AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹೊಸ ಸರ್ಕಾರದಿಂದ ಶಿವರಾಜ್ ಕುಮಾರ್ ಅವರಿಗಿರುವ ನಿರೀಕ್ಷೆ ಇಷ್ಟೆ

Shiva Rajkumar: ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಿವರಾಜ್ ಕುಮಾರ್, ಹೊಸ ಸರ್ಕಾರದಿಂದ ತಾವು ಬಯಸುತ್ತಿರುವುದು ಏನನ್ನು ಎಂದು ಮಾಧ್ಯಮಗಳ ಮುಂದೆ ಹೇಳಿದರು.

ಕರ್ನಾಟಕದ ಹೊಸ ಸರ್ಕಾರದಿಂದ ಶಿವರಾಜ್ ಕುಮಾರ್ ಅವರಿಗಿರುವ ನಿರೀಕ್ಷೆ ಇಷ್ಟೆ
ಶಿವಣ್ಣ
ಮಂಜುನಾಥ ಸಿ.
|

Updated on: May 20, 2023 | 3:47 PM

Share

ಸಿಎಂ ಸಿದ್ದರಾಮಯ್ಯ (Siddaramaiah) ಕರ್ನಾಟಕ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಇಂದು (ಮೇ 20) ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ, ತಮಿಳುನಾಡು ಸಿಎಂ ಸ್ಟಾಲಿನ್, ಇನ್ನೂ ಹಲವು ರಾಜಕೀಯ ಮುಖಂಡರು, ಧುರಿಣರು ಹಾಜರಿದ್ದ ಅದ್ಧೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ಹಾಗೂ ಅವರೊಟ್ಟಿಗೆ ಡಿಕೆ ಶಿವಕುಮಾರ್ ಇನ್ನಿತರೆ ಕೆಲವು ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಸಮಾರಂಭದಲ್ಲಿ ಕೆಲವು ಸಿನಿಮಾ ತಾರೆಯರು ಸಹ ಭಾಗಿಯಾಗಿದ್ದರು. ನಟ ಶಿವರಾಜ್ ಕುಮಾರ್ (Shiva Rajkumar), ಗೀತಾ ಶಿವರಾಜ್​ಕುಮಾರ್ (Geetha Shivarajkumar) ಸಹ ಭಾಗಿಯಾಗಿ ನೂತನ ಸಿಎಂ ಹಾಗೂ ಸಚಿವರಿಗೆ ಶುಭ ಹಾರೈಸಿದರು.

ಹೊಸ ಸರ್ಕಾರ ರಚನೆ ಆಗಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವರಾಜ್​ಕುಮಾರ್, ”ಜನರು ಬದಲಾವಣೆ ಬೇಕೆಂಬ ಆಸೆಯಿಂದ ಮತ ಹಾಕಿದ್ದಾರೆ ಅಂತೆಯೇ ಬದಲಾವಣೆ ಆಗಿದೆ. ಜನರ ಆಶಯಗಳಿಗೆ ತಕ್ಕಂತೆ ಕೆಲಸ ಮಾಡಲು ದೇವರು ಅವರಿಗೆ (ಸರ್ಕಾರಕ್ಕೆ) ಶಕ್ತಿ ಕೊಡಲಿ, ಎಲ್ಲರೂ ನೂತನ ಸರ್ಕಾರಕ್ಕೆ ಬೆಂಬಲ, ಸಹಕಾರ ನೀಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ” ಎಂದಿದ್ದಾರೆ.

ಮುಂದುವರೆದು, ”ಜನರು ದೊಡ್ಡದಾಗಿ ಬೆಂಬಲ ನೀಡಿದ್ದಾರೆ. ಈಗ ಆಯ್ಕೆ ಆಗಿರುವವರು ಸಹ ಜನರು ನೀಡಿರುವ ಬೆಂಬಲಕ್ಕೆ ತಕ್ಕಂತೆ ಸರ್ಕಾರ ನಡೆಸಬೇಕು. ಜನಗಳಿಗೆ ಒಳ್ಳೆಯದಾಗಬೇಕು ಅಷ್ಟೆ” ಎಂದ ಶಿವಣ್ಣ, ತಾವು ಈ ಬಾರಿ ಪ್ರಚಾರ ಮಾಡಿರುವ ಬಗ್ಗೆ ಮಾತನಾಡಿ, ”ನನ್ನದೇನು ದೊಡ್ಡ ಕಾಣಿಕೆ ಇಲ್ಲ. ಸಣ್ಣ ಸೇವೆಯಷ್ಟೆ. ಜನರು ಕೆಲವು ನಿರೀಕ್ಷೆಗಳಿಟ್ಟುಕೊಂಡು ಸರ್ಕಾರ ತಂದಿದ್ದಾರೆ. ಆ ನಿರೀಕ್ಷೆಗಳನ್ನು ಈಡೇರಿಸಿದರೆ ಸಾಕು” ಎಂದಿದ್ದಾರೆ.

ಐದು ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಶಿವಣ್ಣ, ”ನನಗೆ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚು ಗೊತ್ತಾಗಲ್ಲ. ಆದರೆ ಜನರಿಗೆ ಒಳ್ಳೆಯದಾಗಬೇಕು ಆ ರೀತಿಯ ಕೆಲಸಗಳನ್ನು ಸರ್ಕಾರ ಖಂಡಿತ ಮಾಡುತ್ತದೆ ಎಂಬ ವಿಶ್ವಾಸವಿದೆ. ಜನರ ನಿರೀಕ್ಷೆಗಳನ್ನು ಈಡೇರಿಸುವ ಶಕ್ತಿಯನ್ನು ದೇವರು ನೀಡಲಿ” ಎಂಬುದು ನನ್ನ ಹಾರೈಕೆ ಎಂದಿದ್ದಾರೆ.

ಶಿವರಾಜ್ ಕುಮಾರ್ ಅವರು ಈ ಬಾರಿ ಸಕ್ರಿಯವಾಗಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದರು. ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ ಸಹೋದರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಅವರ ಪರವಾಗಿ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದರು. ಆ ಬಳಿಕ ಇನ್ನೂ ಕೆಲವು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಶಿವಣ್ಣ-ಗೀತಕ್ಕ ಪ್ರಚಾರ ಮಾಡಿದ್ದರು. ಸಿದ್ದರಾಮಯ್ಯ ಅವರ ಪರವಾಗಿಯೂ ವರುಣಾನಲ್ಲಿ ಶಿವಣ್ಣ ಪ್ರಚಾರ ಮಾಡಿದ್ದರು.

ಶಿವಣ್ಣ ಪ್ರಚಾರ ಮಾಡಿದ ಹಲವು ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಮಧು ಬಂಗಾರಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಬೇಳೂರು ಗೋಪಾಲಕೃಷ್ಣ, ಭೀಮಣ್ಣ ನಾಯಕ್, ಸಿದ್ದರಾಮಯ್ಯ ಅವರುಗಳು ಗೆದ್ದಿದ್ದಾರೆ. ಜಗದೀಶ್ ಶೆಟ್ಟಿ, ಅಶೋಖ್ ಖೇಣಿ, ಕಿಮ್ಮನೆ ರತ್ನಾಕರ್, ಸತೀಶ್ ಕೃಷ್ಣ ಸೈಲ್ ಸೋತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!