್ಣನ ಬೆಂಬಲ

ಹೀರೋಗಳ ಮಕ್ಕಳು ಹೀರೋಗಳಾದ ಹಲಾವರು ಉದಾಹರಣೆಗಳಿವೆ. ವಿಲನ್​ ಮಕ್ಕಳು ಸಹ ಬಹುತೇಕ ಹೀರೋಗಳೇ ಆಗುವುದು. ದರ್ಶನ್, ವಿನೋದ್ ಪ್ರಭಾಕರ್ ಇನ್ನೂ ಕೆಲವು ಉದಾಹರಣೆ ಕನ್ನಡದಲ್ಲಿವೆ. ಇದೇ ಸಾಲಿಗೆ ಈಗ ಮತ್ತೊಬ್ಬ ನಟ ಸೇರಿಕೊಳ್ಳಲಿದ್ದಾನೆ.

ಹೀರೋ ಆಗಿ ಎಂಟ್ರಿ ಕೊಟ್ಟ ವಿಲನ್ ಪುತ್ರ, ಆರ್ಮುಗಂ ಸಾಹಸಕ್ಕೆ ಶಿವಣ್ಣನ ಬೆಂಬಲ
ಮಂಜುನಾಥ ಸಿ.
|

Updated on: Sep 08, 2024 | 7:09 AM

Share

ಹೀರೋಗಳ ಮಕ್ಕಳು ಹೀರೋಗಳೇ ಆಗುತ್ತಾರೆ. ಆದರೆ ವಿಲನ್ ಮಕ್ಕಳು ಮಕ್ಕಳು ವಿಲನ್ ಆಗಬೇಕೆಂಬ ನಿಯಮವಿಲ್ಲ. ಈಗಾಗಲೇ ಕೆಲವು ಪ್ರಮುಖ ವಿಲನ್​ಗಳ ಮಕ್ಕಳು ನಾಯಕ ನಟರಾಗಿದ್ದಾರೆ. ನಾಯಕ ನಟರಾಗಿ ಸಖತ್ ಮಿಂಚಿದ್ದಾರೆ. ನಟ ದರ್ಶನ್, ವಿನೋದ್ ಪ್ರಭಾಕರ್, ಇನ್ನೂ ಕೆಲವು ಉದಾಹರಣೆಗಳನ್ನು ಕನ್ನಡ ಚಿತ್ರರಂಗದಲ್ಲಿ ಹೆಸರಿಸಬಹುದು. ಇದೀಗ ಮತ್ತೊಬ್ಬ ಪಕ್ಕಾ ವಿಲನ್ ಪುತ್ರ ನಾಯಕ ನಟನಾಗಿ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರಕ್ಕೆ ಅವರ ತಂದೆಯೇ ನಿರ್ದೇಶನ ಮಾಡಲಿದ್ದಾರೆ.

‘ಆರ್ಮುಗಂ’ ಪಾತ್ರದಿಂದ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಬಹಳ ಹತ್ತಿರವಾದ ಆ ಬಳಿಕ ಕನ್ನಡ ಸಿನಿಮಾಗಳ ಖಾಯಂ ವಿಲನ್ ಆಗಿ ಉಳಿದ ರವಿಶಂಕರ್ ಪುತ್ರ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ರವಿಶಂಕರ್ ಪುತ್ರ ಅದ್ವೈ ನಟನೆಯ ಮೊದಲ ಸಿನಿಮಾ ಚಿತ್ರೀಕರಣ ಚಾಲ್ತಿಯಲ್ಲಿದ್ದು, ವಿಶೇಷವೆಂದರೆ ಮಗನ ಮೊದಲ ಸಿನಿಮಾಕ್ಕೆ ಅಪ್ಪನೇ ಆಕ್ಷನ್-ಕಟ್ ಹೇಳುತ್ತಿದ್ದಾರೆ. ಅದ್ವೈ ನಟನೆಯ ಮೊದಲ ಸಿನಿಮಾದ ಪೋಸ್ಟರ್​ ಗಣೇಶ ಹಬ್ಬಕ್ಕೆ ಬಿಡುಗಡೆ ಆಗಿದೆ.

ಇದನ್ನೂ ಓದಿ:ಪ್ರೀ-ಲುಕ್ ಮೂಲಕ ಗಮನ ಸೆಳೆದ ‘ಸುಬ್ರಹ್ಮಣ್ಯ’: ರವಿಶಂಕರ್​ ಪುತ್ರನ ಪ್ಯಾನ್​ ಇಂಡಿಯಾ ಸಿನಿಮಾ

‘ಸುಬ್ರಹ್ಮಣ್ಯ’ ಹೆಸರಿನ ಸಿನಿಮಾದಲ್ಲಿ ಅದ್ವೈ ನಟಿಸುತ್ತಿದ್ದು, ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ. ಸಿನಿಮಾದ ಪೋಸ್ಟರ್ ಅನ್ನು ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ನಿನ್ನೆಯಷ್ಟೆ ಬಿಡುಗಡೆ ಮಾಡಿದರು. ಪೋಸ್ಟರ್, ಫಸ್ಟ್ ಲುಕ್ ನೋಡಿದರೆ ಇದೊಂದು ಸಾಹಸಮಯ ಕತೆ ಹೊಂದಿರುವ ಸಿನಿಮಾ ಎಂಬುದು ಖಾತ್ರಿಯಾಗುತ್ತಿದೆ. ಅರಣ್ಯ, ನಿಗೂಢ ಪ್ರವೇಶ ದ್ವಾರ ಇನ್ನೂ ಕೆಲವು ಫ್ಯಾಂಟಸಿ ಎಲಿಮೆಂಟ್​ಗಳು ಕಣ್ಣಿಗೆ ಕಾಣುತ್ತವೆ. ಅಂದಹಾಗೆ ಸಿನಿಮಾದ 60% ಚಿತ್ರೀಕರಣ ಪೂರ್ತಿಯಾಗಿದೆ, ಇನ್ನುಳಿದ ಚಿತ್ರೀಕರಣ ಆದಷ್ಟು ಬೇಗ ಮುಗಿಸಿ ಸಿನಿಮಾ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದಾರೆ ರವಿಶಂಕರ್.

ರವಿಶಂಕರ್​ಗೆ ಸಿನಿಮಾ ನಿರ್ದೇಶನ ಹೊಸದೇನೂ ಅಲ್ಲ. ಈ ಹಿಂದೆ ಮಾಲಾಶ್ರೀ ನಟಿಸಿರುವ ಸೂಪರ್ ಹಿಟ್ ಸಿನಿಮಾ ‘ದುರ್ಗಿ’ ನಿರ್ದೇಶನ ಮಾಡಿದ್ದರು. ಈಗ ಮತ್ತೊಮ್ಮೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಗಟ್ಟಿ ತಾಂತ್ರಿಕ ತಂಡವನ್ನೇ ರವಿಶಂಕರ್ ಸಿನಿಮಾಕ್ಕೆ ಆಯ್ದುಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ, ವಿಘ್ನೇಷ್ ರಾಜ್ ಕ್ಯಾಮೆರಾ, ಎಡಿಟಿಂಗ್​ಗೆ ವಿಜಯ್ ಕುಮಾರ್ ಇನ್ನೂ ಕೆಲವು ಉತ್ತಮ ತಂತ್ರಜ್ಞರು ಈ ಸಿನಿಮಾಕ್ಕೆ ಒಂದಾಗುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು